AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು

ಕೊಡಿಗೆಹಳ್ಳಿ ಸಿಗ್ನಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕಾರು ಗುದ್ದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಕ್ಕೂರು ಸಿಗ್ನಲ್ನಲ್ಲಿ ಪ್ರವೀಣ್ ಕಾರು ನಿಲ್ಲಿಸಿದ್ದರಂತೆ. ಈ ವೇಳೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಗುದ್ದಿದೆಯಂತೆ. ಮತ್ತೆ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಅಡ್ಡಗಟ್ಟಿ ಹಲ್ಲೆ ಮಾಡಿದ್ರು ಎಂದು ಪ್ರವೀಣ್ ಆರೋಪಿಸಿದ್ದಾರೆ.

ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು
ಕೃಷ್ಣಭೈರೇಗೌಡ
TV9 Web
| Edited By: |

Updated on: Aug 15, 2021 | 7:08 AM

Share

ಬೆಂಗಳೂರು: ಕಾರಿಗೆ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಅಪರಿಚಿತರಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ಮೇಲೆ ಬೆಂಗಳೂರಿನ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಹಲ್ಲೆ ಮಾಡಲಾಗಿದೆಯಂತೆ.

ಕೊಡಿಗೆಹಳ್ಳಿ ಸಿಗ್ನಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕಾರು ಗುದ್ದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಕ್ಕೂರು ಸಿಗ್ನಲ್ನಲ್ಲಿ ಪ್ರವೀಣ್ ಕಾರು ನಿಲ್ಲಿಸಿದ್ದರಂತೆ. ಈ ವೇಳೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಗುದ್ದಿದೆಯಂತೆ. ಮತ್ತೆ ಕೊಡಿಗೆಹಳ್ಳಿ ಸಿಗ್ನಲ್ ಬಳಿ ಅಡ್ಡಗಟ್ಟಿ ಹಲ್ಲೆ ಮಾಡಿದ್ರು ಎಂದು ಪ್ರವೀಣ್ ಆರೋಪಿಸಿದ್ದಾರೆ.

ಹಾಗೂ ಈ ವೇಳೆ ಅಡ್ಡ ಬಂದ ಪೊಲೀಸರ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್, ಕೃಷ್ಣ ಭೈರೇಗೌಡ ಕಡೆಯವರು ಎಂದು ಹೇಳಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ಬಿಜೆಪಿಯಲ್ಲಿ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿದ್ದೇನೆ. ಇದನ್ನು ಸಹಿಸಲು ಆಗದೆ ಹಲ್ಲೆ ಮಾಡಿದ್ದಾರೆಂದು ತಿಳಿಸಿದ್ದಾರೆ.

ಕೊಡಿಗೆಹಳ್ಳಿ ಠಾಣೆಗೆ ದೂರು ಕೊಟ್ಟರೂ ಸ್ವೀಕರಿಸುತ್ತಿಲ್ಲ. ಪೊಲೀಸರ ಮೇಲೆ ಕೃಷ್ಣ ಭೈರೇಗೌಡ ಒತ್ತಡ ಹಾಕುತ್ತಿದ್ದಾರೆ. ಪೊಲೀಸರು ದೂರು ಸ್ವೀಕರಿಸದಿದ್ದರೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇವೆ ಎಂದು ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ತಿಳಿಸಿದ್ದಾರೆ. ಈ ಗಲಾಟೆಗೆ ನಿಜ ಕಾರಣ ಏನು ಅನ್ನೋದು ಮಾತ್ರ ಇನ್ನೂ ನಿಗೂಢ. ಸದ್ಯ ಗಾಯಾಳು ಪ್ರವೀಣ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಪೃಥ್ವಿ ಶಾ ಮತ್ತು ಸೂರ್ಯಕುಮಾರ ಯಾದವ್ ಕ್ವಾರಂಟೀನ್ ಅವಧಿ ಮುಗಿದಿದೆ, ಮುಂದಿನ ಟೆಸ್ಟ್​ಗಳ ಆಯ್ಕೆಗೆ ಇಬ್ಬರೂ ಲಭ್ಯ!

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!