AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯೂಟಿ, ರಜೆಗೆ ರೇಟ್ ಕಾರ್ಡ್ ಫಿಕ್ಸ್: KSRP ಅಧಿಕಾರಿಗಳ ವಿರುದ್ಧ ಹೆಡ್‌ ಕಾನ್​ಸ್ಟೇಬಲ್ ದೂರು

ಇತ್ತೀಚೆಗಷ್ಟೇ, ಮೇಲಧಿಕಾರಿಗಳು ಹಫ್ತಾ ವಸೂಲಿಗೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕಲಬುರಗಿಯಲ್ಲಿ ಕಾನ್​ಸ್ಟೇಬಲ್​ಗಳು ಆರೋಪಿಸಿದ್ದರು. ಸಿಬ್ಬಂದಿ ಆತ್ಮಹತ್ಯೆಗೂ ಯತ್ನಿಸಿದ್ದರು. ಇದೀಗ ಕೆಎಸ್‌ಆರ್‌ಪಿ ಹಿರಿಯ ಅಧಿಕಾರಿಗಳ ವಿರುದ್ಧ ಕೇಳುತ್ತಿರುವ ಲಂಚದ ಆರೋಪ ಕೇಳಿಬಂದಿದೆ.

ಡ್ಯೂಟಿ, ರಜೆಗೆ ರೇಟ್ ಕಾರ್ಡ್ ಫಿಕ್ಸ್: KSRP ಅಧಿಕಾರಿಗಳ ವಿರುದ್ಧ ಹೆಡ್‌ ಕಾನ್​ಸ್ಟೇಬಲ್ ದೂರು
ಬೇಕಾದಲ್ಲಿ ಡ್ಯೂಟಿ, ರಜೆ ಬೇಕೆಂದರೆ ಕೆಎಸ್​ಆರ್​ಪಿ ಹಿರಿಯ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿದ ಹೆಡ್​ ಕಾನ್​ಸ್ಟೇಬಲ್ (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on:Jul 22, 2023 | 11:03 PM

Share

ಬೆಂಗಳೂರು, ಜುಲೈ 22: ಇಷ್ಟ ಬಂದ ಕಡೆ ಡ್ಯೂಟಿ ಹಾಗೂ ರಜೆ ನೀಡಲು ಲಂಚ ಕೇಳುತ್ತಿರುವ ಆರೋಪ ಕೆಎಸ್‌ಆರ್‌ಪಿ (KSRP) ಹಿರಿಯ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ. ಕೂಡ್ಲು ಬಳಿಯ 9ನೇ ಬ್ಯಾಚ್‌ನ ಕೆಎಸ್​ಆರ್​ಪಿ ಹಿರಿಯ ಅಧಿಕಾರಿಗಳ ಅಧಿಕಾರ ದುರುಪಯೋಗದ ವಿರುದ್ಧ ಬೇಸತ್ತು ಹೆಡ್‌ಕಾನ್ಸ್‌ಟೇಬಲ್‌ ಓಂಕಾರಪ್ಪ ಅವರು ಎಡಿಜಿಪಿ (ADGP) ಸೀಮಂತ್ ಕುಮಾರ್ ಸಿಂಗ್‌ ಅವರಿಗೆ ದೂರು ನೀಡಿದ್ದಾರೆ.

ಕೂಡ್ಲು ಬಳಿಯ 9ನೇ ಬ್ಯಾಚ್‌ನ KSRP ಆರ್‌ಪಿಐ ರವಿ, ಆರ್‌ಎಸ್‌ಐ ಮಹಂತೇಶ್ ಬನ್ನಪ್ಪ ಗೌಡರ್ ಅವರು ಬೇಕಾದಕಡೆ ಡ್ಯೂಟಿ ನೀಡಲು ತಿಂಗಳಿಗೆ 10 ಸಾವಿರ ಲಂಚ ಕೇಳುತ್ತಿದ್ದಾರೆ. ರಜೆ ನೀಡಲು 500 ರೂ. ಕೇಳುತ್ತಿದ್ದಾರೆ ಎಂದು ಆರೋಪಿಸಿ ಹೆಡ್​ ಕಾನ್​ಸ್ಟೇಬಲ್ ಓಂಕಾರಪ್ಪ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ, ನೈಟ್ ಡ್ಯೂಟಿ ಅಥವಾ ಡೇ ಡ್ಯೂಟಿ ಬೇಕೆಂದರೂ ಲಂಚ ನೀಡಬೇಕು. ಈ ಹಣವನ್ನು ಗೂಗಲ್‌ಪೇ, ಫೋನ್‌ಪೇ ಮೂಲಕ ತೆಗೆದುಕೊಳ್ಳುತ್ತಿದ್ದಾರೆ ಎಂದು ಓಂಕಾರಪ್ಪ ಆರೋಪಿಸಿದ್ದಾರೆ.

ಇದನ್ನೂ ಓದಿ: Kolar News: ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ; ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು

ಇತ್ತೀಚೆಗಷ್ಟೇ, ಹಿರಿಯ ಪೊಲೀಸ್ ಅಧಿಕಾರಿಗಳು, ಮೇಲಧಿಕಾರಿಗಳು ನಮ್ಮನ್ನು ಹಫ್ತಾ ವಸೂಲಿ ಮಾಡಲು ಕಳುಹಿಸುತ್ತಾರೆ ಎಂದು ಕಲಬುರಗಿಯ ಪೊಲೀಸ್ ಕಾನ್​ಸ್ಟೇಬಲ್​ಗಳು ಆರೋಪಿಸಿದ್ದರು. ಅಧಿಕಾರಿಗಳ ನಡೆಯಿಂದ ಬೇಸತ್ತು ಕಲಬುರಗಿ ನಗರದ ಸಂಚಾರಿ ಠಾಣೆ 1 ರಲ್ಲಿನ ಸಿಬ್ಬಂದಿ ಚಂದ್ರಕಾಂತ್ ಆತ್ಮಹತ್ಯೆಗೆ ಯತ್ನಿಸಿದ್ದರು. ಅಷ್ಟೇ ಅಲ್ಲದೆ, ಕಲಬುರಗಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ತಮಗೆ ಬೇಡವಾದ 59 ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದಾರೆ ಅಂತಾನೂ ಕಾನಸ್ಟೇಬಲ್​ಗಳು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Sat, 22 July 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು