AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮನ; ಖಾಸಗಿ ಹೋಟೆಲ್ನಲ್ಲಿ ಸಭೆ

ನಾಳೆ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ಭೋಜನ ನಂತರ ರಾಜ್ಯ ಬಿಜೆಪಿ ಕೋರ್ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಚರ್ಚಿಸಲಿದ್ದಾರೆ.

ಇಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮನ; ಖಾಸಗಿ ಹೋಟೆಲ್ನಲ್ಲಿ ಸಭೆ
ಕೇಂದ್ರ ಗೃಹ ಸಚಿವ ಅಮಿತ್ ಶಾ
TV9 Web
| Edited By: ಆಯೇಷಾ ಬಾನು|

Updated on: May 02, 2022 | 11:57 AM

Share

ಬೆಂಗಳೂರು: ಇಂದು ರಾತ್ರಿ ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಶಾ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಖಾಸಗಿ ಹೋಟೆಲ್ನಲ್ಲೇ ಸಭೆ ನಡೆಸಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಿಂದ ಹೋಟೆಲ್ಗೆ ಸಭೆ ಶಿಫ್ಟ್ ಆಗಿದೆ. ನಾಳೆ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ಭೋಜನ ನಂತರ ರಾಜ್ಯ ಬಿಜೆಪಿ ಕೋರ್ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಚರ್ಚಿಸಲಿದ್ದಾರೆ.

ಇನ್ನು ಮತ್ತೊಂದು ಕಡೆ ದೆಹಲಿಯಿಂದ ಇಂದು ಸಂಜೆ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ಹಾಗೂ ರೇಸ್ಕೋರ್ಸ್ ರಸ್ತೆ ಹೋಟೆಲ್ನಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ರಾಜಕೀಯದ ಸ್ಥಿತಿ ತಿಳಿಯಲು ಅಮಿತ್ ಶಾ ಬರುತ್ತಿದ್ದಾರೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ, ಇಂದು ಸಂಜೆ ಕೇಂದ್ರ ಸಚಿವ ಅಮಿತ್ ಶಾರನ್ನ ಭೇಟಿಯಾಗುವೆ. ರಾಜ್ಯ ರಾಜಕೀಯದ ಸ್ಥಿತಿ ತಿಳಿಯಲು ಅಮಿತ್ ಶಾ ಬರುತ್ತಿದ್ದಾರೆ. ಚುನಾವಣಾ ವರ್ಷ ಹಿನ್ನೆಲೆಯಲ್ಲಿ ರಾಜ್ಯದ ಬಗ್ಗೆ ನರೇಂದ್ರ ಮೋದಿ, ಅಮಿತ್ ಶಾ ಹೆಚ್ಚು ಗಮನ ನೀಡಲಿದ್ದಾರೆ. ಮುಂದಿನ ಎಲೆಕ್ಷನ್ನಲ್ಲಿ 150 ಸ್ಥಾನ ಗೆಲ್ಲಲು ಗುರಿ ಇಟ್ಟಿದ್ದೇವೆ. ರಾಜ್ಯ ನಾಯಕರ ಜೊತೆ ಶಾ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಬಿಎಸ್ವೈ, ಕರ್ನಾಟಕದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನನ್ನ ಪ್ರಕಾರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದರು.

ಇನ್ನಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ