AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್​​ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್​​ನ ವಿದ್ಯಾರ್ಥಿಗಳು ಪ್ರದರ್ಶಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ವಿಡಂಬನಾತ್ಮಕ ನಾಟಕದ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರು ನೀಡಿದ ತೀರ್ಪಿನಲ್ಲಿ, ನಾಟಕವು ಸಂವಿಧಾನದ ಆರ್ಟಿಕಲ್ 19 ರ ಅಡಿಯಲ್ಲಿ ರಕ್ಷಣೆ ಪಡೆದಿದೆ ಎಂದು ಹೇಳಿದ್ದಾರೆ.

ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್​​ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್​​ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್
Ramesha M
| Edited By: |

Updated on: Mar 01, 2025 | 9:20 PM

Share

ಬೆಂಗಳೂರು, ಮಾರ್ಚ್​​ 01: ಡಾ. ಬಿಆರ್ ಅಂಬೇಡ್ಕರ್ (BR Ambedkar)​ ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.

ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ನ್ಯಾ.ಎಸ್.ಆರ್.ಕೃಷ್ಣಕುಮಾರ್​ರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು, ಹೀಗಾಗಿ ಕೇಸ್ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶನಿವಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬೆಂಗಳೂರು: ಜೈನ್ ವಿಶ್ವವಿದ್ಯಾಲಯದಲ್ಲಿ ಬಿ.ಆರ್ ಅಂಬೇಡ್ಕರ್​​ರಿಗೆ ಅವಮಾನ: 7 ವಿದ್ಯಾರ್ಥಿಗಳ ಬಂಧನ

ಇದನ್ನೂ ಓದಿ
Image
ಮಹಿಳಾ ಸಬಲೀಕರಣ ಪ್ರತಿಯೊಬ್ಬ ಮಹಿಳೆಯರ ಕರ್ತವ್ಯ -ಸಚಿವ ಡಾ. MC ಸುಧಾಕರ್
Image
BR Ambedkar: ಅಂಬೇಡ್ಕರ್ ಜಯಂತಿ ಕೈಬಿಟ್ಟ ಸರ್ಕಾರ: ಆರೋಪ
Image
ಬೆಂಗಳೂರು: ಜೈನ್ ವಿಶ್ವವಿದ್ಯಾಲಯದಲ್ಲಿ ಬಿ.ಆರ್ ಅಂಬೇಡ್ಕರ್​​ರಿಗೆ ಅವಮಾನ: 7 ವಿದ್ಯಾರ್ಥಿಗಳ ಬಂಧನ
Image
ಅಂಬೇಡ್ಕರ್​ಗೆ ಅಪಮಾನ ವಿಚಾರ: ವರದಿ ನೀಡಲು ಶಿಕ್ಷಣ ಇಲಾಖೆಗೆ ಅಶ್ವತ್ಥ ನಾರಾಯಣ ಸೂಚನೆ, ಜೈನ್​ ವಿವಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆ

ಲಾಲ್ ಬಾಗ್ ರಸ್ತೆಯಲ್ಲಿರುವ ಜೈನ್ ಯೂನಿವರ್ಸಿಟಿಯ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್​ ಯೂತ್ ಫೆಸ್ಟ್ ಅಂಗವಾಗಿ ಫೆಬ್ರವರಿ 6ರಂದು ಆಯೋಜಿಸಲಾಗಿದ್ದ ಸ್ಕಿಟ್ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಯಾಕಂದರೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಬಳಸಿದ್ದ ಕೆಲ ಪದಗಳು ದಲಿತ ಸಂಘಟನೆಗಳನ್ನ ಕೆರಳಿಸಿತ್ತು. ಫೆ. 6ರಂದು ಕಾಲೇಜಿನ ಯುವಜನೋತ್ಸವ ಕಾರ್ಯಕ್ರಮದಲ್ಲಿ ಮ್ಯಾಡ್ ಆ್ಯಡ್ ಪ್ರದರ್ಶನದಲ್ಲಿ ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಅಂಬೇಡ್ಕರ್​ಗೆ ಅಪಮಾನ ವಿಚಾರ: ವರದಿ ನೀಡಲು ಶಿಕ್ಷಣ ಇಲಾಖೆಗೆ ಅಶ್ವತ್ಥ ನಾರಾಯಣ ಸೂಚನೆ, ಜೈನ್​ ವಿವಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆ

ಬಿ ಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್, ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಪ್ಲೇ ಮಾಡಿ ಗೇಲಿ ಮಾಡಿದ್ದಲ್ಲದೇ, ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂದು ‍ವಿವಾದಾತ್ಮಕ ಸ್ಕಿಟ್ ಪ್ರದರ್ಶನ ಮಾಡಿದ್ದರು. ಈ ವಿವಾದದ ಕಿಚ್ಚು ಹೆಚ್ಚಾಗ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ, ಬೇಷರತ್ ಕ್ಷಮೆಯಾಚಿಸಿತ್ತು. ಅಷ್ಟು ಮಾತ್ರವಲ್ಲ ಶಿಸ್ತುಪಾಲನ ಕಮಿಟಿಯಿಂದಲೂ ಸ್ಕಿಟ್ ಪ್ರದರ್ಶನ ಮಾಡಿದ್ದ 6 ವಿದ್ಯಾರ್ಥಿಗಳನ್ನ ಅಮಾನತು ಮಾಡಲಾಗಿತ್ತು.

ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಎಫ್​ಐಆರ್​​

ಇನ್ನು ಈ ವಿಚಾರವಾಗಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಫೆ.11 ರಂದು ಎಫ್​ಐಆರ್ ದಾಖಲಾಗಿತ್ತು. ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣಾಧಿಕಾರಿ ದೂರು ಹಿನ್ನೆಲೆ ಎಫ್​ಐಆರ್​ ದಾಖಲಿಸಲಾಗಿತ್ತು.

ಕರ್ನಾಟದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು