AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಂದು ಅಮಿತ್ ಶಾ ರೋಡ್​ ಶೋ; ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ  ಮಂಗಳವಾರ ನಗರದ ಆಡುಗೋಡಿ ಸಿಗ್ನಲ್‌ನಿಂದ ಹೊಸೂರು ರಸ್ತೆಯ ಟೋಟಲ್ ಮಾಲ್‌ವರೆಗೂ ರೋಡ್‌ ಶೋ ನಡೆಸಲಿದ್ದಾರೆ. ರೋಡ್‌ ಶೋ ನಡೆಯುವ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು ಅಮಿತ್ ಶಾ ರೋಡ್​ ಶೋ; ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ
ಅಮಿತ್ ಶಾ
Ganapathi Sharma
| Updated By: ರಮೇಶ್ ಬಿ. ಜವಳಗೇರಾ|

Updated on:May 02, 2023 | 6:51 AM

Share

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)  ಇಂದು(ಮಂಗಳವಾರ) ನಗರದ ಆಡುಗೋಡಿ ಸಿಗ್ನಲ್‌ನಿಂದ ಹೊಸೂರು ರಸ್ತೆಯ ಟೋಟಲ್ ಮಾಲ್‌ವರೆಗೂ ರೋಡ್‌ ಶೋ ನಡೆಸಲಿದ್ದಾರೆ. ರೋಡ್‌ ಶೋ ನಡೆಯುವ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಪೊಲೀಸರು ಸೂಚಿಸಿದ್ದಾರೆ. ಮರಿಗೌಡ ರಸ್ತೆಯಿಂದ ಮಡಿವಾಳ ಕಡೆ ಬರುವ ವಾಹನಗಳು ಡೇರಿ ಸರ್ಕಲ್ ಮೂಲಕ ಬನ್ನೇರುಘಟ್ಟ ರಸ್ತೆ ಮೂಲಕ ಸಂಚರಿಸಬೇಕು. ಎಲೆಕ್ಟ್ರಾನಿಕ್ ಸಿಟಿ ಕಡೆಯಿಂದ ಬರುವ ವಾಹನಗಳು ವೀರಸಂದ್ರ ಬಳಿ ನೈಸ್ ರಸ್ತೆ ಮೂಲಕ ಬನ್ನೇರುಘಟ್ಟ ರಸ್ತೆ ಮೂಲಕ ಸಂಚಾರ ಮಾಡಬೇಕು ಎಂದು ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದಾರೆ.

ಪರ್ಯಾಯ ಮಾರ್ಗಗಳ ವಿವರ

  1. ಹೊಸೂರು ಲಷ್ಕರ್ ರಸ್ತೆಯಿಂದ ಬರುವ ವಾಹನಗಳು ಅನೆಪಾಳ್ಯ ಜಂಕ್ಷನ್ ಮೂಲಕ ಬನ್ನೇರುಘಟ್ಟ ರಸ್ತೆ ಪ್ರವೇಶಿಸಬೇಕು.
  2. ಮಾರತ್ತಹಳ್ಳಿ ಕಡೆಯಿಂದ ಬರುವ ವಾಹನಗಳು ಹೆಚ್ಎಸ್ಆರ್ ಲೇಔಟ್ 14 ನೇ ಮೈನ್ ಮೂಲಕ ಹೊಸೂರು ರಸ್ತೆ ಪ್ರವೇಶಿಸಬೇಕು.
  3. ಬಿಟಿಎಂ ಲೇಔಟ್ ಕಡೆಯಿಂದ ಬರುವ ವಾಹನಗಳು ಜಯದೇವ ಜಂಕ್ಷನ್ ಮೂಲಕ ಬನ್ನೇರುಘಟ್ಟ ರಸ್ತೆ ಪ್ರವೇಶಿಸಬಹುದು.
  4. ಬೇಗೂರು, ದೇವರ ಚಿಕ್ಕನಹಳ್ಳಿಯಿಂದ ಬರುವ ವಾಹನಗಳು ಬೊಮ್ಮನಹಳ್ಳಿ ಜಂಕ್ಷನ್ ಮೂಲಕ ಹೆಚ್ಎಸ್ಆರ್ ಲೇಔಟ್ ತಲುಪುವುದು.

ಇನ್ನೂ ಕೆಲವು ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

ಕಬ್ಬನ್ ರಸ್ತೆ, ಟ್ರಿನಿಟಿ ವೃತ್ತ, ಬೈಯ್ಯಪ್ಪನಹಳ್ಳಿ, ಬೆನ್ನಿಗಾನಹಳ್ಳಿ, ಟಿನ್ ಫ್ಯಾಕ್ಟರಿ, ಹೆಚ್ಎಎಲ್, ಹಳೇ ಮದ್ರಾಸ್ ರಸ್ತೆ ಬದಲಿಗೆ ಪರ್ಯಾಯ ರಸ್ತೆ ಬಳಸಲು ನಗರ ಸಂಚಾರ ಪೊಲೀಸರು ವಾಹನ ಸವಾರರಿಗೆ ಸೂಚನೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Amit Shah: ಶಿವಮೊಗ್ಗದಲ್ಲಿ ಅಮಿತ್ ಶಾ ರೋಡ್ ಶೋ, ದಾರಿಯುದ್ದಕ್ಕೂ ಜನವೋ ಜನ

ಅಮಿತ್ ಶಾ ಅವರು ಇಂದು (ಸೋಮವಾರ) ತಿಪಟೂರು, ರಾಣೆಬೆನ್ನೂರು, ಗುಬ್ಬಿ, ಶಿವಮೊಗ್ಗಗಳಲ್ಲಿ ರೋಡ್​ ಶೋ ನಡೆಸಿದ್ದು, ನಾಳೆ ಬೆಂಗಳೂರು, ಹನೂರು, ಕೊಳ್ಳೆಗಾಲ ಹಾಗೂ ವರುಣಾದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:44 pm, Mon, 1 May 23

ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ