AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಮಗ್ಗುಲಲ್ಲಿ ಬೆಳೆ ಬೆಳೆಯುತ್ತಿದ್ದರೂ 600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಕೆಐಎಡಿಬಿ! ರೈತರ ಆಕ್ರೋಶ

KIADB Land Acquisition: ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಪ್ರಾಥಮಿಕ ಹಂತದ ನೋಟಿಫಿಕೇಶನ್ ಮಾಡಲು ಕೆಐಎಡಿಬಿ ಸಿದ್ದತೆ ನಡೆಸುತ್ತಿದೆ. ಒಟ್ಟಾರೆ 6 ಹಳ್ಳಿಗಳ ಪೈಕಿ 600 ಎಕರೆ ಭೂಮಿಯನ್ನ ಕೆಐಎಡಿಬಿ ಪ್ರಿಲ್ಮಿನರಿ ನೋಟಿಫಿಕೇಶನ್ ಮಾಡಿದೆ. ಆದರೆ ಕೆಐಎಡಿಬಿ ಗುರುತಿಸಿರುವ ಭೂಮಿಯ ಪೈಕಿ 90 ರಷ್ಟು ಭಾಗದಲ್ಲಿ ಈಗಲೂ ರೈತರು ಬೆಳೆಗಳನ್ನ ಬೆಳೆಯುತ್ತಿದ್ದಾರೆ.

ರಾಮ್​, ಮೈಸೂರು
| Edited By: ಸಾಧು ಶ್ರೀನಾಥ್​|

Updated on:Mar 25, 2024 | 4:38 PM

Share

ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಪ್ರಾಥಮಿಕ ಹಂತದ ನೋಟಿಫಿಕೇಶನ್ ಮಾಡಲು ಕೆಐಎಡಿಬಿ (Karnataka Industrial Areas Development Board -KIADB) ಸಿದ್ದತೆ ನಡೆಸುತ್ತಿದೆ. ಇದರ ವಿರುದ್ದ ರೈತರು (Farmers) ಪ್ರತಿಭಟನೆ (Protest) ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಹಂದೇನಹಳ್ಳಿ ಗ್ರಾಮ ಪಂಚಾಯತಿಯ ಸುತ್ತಮುತ್ತಲಿನ ಎಸ್.ಮೇಡಹಳ್ಳಿ, ಅಡಿಗಾರಕಲ್ಲಹಳ್ಳಿ, ಸೊಳ್ಳೆಪುರ, ಬಿಕ್ಕನಹಳ್ಳಿ, ಹಂದೇನಹಳ್ಳಿ ಸೇರಿದಂತೆ ಒಟ್ಟಾರೆ 6 ಹಳ್ಳಿಗಳ ಪೈಕಿ 600 ಎಕರೆ ಭೂಮಿಯನ್ನ ಕೆಐಎಡಿಬಿ ಲೋಕಾಸಭೆ ಚುನಾವಣೆ ಘೋಷಣೆ ದಿನವೇ ಪ್ರಿಲ್ಮಿನರಿ ನೋಟಿಫಿಕೇಶನ್ ಮಾಡಿದೆ.

Also Read: ಆನೇಕಲ್ ರೈತರ ಜಮೀನುಗಳ ಮೇಲೆ ಕೆಐಎಡಿಬಿ ಕಣ್ಣು: ಭೂ ಸ್ವಾಧೀನಕ್ಕೆ ಮುಂದಾದ ಅಧಿಕಾರಿಗಳ ವಿರುದ್ಧ ಆಕ್ರೋಶ

ವಂಶ ಪಾರಂಪರ್ಯವಾಗಿ ಈ ಭಾಗದ ರೈತರು ಕೃಷಿಯನ್ನೇ ಜೀವನಾಧಾರವಾಗಿ ಬದುಕು ಕಂಡು ಕೊಂಡಿದ್ದಾರೆ. ಕೆಐಎಡಿಬಿ ಗುರುತಿಸಿರುವ ಭೂಮಿಯ ಪೈಕಿ 90 ರಷ್ಟು ಭಾಗದಲ್ಲಿ ಈಗಲೂ ಹೂ, ಹಣ್ಣು, ರೇಷ್ಮೆ, ತರಕಾರಿ ಬೆಳೆಗಳನ್ನ ರೈತರು ಬೆಳೆಯುತ್ತಿದ್ದಾರೆ. ಫಲವತ್ತಾದ ರೈತರ ಭೂಮಿಗಳನ್ನು ಅವೈಜ್ಞಾನಿಕವಾಗಿ ಬರಡು ಭೂಮಿ ಎಂದು ಉಲ್ಲೇಖ ಮಾಡಿ ರೈತರ ಅಭಿಪ್ರಾಯವನ್ನೂ ಕೇಳದೆ ಅಕ್ರಮವಾಗಿ ನೋಟಿಫಿಕೇಶನ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಟಿವಿ9 ವರದಿ ಇಂಪ್ಯಾಕ್ಟ್: ಒತ್ತುವರಿಯಾಗಿದ್ದ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ತೆರವು

ಯಾವುದೇ ಕಾರಣಕ್ಕೂ ಜಮೀನು ಭೂಸ್ವಾದೀನಕ್ಕೆ ಅವಕಾಶ ನೀಡುವುದಿಲ್ಲ. ರೈತರ ಜಮೀನಿನ ಭೂಸ್ವಾಧೀನ ಪ್ರಕ್ರಿಯೆಯನ್ನ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕೆಐಎಡಿಬಿ ವಿರುದ್ದ ರೈತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:37 pm, Mon, 25 March 24

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ