AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rebel Star Ambareesh: ರೆಬೆಲ್​ ಸ್ಟಾರ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​: ಬೆಂಗಳೂರು ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರು

ಬೆಂಗಳೂರು ರೇಸ್​ ಕೋರ್ಸ್​ಗೆ ರೆಬೆಲ್​ ಸ್ಟಾರ್​ ಅಂಬರೀಶ್​ ಹೆಸರಿಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್​ ಸಿಂಗ್​ ಅವರು ಅನುಮೋದನೆ ನೀಡಿದ್ದಾರೆ.

Rebel Star Ambareesh: ರೆಬೆಲ್​ ಸ್ಟಾರ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​: ಬೆಂಗಳೂರು ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರು
ರೆಬೆಲ್​ ಸ್ಟಾರ್ ಅಂಬರೀಷ್​Image Credit source: indiatimes.com
ಗಂಗಾಧರ​ ಬ. ಸಾಬೋಜಿ
|

Updated on:Mar 18, 2023 | 7:47 PM

Share

ಬೆಂಗಳೂರು: ಬೆಂಗಳೂರು ನಗರದ ಪ್ರಮುಖ ರಸ್ತೆಗೆ ಖ್ಯಾತ ನಟರ ಹೆಸರಿಡಲು ಬಿಬಿಎಂಪಿ ಅನುಮೋದನೆ ನೀಡಿದೆ. ಬೆಂಗಳೂರು ರೇಸ್​ ಕೋರ್ಸ್​ ರಸ್ತೆಗೆ (Race Course road) ರೆಬೆಲ್​ ಸ್ಟಾರ್​ ಅಂಬರೀಷ್ (Ambareesh)​ ಹೆಸರಿಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್​ ಸಿಂಗ್​ ಅವರು ಅನುಮೋದನೆ ನೀಡಿದ್ದಾರೆ. ಆ ಮೂಲಕ ರೆಬೆಲ್​ ಸ್ಟಾರ್​ ಅಂಬರೀಷ್​ ಹೆಸರು ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ರಾರಾಜಿಸಲಿದೆ. ಈ ಕುರಿತಾಗಿ ವಾಣಿಜ್ಯ ಮಂಡಳಿಯ ಅಧ್ಯಕ್ಷ ಬಾಮಾ ಹರೀಶ್​ ಅವರು ಟ್ವೀಟ್​ ಮಾಡಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸ್ಪಂದಿಸಿ, ರೇಸ್ ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರಿಡಲು ಒಪ್ಪಿಗೆ ಸೂಚಿಸಿದ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು. ರಸ್ತೆಗೆ ಹೆಸರಿಡುವ ಕಾರ್ಯಕ್ರಮ ಈ ವಾರದಲ್ಲೇ ನಡೆಯಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಕಮಲ ಅರಳಿಸುವ ಜವಾಬ್ದಾರಿ ಸುಮಲತಾ ಹೆಗಲಿಗೆ, ಅಮಿತ್ ಶಾ ಕೊಟ್ಟ ಟಾರ್ಗೆಟ್ ಏನು? 7 ಕ್ಷೇತ್ರದಲ್ಲಿಯೂ ಭರ್ಜರಿ ಪ್ರಚಾರಕ್ಕೆ ರೆಬಲ್ ಲೇಡಿ ಸಜ್ಜು

ಬೆಂಗಳೂರು ರೇಸ್​ ಕೋರ್ಸ್​ ರಸ್ತೆಯಲ್ಲಿರುವ ರಾಮನಾರಾಯಣ ಚೆಲ್ಲಾರಂ ಕಾಲೇಜಿನಿಂದ ಆರಂಭಗೊಂಡು ಆನಂದ್​ ರಾವ್​ ವೃತ್ತದ ವರೆಗಿನ ರಸ್ತೆಗೆ ಅಂಬರೀಷ್ ರಸ್ತೆ ಎಂದು ನಾಮಕರಣ ಮಾಡಲಾಗುತ್ತಿದೆ. ಈ ಕುರಿತಾಗಿ ಈ ಹಿಂದೆ ಸಿಎಂ ಬೊಮ್ಮಾಯಿ ಅವರು ಅಧಿಕೃತ ಘೋಷಣೆ ಮಾಡಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಮಂಡ್ಯದ ವಿಶೇಷ ಆರ್ಗಾನಿಕ್ ಬೆಲ್ಲವನ್ನ ಕೊಡುತ್ತೇನೆ: ಸಂಸದೆ ಸುಮಲತಾ

ಅಂಬರೀಷ್ ಅವರು 1972ರಿಂದ ಕನ್ನಡ ಚಿತ್ರರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ಅವರು ಒಬ್ಬರಾಗಿದ್ದರು. ಮನವಳ್ಳಿ ಹುಚ್ಚೇಗೌಡ ಅಮರನಾಥ್ ಅವರ ಮೂಲ ಹೆಸರಾಗಿದ್ದರು ಅಂಬರೀಷ್ ಎಂದು ಹೆಸರುವಾಸಿಯಾಗಿದ್ದರು. ಇನ್ನು ಅಭಿಮಾನಿಗಳು ಅವರನ್ನು ಪ್ರೀತಿಯಿಂದ ರೆಬೆಲ್​ ಸ್ಟಾರ್ ಎಂದು ಕರೆಯುತ್ತಾರೆ. ಅಂಬರೀಷ್ ಅವರು ಕೇವಲ ನಟ ಮಾತ್ರವಲ್ಲದೇ ರಾಜಕಾರಣಿಯೂ ಹೌದು. ಕನ್ನಡ ಚಿತ್ರಗಳಲ್ಲಿ ಅಷ್ಟೇ ಅಲ್ಲದೆ ಹಿಂದಿ, ಮಲಯಾಳಂ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಂಬರೀಷ್ ಅವರು 2018 ನವೆಂಬರ್​​ 24ರಂದು ಇಹಲೋಕ ತ್ಯಜಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:20 pm, Sat, 18 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!