AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್​​ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್​​ನ ವಿದ್ಯಾರ್ಥಿಗಳು ಪ್ರದರ್ಶಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ವಿಡಂಬನಾತ್ಮಕ ನಾಟಕದ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರು ನೀಡಿದ ತೀರ್ಪಿನಲ್ಲಿ, ನಾಟಕವು ಸಂವಿಧಾನದ ಆರ್ಟಿಕಲ್ 19 ರ ಅಡಿಯಲ್ಲಿ ರಕ್ಷಣೆ ಪಡೆದಿದೆ ಎಂದು ಹೇಳಿದ್ದಾರೆ.

ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್​​ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್​​ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್
Ramesha M
| Edited By: |

Updated on: Mar 01, 2025 | 9:20 PM

Share

ಬೆಂಗಳೂರು, ಮಾರ್ಚ್​​ 01: ಡಾ. ಬಿಆರ್ ಅಂಬೇಡ್ಕರ್ (BR Ambedkar)​ ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.

ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ನ್ಯಾ.ಎಸ್.ಆರ್.ಕೃಷ್ಣಕುಮಾರ್​ರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು, ಹೀಗಾಗಿ ಕೇಸ್ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶನಿವಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬೆಂಗಳೂರು: ಜೈನ್ ವಿಶ್ವವಿದ್ಯಾಲಯದಲ್ಲಿ ಬಿ.ಆರ್ ಅಂಬೇಡ್ಕರ್​​ರಿಗೆ ಅವಮಾನ: 7 ವಿದ್ಯಾರ್ಥಿಗಳ ಬಂಧನ

ಇದನ್ನೂ ಓದಿ
Image
ಮಹಿಳಾ ಸಬಲೀಕರಣ ಪ್ರತಿಯೊಬ್ಬ ಮಹಿಳೆಯರ ಕರ್ತವ್ಯ -ಸಚಿವ ಡಾ. MC ಸುಧಾಕರ್
Image
BR Ambedkar: ಅಂಬೇಡ್ಕರ್ ಜಯಂತಿ ಕೈಬಿಟ್ಟ ಸರ್ಕಾರ: ಆರೋಪ
Image
ಬೆಂಗಳೂರು: ಜೈನ್ ವಿಶ್ವವಿದ್ಯಾಲಯದಲ್ಲಿ ಬಿ.ಆರ್ ಅಂಬೇಡ್ಕರ್​​ರಿಗೆ ಅವಮಾನ: 7 ವಿದ್ಯಾರ್ಥಿಗಳ ಬಂಧನ
Image
ಅಂಬೇಡ್ಕರ್​ಗೆ ಅಪಮಾನ ವಿಚಾರ: ವರದಿ ನೀಡಲು ಶಿಕ್ಷಣ ಇಲಾಖೆಗೆ ಅಶ್ವತ್ಥ ನಾರಾಯಣ ಸೂಚನೆ, ಜೈನ್​ ವಿವಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆ

ಲಾಲ್ ಬಾಗ್ ರಸ್ತೆಯಲ್ಲಿರುವ ಜೈನ್ ಯೂನಿವರ್ಸಿಟಿಯ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್​ ಯೂತ್ ಫೆಸ್ಟ್ ಅಂಗವಾಗಿ ಫೆಬ್ರವರಿ 6ರಂದು ಆಯೋಜಿಸಲಾಗಿದ್ದ ಸ್ಕಿಟ್ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಯಾಕಂದರೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಬಳಸಿದ್ದ ಕೆಲ ಪದಗಳು ದಲಿತ ಸಂಘಟನೆಗಳನ್ನ ಕೆರಳಿಸಿತ್ತು. ಫೆ. 6ರಂದು ಕಾಲೇಜಿನ ಯುವಜನೋತ್ಸವ ಕಾರ್ಯಕ್ರಮದಲ್ಲಿ ಮ್ಯಾಡ್ ಆ್ಯಡ್ ಪ್ರದರ್ಶನದಲ್ಲಿ ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಅಂಬೇಡ್ಕರ್​ಗೆ ಅಪಮಾನ ವಿಚಾರ: ವರದಿ ನೀಡಲು ಶಿಕ್ಷಣ ಇಲಾಖೆಗೆ ಅಶ್ವತ್ಥ ನಾರಾಯಣ ಸೂಚನೆ, ಜೈನ್​ ವಿವಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆ

ಬಿ ಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್, ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಪ್ಲೇ ಮಾಡಿ ಗೇಲಿ ಮಾಡಿದ್ದಲ್ಲದೇ, ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂದು ‍ವಿವಾದಾತ್ಮಕ ಸ್ಕಿಟ್ ಪ್ರದರ್ಶನ ಮಾಡಿದ್ದರು. ಈ ವಿವಾದದ ಕಿಚ್ಚು ಹೆಚ್ಚಾಗ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ, ಬೇಷರತ್ ಕ್ಷಮೆಯಾಚಿಸಿತ್ತು. ಅಷ್ಟು ಮಾತ್ರವಲ್ಲ ಶಿಸ್ತುಪಾಲನ ಕಮಿಟಿಯಿಂದಲೂ ಸ್ಕಿಟ್ ಪ್ರದರ್ಶನ ಮಾಡಿದ್ದ 6 ವಿದ್ಯಾರ್ಥಿಗಳನ್ನ ಅಮಾನತು ಮಾಡಲಾಗಿತ್ತು.

ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಎಫ್​ಐಆರ್​​

ಇನ್ನು ಈ ವಿಚಾರವಾಗಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಫೆ.11 ರಂದು ಎಫ್​ಐಆರ್ ದಾಖಲಾಗಿತ್ತು. ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣಾಧಿಕಾರಿ ದೂರು ಹಿನ್ನೆಲೆ ಎಫ್​ಐಆರ್​ ದಾಖಲಿಸಲಾಗಿತ್ತು.

ಕರ್ನಾಟದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್