AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಕಳವಾದರೆ ಎರಡೇ ನಿಮಿಷಗಳಲ್ಲಿ ಪತ್ತೆ, ಮೂರೇ ಗಂಟೆಯಲ್ಲಿ ಪಾಸ್​ಪೋರ್ಟ್​ ದೃಢೀಕರಣ; ಅಮಿತ್ ಶಾ

ಕೇವಲ 3 ಗಂಟೆಯಲ್ಲಿ ಪಾಸ್‌ಪೋರ್ಟ್‌ ಪರಿಶೀಲನೆ ಮುಗಿಯುತ್ತಿದೆ. ನಿಮ್ಮ ವಾಹನ ಕಳವಾಗಿದ್ರೆ ಎರಡೇ ನಿಮಿಷಗಳಲ್ಲಿ ಪತ್ತೆ ಹಚ್ಚಲಾಗುತ್ತೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದರು.

ವಾಹನ ಕಳವಾದರೆ ಎರಡೇ ನಿಮಿಷಗಳಲ್ಲಿ ಪತ್ತೆ, ಮೂರೇ ಗಂಟೆಯಲ್ಲಿ ಪಾಸ್​ಪೋರ್ಟ್​ ದೃಢೀಕರಣ; ಅಮಿತ್ ಶಾ
ಅಮಿತ್ ಶಾImage Credit source: thehindu.com
ಗಂಗಾಧರ​ ಬ. ಸಾಬೋಜಿ
|

Updated on:Mar 03, 2023 | 10:13 PM

Share

ಬೆಂಗಳೂರು: ಕೇವಲ 3 ಗಂಟೆಯಲ್ಲಿ ಪಾಸ್‌ಪೋರ್ಟ್‌ ಪರಿಶೀಲನೆ ಮುಗಿಯುತ್ತಿದೆ. ನಿಮ್ಮ ವಾಹನ ಕಳವಾಗಿದ್ರೆ ಎರಡೇ ನಿಮಿಷಗಳಲ್ಲಿ ಪತ್ತೆ ಹಚ್ಚಲಾಗುತ್ತೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಾಹಿತಿ ನೀಡಿದರು. ಸೇಫ್ ಸಿಟಿ ಪ್ರಾಜೆಕ್ಟ್ ಕಮಾಂಡ್ ಸೆಂಟರ್​ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅಪರಾಧ ಮಾಡಿರುವ ಎಲ್ಲಾ ಅಪರಾಧಿಗಳ ಫಿಂಗರ್ ಪ್ರಿಂಟ್ ಲಭ್ಯವಿದ್ದು, ಆ ಮೂಲಕ ಅಪರಾಧಿ ಪತ್ತೆ ಹಚ್ಚಿ ಬಂಧನ ಮಾಡಬಹುದು. ಕರ್ನಾಟಕ ಕೂಡ ಫಿಂಗರ್ ಪ್ರಿಂಟ್ ಮೂಲಕ 1800ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅಪರಾಧಿಗಳನ್ನು ಪತ್ತೆ ಹಚ್ಚಿದೆ. ICJS (Inter-operable Criminal Justice System) ಮತ್ತು CCTNS (Crime and Criminal Tracking Network and Systems) ಒಟ್ಟಿಗೆ ಕೆಲಸ ಮಾಡುವುದರಿಂದ ವೇಗವಾಗಿ ಫಲಿತಾಂಶ ಲಭ್ಯವಾಗುತ್ತಿದೆ ಎಂದು ಹೇಳಿದರು.

ICJS ಮೂಲಕ ವಿದೇಶಿ ಪ್ರಕರಣ ಲಭ್ಯವಾಗಲಿದೆ. ಇದರ ಪ್ರಯೋಗ ಕೂಡ ಮಾಡಲಾಗಿದೆ. ಈಶನ್ಯಾ ರಾಜ್ಯದಲ್ಲಿ ಫಲಿತಾಂಶ ಕೂಡ ಕಂಡಿದ್ದೇವೆ. ICJS ಎರಡನೇ ಪ್ರಯೋಗ ಕೂಡ ನಡೆಯುತ್ತಿದೆ. ಡೇಟಾ ಎಂಟ್ರಿ, ಡೆಟಾ ಟ್ರಾನ್ಸ್‌ಫರ್ 3,500ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Bengaluru Safe City: ಸೇಫ್ ಸಿಟಿ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ

ಟೆಕ್ನಾಲಜಿ ಬಳಸಿ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸ

ಇಂದಿನಿಂದ ಸೇಫ್ ಸಿಟಿ ಪ್ರಾಜೆಕ್ಟ್ ಆರಂಭವಾಗಿದೆ. ಬೆಂಗಳೂರು ಜನತೆಯ ಸುರಕ್ಷತೆಗಾಗಿ ಕೆಲಸ ಮಾಡಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಹೊಸ ಆಯಾಮದ ಮೂಲಕ ನಮ್ಮ ಯೋಜನೆ ಹಾಗೂ ಮೋದಿಯವರ ಕನಸು ನನಸಾಗಿದೆ. ಟೆಕ್ನಾಲಜಿ ಬಳಸಿ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಶಾಂತಿ ಸ್ಥಾಪನೆಗೆ ಪಣ ತೊಡಲಾಗಿದೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಯೋಜನೆ ನೀಡಲಾಗಿದೆ. ಸಾವಿರ ಕಿ.ಮೀವರೆಗೂ ತಲುಪಲಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಡಿಮೆ ದೂರ ಕ್ರಮಿಸಲಾಗಿತ್ತು. ಮೋದಿ ಬಂದ ಬಳಿಕ ವೇಗವಾಗಿ ಕೆಲಸ ನಡೆಯುತ್ತಿದೆ ಎಂದರು.

ಇದನ್ನೂ ಓದಿ: Bengaluru Safe City project: ಏನಿದು ಸೇಫ್​ ಸಿಟಿ ಪ್ರಾಜೆಕ್ಟ್, ಬೆಂಗಳೂರಿಗೇಕೆ ಮುಖ್ಯ?

ನಿಮ್ಮೆಲ್ಲರ ಕನಸು ಇಂದು ನನಸಾಗುತ್ತಿದೆ

ಚೆನೈ, ಬೆಂಗಳೂರು ಹೈಸ್ಪೀಡ್ ರೈಲ್ ಕಾರಿಡಾರ್ ಮಾಡಲಾಗಿದೆ. 275 ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮೈಸೂರು ತಲುಪಲಿದೆ. ಸ್ಪೇಸ್ ಸೆಕ್ಟರ್‌ನಲ್ಲಿ 25ರಷ್ಟು ಕೆಲಸ ನಡೆಯುತ್ತಿದೆ. ಇದೆಲ್ಲದರ ಲಾಭ ಬೆಂಗಳೂರಿಗೆ ಆಗುತ್ತಿದೆ. ವಿದೇಶಿ ನೇರ ಬಂಡವಾಳ ಹರಿದು ಬರುತ್ತಿದೆ. ಬೆಂಗಳೂರಿನ ಬಳಿ ಹೆಚ್.ಎ.ಎಲ್ ಹೆಲಿಕಾಪ್ಟರ್ ಕಾರ್ಖಾನೆ ಮೋದಿ ಉದ್ಘಾಟನೆ ಮಾಡಿದ್ದಾರೆ. ಮೇಕ್ ಇನ್ ಇಂಡಿಯಾ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ಒಂದೇ ಒಂದು ಪರ್ಸೆಂಟ್ ಕೂಡ ವಿದೇಶಿ ವಸ್ತು ಬಳಸುತ್ತಿಲ್ಲ. ನಿಮ್ಮೆಲ್ಲರ ಕನಸು ಇಂದು ನನಸಾಗುತ್ತಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಅಮಿತ್ ಶಾ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:13 pm, Fri, 3 March 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ