AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಕಳವಾದರೆ ಎರಡೇ ನಿಮಿಷಗಳಲ್ಲಿ ಪತ್ತೆ, ಮೂರೇ ಗಂಟೆಯಲ್ಲಿ ಪಾಸ್​ಪೋರ್ಟ್​ ದೃಢೀಕರಣ; ಅಮಿತ್ ಶಾ

ಕೇವಲ 3 ಗಂಟೆಯಲ್ಲಿ ಪಾಸ್‌ಪೋರ್ಟ್‌ ಪರಿಶೀಲನೆ ಮುಗಿಯುತ್ತಿದೆ. ನಿಮ್ಮ ವಾಹನ ಕಳವಾಗಿದ್ರೆ ಎರಡೇ ನಿಮಿಷಗಳಲ್ಲಿ ಪತ್ತೆ ಹಚ್ಚಲಾಗುತ್ತೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದರು.

ವಾಹನ ಕಳವಾದರೆ ಎರಡೇ ನಿಮಿಷಗಳಲ್ಲಿ ಪತ್ತೆ, ಮೂರೇ ಗಂಟೆಯಲ್ಲಿ ಪಾಸ್​ಪೋರ್ಟ್​ ದೃಢೀಕರಣ; ಅಮಿತ್ ಶಾ
ಅಮಿತ್ ಶಾImage Credit source: thehindu.com
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 03, 2023 | 10:13 PM

ಬೆಂಗಳೂರು: ಕೇವಲ 3 ಗಂಟೆಯಲ್ಲಿ ಪಾಸ್‌ಪೋರ್ಟ್‌ ಪರಿಶೀಲನೆ ಮುಗಿಯುತ್ತಿದೆ. ನಿಮ್ಮ ವಾಹನ ಕಳವಾಗಿದ್ರೆ ಎರಡೇ ನಿಮಿಷಗಳಲ್ಲಿ ಪತ್ತೆ ಹಚ್ಚಲಾಗುತ್ತೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಾಹಿತಿ ನೀಡಿದರು. ಸೇಫ್ ಸಿಟಿ ಪ್ರಾಜೆಕ್ಟ್ ಕಮಾಂಡ್ ಸೆಂಟರ್​ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅಪರಾಧ ಮಾಡಿರುವ ಎಲ್ಲಾ ಅಪರಾಧಿಗಳ ಫಿಂಗರ್ ಪ್ರಿಂಟ್ ಲಭ್ಯವಿದ್ದು, ಆ ಮೂಲಕ ಅಪರಾಧಿ ಪತ್ತೆ ಹಚ್ಚಿ ಬಂಧನ ಮಾಡಬಹುದು. ಕರ್ನಾಟಕ ಕೂಡ ಫಿಂಗರ್ ಪ್ರಿಂಟ್ ಮೂಲಕ 1800ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅಪರಾಧಿಗಳನ್ನು ಪತ್ತೆ ಹಚ್ಚಿದೆ. ICJS (Inter-operable Criminal Justice System) ಮತ್ತು CCTNS (Crime and Criminal Tracking Network and Systems) ಒಟ್ಟಿಗೆ ಕೆಲಸ ಮಾಡುವುದರಿಂದ ವೇಗವಾಗಿ ಫಲಿತಾಂಶ ಲಭ್ಯವಾಗುತ್ತಿದೆ ಎಂದು ಹೇಳಿದರು.

ICJS ಮೂಲಕ ವಿದೇಶಿ ಪ್ರಕರಣ ಲಭ್ಯವಾಗಲಿದೆ. ಇದರ ಪ್ರಯೋಗ ಕೂಡ ಮಾಡಲಾಗಿದೆ. ಈಶನ್ಯಾ ರಾಜ್ಯದಲ್ಲಿ ಫಲಿತಾಂಶ ಕೂಡ ಕಂಡಿದ್ದೇವೆ. ICJS ಎರಡನೇ ಪ್ರಯೋಗ ಕೂಡ ನಡೆಯುತ್ತಿದೆ. ಡೇಟಾ ಎಂಟ್ರಿ, ಡೆಟಾ ಟ್ರಾನ್ಸ್‌ಫರ್ 3,500ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Bengaluru Safe City: ಸೇಫ್ ಸಿಟಿ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ

ಟೆಕ್ನಾಲಜಿ ಬಳಸಿ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸ

ಇಂದಿನಿಂದ ಸೇಫ್ ಸಿಟಿ ಪ್ರಾಜೆಕ್ಟ್ ಆರಂಭವಾಗಿದೆ. ಬೆಂಗಳೂರು ಜನತೆಯ ಸುರಕ್ಷತೆಗಾಗಿ ಕೆಲಸ ಮಾಡಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಹೊಸ ಆಯಾಮದ ಮೂಲಕ ನಮ್ಮ ಯೋಜನೆ ಹಾಗೂ ಮೋದಿಯವರ ಕನಸು ನನಸಾಗಿದೆ. ಟೆಕ್ನಾಲಜಿ ಬಳಸಿ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಶಾಂತಿ ಸ್ಥಾಪನೆಗೆ ಪಣ ತೊಡಲಾಗಿದೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಯೋಜನೆ ನೀಡಲಾಗಿದೆ. ಸಾವಿರ ಕಿ.ಮೀವರೆಗೂ ತಲುಪಲಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಡಿಮೆ ದೂರ ಕ್ರಮಿಸಲಾಗಿತ್ತು. ಮೋದಿ ಬಂದ ಬಳಿಕ ವೇಗವಾಗಿ ಕೆಲಸ ನಡೆಯುತ್ತಿದೆ ಎಂದರು.

ಇದನ್ನೂ ಓದಿ: Bengaluru Safe City project: ಏನಿದು ಸೇಫ್​ ಸಿಟಿ ಪ್ರಾಜೆಕ್ಟ್, ಬೆಂಗಳೂರಿಗೇಕೆ ಮುಖ್ಯ?

ನಿಮ್ಮೆಲ್ಲರ ಕನಸು ಇಂದು ನನಸಾಗುತ್ತಿದೆ

ಚೆನೈ, ಬೆಂಗಳೂರು ಹೈಸ್ಪೀಡ್ ರೈಲ್ ಕಾರಿಡಾರ್ ಮಾಡಲಾಗಿದೆ. 275 ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮೈಸೂರು ತಲುಪಲಿದೆ. ಸ್ಪೇಸ್ ಸೆಕ್ಟರ್‌ನಲ್ಲಿ 25ರಷ್ಟು ಕೆಲಸ ನಡೆಯುತ್ತಿದೆ. ಇದೆಲ್ಲದರ ಲಾಭ ಬೆಂಗಳೂರಿಗೆ ಆಗುತ್ತಿದೆ. ವಿದೇಶಿ ನೇರ ಬಂಡವಾಳ ಹರಿದು ಬರುತ್ತಿದೆ. ಬೆಂಗಳೂರಿನ ಬಳಿ ಹೆಚ್.ಎ.ಎಲ್ ಹೆಲಿಕಾಪ್ಟರ್ ಕಾರ್ಖಾನೆ ಮೋದಿ ಉದ್ಘಾಟನೆ ಮಾಡಿದ್ದಾರೆ. ಮೇಕ್ ಇನ್ ಇಂಡಿಯಾ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ಒಂದೇ ಒಂದು ಪರ್ಸೆಂಟ್ ಕೂಡ ವಿದೇಶಿ ವಸ್ತು ಬಳಸುತ್ತಿಲ್ಲ. ನಿಮ್ಮೆಲ್ಲರ ಕನಸು ಇಂದು ನನಸಾಗುತ್ತಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಅಮಿತ್ ಶಾ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:13 pm, Fri, 3 March 23

1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ