AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಬೊಕ್ಕಸಕ್ಕೆ 150 ಕೋಟಿ ವಂಚನೆ ಆರೋಪ; ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಬಂಧನ

ನಿಗಮದ ಎಂ.ಡಿ ಲೀಲಾವತಿ, ಜನರಲ್ ಮ್ಯಾನೇಜರ್ ನಾಗರಾಜಪ್ಪ ಮನೆಗಳ ಮೇಲೆ ದಾಳಿ ನಡೆಸಿದ್ದ ಎಸಿಬಿ ತನಿಖೆಗೆ ಅಗತ್ಯ ದಾಖಲೆಗಳನ್ನ ಸಲ್ಲಿಸದೇ ಇರುವ ಹಿನ್ನೆಲೆ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.

ಸರ್ಕಾರದ ಬೊಕ್ಕಸಕ್ಕೆ 150 ಕೋಟಿ ವಂಚನೆ ಆರೋಪ; ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಬಂಧನ
ಭೋವಿ ಅಭಿವೃದ್ಧಿ ನಿಗಮ ಎಂಡಿ ಲೀಲಾವತಿ
TV9 Web
| Edited By: |

Updated on:Jun 15, 2022 | 8:23 PM

Share

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ(ACB) ಪೊಲೀಸರು ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯವರನ್ನು(Bhovi Development Corporation Managing Director) ಬಂಧಿಸಿದ್ದಾರೆ. ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ವಂಚಿಸಿದ್ದಾರೆ ಎಂಬ ಆರೋಪ ನಿಗಮದ ವಿರುದ್ಧ ಕೇಳಿ ಬಂದಿತ್ತು. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ 150 ಕೋಟಿ ವಂಚಿಸಿದ್ದ ಆರೋಪವಿತ್ತು. ನಿಗಮದ ಎಂ.ಡಿ ಲೀಲಾವತಿ, ಜನರಲ್ ಮ್ಯಾನೇಜರ್ ನಾಗರಾಜಪ್ಪ ಮನೆಗಳ ಮೇಲೆ ದಾಳಿ ನಡೆಸಿದ್ದ ಎಸಿಬಿ ತನಿಖೆಗೆ ಅಗತ್ಯ ದಾಖಲೆಗಳನ್ನ ಸಲ್ಲಿಸದೇ ಇರುವ ಹಿನ್ನೆಲೆ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.

ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕ ಮನೆ ಮೇಲೆ ಎಸಿಬಿ ದಾಳಿ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಮನೆ ಮೇಲೆ ಎಸಿಬಿ ದಾಳಿ ಪ್ರಕರಣದಲ್ಲಿ ಎಸಿಬಿ ತನಿಖೆ ಮುಂದುವರೆದಿದೆ. ಪ್ರಕರಣ ಸಂಬಂಧ ಮಾಗಡಿ ರಸ್ತೆಯ ಸನ್ ಫ್ಲವರ್ ಅಪಾರ್ಟ್‌ಮೆಂಟಿನಲ್ಲಿ ನಾಗರಾಜಪ್ಪಗೆ ಸೇರಿದ ಫ್ಲ್ಯಾಟ್ ಮೇಲೆ ದಾಳಿ ನಡೆದಿತ್ತು. ವಿಜಯನಗರದ ಎಂ.ಸಿ. ಲೇಔಟಿನಲ್ಲಿ ವಾಸದ ಮನೆ, 1 ಕಾರು, 1 ದ್ವಿಚಕ್ರ ವಾಹನ, 26 ಸಾವಿರ ರೂ ಮೌಲ್ಯದ ಗೃಹೋಪಯೋಗಿ ವಸ್ತುಗಳು ಜಪ್ತಿಯಾಗಿವೆ. ಬೇನಾಮಿ ಹೆಸರಿನ ಖಾತೆಗಳಲ್ಲಿ 29.40 ಲಕ್ಷ ಠೇವಣಿ ಪತ್ತೆಯಾಗಿದೆ. ಅಸಮತೋಲಿತ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನೂ ಓದಿ: ಐಎಎಸ್ ಅಧಿಕಾರಿ ಅಕ್ರಮ ಕುರಿತು ದಾಖಲೆಗಳ ಬಿಡುಗಡೆ ಮಾಡಿ, ನನ್ನ ಜೀವಕ್ಕೆ ಬೆದರಿಕೆ ಇದೆ ಎಂದ ಭೋವಿ ಅಭಿವೃದ್ಧಿ ನಿಗಮ ಎಂಡಿ ಲೀಲಾವತಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:08 pm, Wed, 15 June 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?