AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಅಲೋಕ್ ಕುಮಾರ್​​ಗೆ ಸಿಕ್ತು ಮುಂಬಡ್ತಿ: ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS

ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್​ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಆದೇಶಿಸಿದ್ದ ತನಿಖೆಯನ್ನು ರದ್ದುಗೊಳಿಸಿ ಬಡ್ತಿಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ.

ಕೊನೆಗೂ ಅಲೋಕ್ ಕುಮಾರ್​​ಗೆ ಸಿಕ್ತು ಮುಂಬಡ್ತಿ: ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS
Alok Kumar
ಗಂಗಾಧರ​ ಬ. ಸಾಬೋಜಿ
|

Updated on:Dec 10, 2025 | 8:26 PM

Share

ಬೆಂಗಳೂರು, ಡಿಸೆಂಬರ್​ 10: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS Alok Kumar) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ಇದಿಗ ಅಲೋಕ್ ಕುಮಾರ್​ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ 8 ತಿಂಗಳ ಹೋರಾಟಕ್ಕೆ ಜಯ ಸಿಕ್ಕಿದೆ.

ಅಲೋಕ್ ಕುಮಾರ್‌ಗೆ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ವರ್ಗಾವಣೆ ಹಿನ್ನಲೆ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ಬಿ.ದಯಾನಂದ್​​​ರನ್ನು ವರ್ಗಾವಣೆ ಮಾಡಿದೆ.

ಇದನ್ನೂ ಓದಿ: IPS ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರಕ್ಕೆ ಶಾಕ್

2019 ರಲ್ಲಿ ನಡೆದಿದ್ದ ಫೋನ್ ಟ್ಯಾಪಿಂಗ್ ಹಗರಣ ಪ್ರಕರಣದಲ್ಲಿ ಅಲೋಕ್ ಕುಮಾರ್ ಸೇರಿ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಈ ವೇಳೆ ಅಲೋಕ್ ಕುಮಾರ್ ನಗರ ಪೊಲೀಸ್ ಆಯುಕ್ತರಾಗಿದ್ದರು. ಸಿಬಿಐ ಪ್ರಕರಣದ ಬಗ್ಗೆ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ 2025 ಮೇ ತಿಂಗಳಿನಲ್ಲಿ ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಅವರು ಇತ್ತೀಚೆಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ವಾದಿಸಿದ್ದರು.

ಅಲೋಕ್ ಕುಮಾರ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದರು. ಹೀಗಾಗಿ ವಿಚಾರಣೆ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣ್‌ಜೀತ್ ಬಳಿಗೆ ಹೋಗಿತ್ತು. ಈ ವೇಳೆ ವಾದ ಪ್ರತಿವಾದದ ಬಳಿಕ ಅಕ್ಟೋಬರ್ 14 ತನಿಖೆಯನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಲಾಗಿತ್ತು. ಜೊತೆಗೆ ತಡೆಹಿಡಿಯಲಾಗಿದ್ದ ಬಡ್ತಿ ಮತ್ತು ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿತ್ತು. ಆ ಮೂಲಕ ಅಲೋಕ್ ಕುಮಾರ್​​ ಅವರು ಗೆದ್ದು ಬೀಗಿದ್ದರು.

ಇದನ್ನೂ ಓದಿ: ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ

ಇತ್ತ ಸರ್ಕಾರ ಸಿಐಟಿ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಸಿಎಟಿ ಆದೇಶಕ್ಕೆ  ಹೈಕೋರ್ಟ್ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ಇದೀಗ ಅಲೋಕ್ ಕುಮಾರ್​ಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ವರದಿ: ಪ್ರದೀಪ್​​ ಚಿಕ್ಕಾಟೆ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:20 pm, Wed, 10 December 25

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್