AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯೂಟಿ, ರಜೆಗೆ ರೇಟ್ ಕಾರ್ಡ್ ಫಿಕ್ಸ್: KSRP ಅಧಿಕಾರಿಗಳ ವಿರುದ್ಧ ಹೆಡ್‌ ಕಾನ್​ಸ್ಟೇಬಲ್ ದೂರು

ಇತ್ತೀಚೆಗಷ್ಟೇ, ಮೇಲಧಿಕಾರಿಗಳು ಹಫ್ತಾ ವಸೂಲಿಗೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕಲಬುರಗಿಯಲ್ಲಿ ಕಾನ್​ಸ್ಟೇಬಲ್​ಗಳು ಆರೋಪಿಸಿದ್ದರು. ಸಿಬ್ಬಂದಿ ಆತ್ಮಹತ್ಯೆಗೂ ಯತ್ನಿಸಿದ್ದರು. ಇದೀಗ ಕೆಎಸ್‌ಆರ್‌ಪಿ ಹಿರಿಯ ಅಧಿಕಾರಿಗಳ ವಿರುದ್ಧ ಕೇಳುತ್ತಿರುವ ಲಂಚದ ಆರೋಪ ಕೇಳಿಬಂದಿದೆ.

ಡ್ಯೂಟಿ, ರಜೆಗೆ ರೇಟ್ ಕಾರ್ಡ್ ಫಿಕ್ಸ್: KSRP ಅಧಿಕಾರಿಗಳ ವಿರುದ್ಧ ಹೆಡ್‌ ಕಾನ್​ಸ್ಟೇಬಲ್ ದೂರು
ಬೇಕಾದಲ್ಲಿ ಡ್ಯೂಟಿ, ರಜೆ ಬೇಕೆಂದರೆ ಕೆಎಸ್​ಆರ್​ಪಿ ಹಿರಿಯ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿದ ಹೆಡ್​ ಕಾನ್​ಸ್ಟೇಬಲ್ (ಸಾಂದರ್ಭಿಕ ಚಿತ್ರ)
Shivaprasad B
| Updated By: Rakesh Nayak Manchi|

Updated on:Jul 22, 2023 | 11:03 PM

Share

ಬೆಂಗಳೂರು, ಜುಲೈ 22: ಇಷ್ಟ ಬಂದ ಕಡೆ ಡ್ಯೂಟಿ ಹಾಗೂ ರಜೆ ನೀಡಲು ಲಂಚ ಕೇಳುತ್ತಿರುವ ಆರೋಪ ಕೆಎಸ್‌ಆರ್‌ಪಿ (KSRP) ಹಿರಿಯ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ. ಕೂಡ್ಲು ಬಳಿಯ 9ನೇ ಬ್ಯಾಚ್‌ನ ಕೆಎಸ್​ಆರ್​ಪಿ ಹಿರಿಯ ಅಧಿಕಾರಿಗಳ ಅಧಿಕಾರ ದುರುಪಯೋಗದ ವಿರುದ್ಧ ಬೇಸತ್ತು ಹೆಡ್‌ಕಾನ್ಸ್‌ಟೇಬಲ್‌ ಓಂಕಾರಪ್ಪ ಅವರು ಎಡಿಜಿಪಿ (ADGP) ಸೀಮಂತ್ ಕುಮಾರ್ ಸಿಂಗ್‌ ಅವರಿಗೆ ದೂರು ನೀಡಿದ್ದಾರೆ.

ಕೂಡ್ಲು ಬಳಿಯ 9ನೇ ಬ್ಯಾಚ್‌ನ KSRP ಆರ್‌ಪಿಐ ರವಿ, ಆರ್‌ಎಸ್‌ಐ ಮಹಂತೇಶ್ ಬನ್ನಪ್ಪ ಗೌಡರ್ ಅವರು ಬೇಕಾದಕಡೆ ಡ್ಯೂಟಿ ನೀಡಲು ತಿಂಗಳಿಗೆ 10 ಸಾವಿರ ಲಂಚ ಕೇಳುತ್ತಿದ್ದಾರೆ. ರಜೆ ನೀಡಲು 500 ರೂ. ಕೇಳುತ್ತಿದ್ದಾರೆ ಎಂದು ಆರೋಪಿಸಿ ಹೆಡ್​ ಕಾನ್​ಸ್ಟೇಬಲ್ ಓಂಕಾರಪ್ಪ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ, ನೈಟ್ ಡ್ಯೂಟಿ ಅಥವಾ ಡೇ ಡ್ಯೂಟಿ ಬೇಕೆಂದರೂ ಲಂಚ ನೀಡಬೇಕು. ಈ ಹಣವನ್ನು ಗೂಗಲ್‌ಪೇ, ಫೋನ್‌ಪೇ ಮೂಲಕ ತೆಗೆದುಕೊಳ್ಳುತ್ತಿದ್ದಾರೆ ಎಂದು ಓಂಕಾರಪ್ಪ ಆರೋಪಿಸಿದ್ದಾರೆ.

ಇದನ್ನೂ ಓದಿ: Kolar News: ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ; ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು

ಇತ್ತೀಚೆಗಷ್ಟೇ, ಹಿರಿಯ ಪೊಲೀಸ್ ಅಧಿಕಾರಿಗಳು, ಮೇಲಧಿಕಾರಿಗಳು ನಮ್ಮನ್ನು ಹಫ್ತಾ ವಸೂಲಿ ಮಾಡಲು ಕಳುಹಿಸುತ್ತಾರೆ ಎಂದು ಕಲಬುರಗಿಯ ಪೊಲೀಸ್ ಕಾನ್​ಸ್ಟೇಬಲ್​ಗಳು ಆರೋಪಿಸಿದ್ದರು. ಅಧಿಕಾರಿಗಳ ನಡೆಯಿಂದ ಬೇಸತ್ತು ಕಲಬುರಗಿ ನಗರದ ಸಂಚಾರಿ ಠಾಣೆ 1 ರಲ್ಲಿನ ಸಿಬ್ಬಂದಿ ಚಂದ್ರಕಾಂತ್ ಆತ್ಮಹತ್ಯೆಗೆ ಯತ್ನಿಸಿದ್ದರು. ಅಷ್ಟೇ ಅಲ್ಲದೆ, ಕಲಬುರಗಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ತಮಗೆ ಬೇಡವಾದ 59 ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದಾರೆ ಅಂತಾನೂ ಕಾನಸ್ಟೇಬಲ್​ಗಳು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Sat, 22 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ