AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು

ಕೊಡಿಗೆಹಳ್ಳಿ ಸಿಗ್ನಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕಾರು ಗುದ್ದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಕ್ಕೂರು ಸಿಗ್ನಲ್ನಲ್ಲಿ ಪ್ರವೀಣ್ ಕಾರು ನಿಲ್ಲಿಸಿದ್ದರಂತೆ. ಈ ವೇಳೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಗುದ್ದಿದೆಯಂತೆ. ಮತ್ತೆ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಅಡ್ಡಗಟ್ಟಿ ಹಲ್ಲೆ ಮಾಡಿದ್ರು ಎಂದು ಪ್ರವೀಣ್ ಆರೋಪಿಸಿದ್ದಾರೆ.

ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು
ಕೃಷ್ಣಭೈರೇಗೌಡ
TV9 Web
| Edited By: |

Updated on: Aug 15, 2021 | 7:08 AM

Share

ಬೆಂಗಳೂರು: ಕಾರಿಗೆ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಅಪರಿಚಿತರಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ಮೇಲೆ ಬೆಂಗಳೂರಿನ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಹಲ್ಲೆ ಮಾಡಲಾಗಿದೆಯಂತೆ.

ಕೊಡಿಗೆಹಳ್ಳಿ ಸಿಗ್ನಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕಾರು ಗುದ್ದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಕ್ಕೂರು ಸಿಗ್ನಲ್ನಲ್ಲಿ ಪ್ರವೀಣ್ ಕಾರು ನಿಲ್ಲಿಸಿದ್ದರಂತೆ. ಈ ವೇಳೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಗುದ್ದಿದೆಯಂತೆ. ಮತ್ತೆ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಅಡ್ಡಗಟ್ಟಿ ಹಲ್ಲೆ ಮಾಡಿದ್ರು ಎಂದು ಪ್ರವೀಣ್ ಆರೋಪಿಸಿದ್ದಾರೆ.

ಹಾಗೂ ಈ ವೇಳೆ ಅಡ್ಡ ಬಂದ ಪೊಲೀಸರ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್, ಕೃಷ್ಣ ಭೈರೇಗೌಡ ಕಡೆಯವರು ಎಂದು ಹೇಳಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ಬಿಜೆಪಿಯಲ್ಲಿ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿದ್ದೇನೆ. ಇದನ್ನು ಸಹಿಸಲು ಆಗದೆ ಹಲ್ಲೆ ಮಾಡಿದ್ದಾರೆಂದು ತಿಳಿಸಿದ್ದಾರೆ.

ಕೊಡಿಗೆಹಳ್ಳಿ ಠಾಣೆಗೆ ದೂರು ಕೊಟ್ಟರೂ ಸ್ವೀಕರಿಸುತ್ತಿಲ್ಲ. ಪೊಲೀಸರ ಮೇಲೆ ಕೃಷ್ಣ ಭೈರೇಗೌಡ ಒತ್ತಡ ಹಾಕುತ್ತಿದ್ದಾರೆ. ಪೊಲೀಸರು ದೂರು ಸ್ವೀಕರಿಸದಿದ್ದರೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇವೆ ಎಂದು ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ತಿಳಿಸಿದ್ದಾರೆ. ಈ ಗಲಾಟೆಗೆ ನಿಜ ಕಾರಣ ಏನು ಅನ್ನೋದು ಮಾತ್ರ ಇನ್ನೂ ನಿಗೂಢ. ಸದ್ಯ ಗಾಯಾಳು ಪ್ರವೀಣ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಪೃಥ್ವಿ ಶಾ ಮತ್ತು ಸೂರ್ಯಕುಮಾರ ಯಾದವ್ ಕ್ವಾರಂಟೀನ್ ಅವಧಿ ಮುಗಿದಿದೆ, ಮುಂದಿನ ಟೆಸ್ಟ್​ಗಳ ಆಯ್ಕೆಗೆ ಇಬ್ಬರೂ ಲಭ್ಯ!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್