AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು

ಕೊಡಿಗೆಹಳ್ಳಿ ಸಿಗ್ನಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕಾರು ಗುದ್ದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಕ್ಕೂರು ಸಿಗ್ನಲ್ನಲ್ಲಿ ಪ್ರವೀಣ್ ಕಾರು ನಿಲ್ಲಿಸಿದ್ದರಂತೆ. ಈ ವೇಳೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಗುದ್ದಿದೆಯಂತೆ. ಮತ್ತೆ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಅಡ್ಡಗಟ್ಟಿ ಹಲ್ಲೆ ಮಾಡಿದ್ರು ಎಂದು ಪ್ರವೀಣ್ ಆರೋಪಿಸಿದ್ದಾರೆ.

ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು
ಕೃಷ್ಣಭೈರೇಗೌಡ
TV9 Web
| Edited By: ಆಯೇಷಾ ಬಾನು|

Updated on: Aug 15, 2021 | 7:08 AM

Share

ಬೆಂಗಳೂರು: ಕಾರಿಗೆ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಅಪರಿಚಿತರಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ಮೇಲೆ ಬೆಂಗಳೂರಿನ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಹಲ್ಲೆ ಮಾಡಲಾಗಿದೆಯಂತೆ.

ಕೊಡಿಗೆಹಳ್ಳಿ ಸಿಗ್ನಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕಾರು ಗುದ್ದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಕ್ಕೂರು ಸಿಗ್ನಲ್ನಲ್ಲಿ ಪ್ರವೀಣ್ ಕಾರು ನಿಲ್ಲಿಸಿದ್ದರಂತೆ. ಈ ವೇಳೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಗುದ್ದಿದೆಯಂತೆ. ಮತ್ತೆ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಅಡ್ಡಗಟ್ಟಿ ಹಲ್ಲೆ ಮಾಡಿದ್ರು ಎಂದು ಪ್ರವೀಣ್ ಆರೋಪಿಸಿದ್ದಾರೆ.

ಹಾಗೂ ಈ ವೇಳೆ ಅಡ್ಡ ಬಂದ ಪೊಲೀಸರ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್, ಕೃಷ್ಣ ಭೈರೇಗೌಡ ಕಡೆಯವರು ಎಂದು ಹೇಳಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ಬಿಜೆಪಿಯಲ್ಲಿ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿದ್ದೇನೆ. ಇದನ್ನು ಸಹಿಸಲು ಆಗದೆ ಹಲ್ಲೆ ಮಾಡಿದ್ದಾರೆಂದು ತಿಳಿಸಿದ್ದಾರೆ.

ಕೊಡಿಗೆಹಳ್ಳಿ ಠಾಣೆಗೆ ದೂರು ಕೊಟ್ಟರೂ ಸ್ವೀಕರಿಸುತ್ತಿಲ್ಲ. ಪೊಲೀಸರ ಮೇಲೆ ಕೃಷ್ಣ ಭೈರೇಗೌಡ ಒತ್ತಡ ಹಾಕುತ್ತಿದ್ದಾರೆ. ಪೊಲೀಸರು ದೂರು ಸ್ವೀಕರಿಸದಿದ್ದರೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇವೆ ಎಂದು ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ತಿಳಿಸಿದ್ದಾರೆ. ಈ ಗಲಾಟೆಗೆ ನಿಜ ಕಾರಣ ಏನು ಅನ್ನೋದು ಮಾತ್ರ ಇನ್ನೂ ನಿಗೂಢ. ಸದ್ಯ ಗಾಯಾಳು ಪ್ರವೀಣ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಪೃಥ್ವಿ ಶಾ ಮತ್ತು ಸೂರ್ಯಕುಮಾರ ಯಾದವ್ ಕ್ವಾರಂಟೀನ್ ಅವಧಿ ಮುಗಿದಿದೆ, ಮುಂದಿನ ಟೆಸ್ಟ್​ಗಳ ಆಯ್ಕೆಗೆ ಇಬ್ಬರೂ ಲಭ್ಯ!

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು