AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರಿಗೆ ಅಮಿತ್ ಶಾ: ನಗರವಾಸಗಿಗಳಿಗೆ ಟ್ರಾಫಿಕ್ ಬಿಸಿ, ಪರ್ಯಾಯ ಮಾರ್ಗದ ವ್ಯವಸ್ಥೆ ಹೀಗಿದೆ

ಕರ್ನಾಟಕ ಚುನಾವಣೆ ಹಿನ್ನೆಲೆ ಮೇಲಿಂದ ಮೇಲೆ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನಾಳೆ (ಮಾರ್ಚ್ 26) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಪರಿಣಾಮ ಬೆಂಗಳೂರು ಹೃದಯ ಭಾಗದಲ್ಲಿನ ಜನರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.

ನಾಳೆ ಬೆಂಗಳೂರಿಗೆ ಅಮಿತ್ ಶಾ: ನಗರವಾಸಗಿಗಳಿಗೆ ಟ್ರಾಫಿಕ್ ಬಿಸಿ, ಪರ್ಯಾಯ ಮಾರ್ಗದ ವ್ಯವಸ್ಥೆ ಹೀಗಿದೆ
ಅಮಿತ್ ಶಾ
Rakesh Nayak Manchi
|

Updated on:Mar 25, 2023 | 7:40 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಏರಲು ಬಿಜೆಪಿ ಕೇಂದ್ರ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ನರೇಂದ್ರ ಮೋದಿ (Narendra Modi) ರಾಜ್ಯಕ್ಕೆ ಭೇಟಿ ನೀಡಿದರೆ, ನಾಳೆ (ಮಾರ್ಚ್ 26) ಬಿಜೆಪಿ ಚಾಣಕ್ಯ ಎಂದೇ ಖ್ಯಾತಿ ಪಡೆದ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪರಿಣಾಮ ನಗರದ ಹೃದಯ ಭಾಗದಲ್ಲಿ ಸಾರ್ವಜನಿಕರಿಗೆ ಟ್ರಾಫಿಕ್ (Bengaluru Traffic) ಬಿಸಿ ತಟ್ಟಲಿದ್ದು, ಸುಗಮ ಸಂಚಾರಕ್ಕೆ ಪರಿಯಾದ ಮಾರ್ಗ ಕಲ್ಪಿಸಲಾಗಿದೆ.

ಅಮಿತ್ ಶಾ ಭೇಟಿ ಹಿನ್ನೆಲೆ ಬೆಂಗಳೂರಿನ ಹೃದಯ ಭಾಗದಲ್ಲಿ ತಟ್ಟಲಿದೆ ಟ್ರಾಫಿಕ್ ಬಿಸಿ ತಟ್ಟಲಿದ್ದು, ಸುಗಮ ಸಂಚಾರಕ್ಕೆ ಸಂಚಾರಿ ಪೊಲೀಸರು ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಿದ್ದಾರೆ. ಬಳ್ಳಾರಿ ರಸ್ತೆ, ಹೆಬ್ಬಾಳ ಸರ್ಕಲ್, ಮೇಖ್ರಿ ಸರ್ಕಲ್, ಕಾವೇರಿ ಜಂಕ್ಷನ್, ರಾಜಭವನ ರಸ್ತೆ, ಇನ್ ಫೆಂಟ್ರಿ ರಸ್ತೆ, ನೃಪತುಂಗ ರಸ್ತೆ, ಕ್ವೀನ್ಸ್ ರಸ್ತೆ, ಕೆ.ಆರ್ ಸರ್ಕಲ್, ಹಡ್ಸನ್ ಸರ್ಕಲ್, ಹಳೆ ಏರ್ಪೋರ್ಟ್ ರಸ್ತೆ, ಟ್ರಿನಿಟಿ ಸರ್ಕಲ್ ಹಾಗೂ ಟೌನ್ ಹಾಲ್ ಸುತ್ತಮುತ್ತ ಪರ್ಯಾಯ ಮಾರ್ಗ ಬಳಸುವಂತೆ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.

ಕ್ರೇನ್ ಮೂಲಕ ಪ್ರತಿಮೆ ಅಳವಡಿಕೆ

ನಾಳೆ ವಿಧಾನಸೌಧ ಮುಂಭಾಗದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ಬಸವೇಶ್ವರರ ಪ್ರತಿಮೆ ಅನಾವರಣ ಹಿನ್ನೆಲೆ ಕ್ರೇನ್ ಮೂಲಕ ಕೆಂಪೇಗೌಡ, ಬಸವಣ್ಣ ಪ್ರತಿಮೆ ಅಳವಡಿಕೆ ಕಾರ್ಯ ನಡೆಯಿತು. ಈ ಪ್ರತಿಮೆಗಳನ್ನೇ ನಾಳೆ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ: ಬೀದರ್: ನಾಳೆ ಸರ್ದಾರ್ ವಲ್ಲಭಬಾಯ್ ಪಟೇಲ್ ಪ್ರತಿಮೆ ಉದ್ಘಾಟಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಾರ್ಚ್ 23ರಂದು ರಾತ್ರಿ ಬೆಂಗಳೂರಿಗೆ ಭೇಟಿ ನೀಡಿದ್ದ ಅಮಿತ್ ಶಾ ಅವರು ಇದೀಗ ಮತ್ತೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಲ್ಲಿ ಕೆಂಪೇಗೌಡ ಹಾಗೂ ಬಸವರೇಶ್ವರರ ಪ್ರತಿಮೆ ಅನಾವರಣ ಮಾಡಿದ ನಂತರ ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೊರ್ಟಾ ಗ್ರಾಮದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯ ಬಿಜೆಪಿ ಯುವ ಮೋರ್ಚಾ ಸಂಕಲ್ಪದಿಂದ ಶುರುವಾಗಿರುವ ಈ ಹುತಾತ್ಮ ಸ್ಮಾರಕವನ್ನ 2014 ಸೆಪ್ಟಂಬರ್ 17 ರಂದು ಆಗಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೂಮಿ ಪೂಜೆ ನೇರವೇರಿಸಿದ್ದರು. ಇದೀಗ ಲೋಕಾರ್ಪಣೆಯನ್ನು ಇವರೇ ಮಾಡುತ್ತಿದ್ದಾರೆ.

ಗೊರ್ಟಾ ಗ್ರಾಮದ ಹೊರವಲಯದಲ್ಲಿರುವ 2 ಎಕರೆ 30 ಗುಂಟೆ ಪ್ರದೇಶದಲ್ಲಿ 30 ಅಡಿ ಉದ್ದದ ಉತಾತ್ಮರ ಸ್ಮಾಕರ, 103 ಅಡಿ ಉದ್ದದ ಧ್ವಜಸ್ಥಂಬ, ಧ್ವಜಸ್ಥಂಭದ ಮೇಲೆ 30 ಅಡಿ (600 ಚದರ್ ಅಡಿ) ರಾಷ್ಟ್ರಧ್ವಜ ಹಾರಾಡಲಿದೆ. ಇನ್ನು ಬೆಂಗಳೂರಿನ ಶಂಕರ್ ಶಿಲ್ಪಿ ಶಾಲೆಯಲ್ಲಿ ಕೆತ್ತಸಿರುವ 11 ಅಡಿ ಎತ್ತರವಿರುವ ಸರ್ದಾರ ವಲ್ಲಭವಾಯ್ ಪಟೇಲ್ ಅವರ ಮೂರ್ತಿಯನ್ನ ಸ್ಥಾಪಿಸಿಲಾಗಿದೆ

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 pm, Sat, 25 March 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್