AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ.

ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ
ಸಿಸಿಬಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 28, 2022 | 12:34 PM

Share

ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ಲೋ ಹುಕ್ಕಾ ಬಾರ್​​​ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಹುಕ್ಕಾ ಬಾರ್​​​​ನ ಪರಿಕರಗಳು, 80 ಸಾವಿರ ಹುಕ್ಕಾ ಪ್ಲೇವರ್ ಮತ್ತು​​​ 6,050 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ. ಹುಕ್ಕಾ ಬಾರ್ ಮಾಲೀಕರು, ಮ್ಯಾನೇಜರ್​ ವಿರುದ್ಧ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹೃದಯಾಘಾತದಿಂದ ಕರ್ತವ್ಯ ನಿರತ BSF ಯೋಧ ಸಾವು

ಧಾರವಾಡ: ಹೃದಯಾಘಾತದಿಂದ ಕರ್ತವ್ಯ ನಿರತ ಧಾರವಾಡದ BSF ಯೋಧ ಸಾವನ್ನಪ್ಪಿರುವಂತಹ ಘಟನೆ ಪಶ್ಚಿಮ ಬಂಗಾಳದ ಕುಚ್ ಬಿಹಾರ್​​ನಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಗಂಗಾಧರಯ್ಯ ಹಿರೇಮಠ(49) ಮೃತ ಯೋಧ. ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಯೋಧ. ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸ್ತಿದ್ದ ಯೋಧ ಗಂಗಾಧರಯ್ಯ, BSF ಬೆಟಾಲಿಯನ್ 138ರಲ್ಲಿ ಸೇವೆ ಸಲ್ಲಿಸ್ತಿದ್ದರು. 28 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ರಾತ್ರಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ: tumakur news: ಹಣ ಡಬ್ಲಿಂಗ್ ಆಸೆ ತೋರಿಸಿ ಮಹಿಳೆಯಿಂದ 9.60 ಲಕ್ಷ ರೂ. ವಂಚನೆ: ಐದು ಜನರ ಬಂಧನ

ರೈಲಿಗೆ ಸಿಲುಕಿ ವ್ಯಕ್ತಿ ಸಾವು

ನೆಲಮಂಗಲ: ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತುಮಕೂರು-ಬೆಂಗಳೂರು ರೈಲು ಮಾರ್ಗದ ದಾಬಸ್‌ಪೇಟೆ ಬಳಿ ನಡೆದಿದೆ. ದಾಬಸ್‌ಪೇಟೆ ನಿವಾಸಿ ಗಂಗಾಧರ್ (31) ಮೃತ ವ್ಯಕ್ತಿ. ಕಳೆದ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದ. ಮೃತನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳೀಯವಾಗಿ ಕ್ಯಾಂಟರ್ ಚಾಲಕನಾಗಿದ್ದ ಮೃತ ಗಂಗಾಧರ್, ಯಶವಂತಪುರ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:23 pm, Sun, 28 August 22

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್