AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕರ್ನಾಟಕಕ್ಕೆ ಅಮಿತ್​ ಶಾ: ಇಲ್ಲಿದೆ ಬೀದರ್, ರಾಯಚೂರು, ಬೆಂಗಳೂರು ಪ್ರವಾಸದ ಸಂಪೂರ್ಣ ವೇಳಾಪಟ್ಟಿ

ಇಂದು ಬೀದರ್, ರಾಯಚೂರು, ಬೆಂಗಳೂರಿನಲ್ಲಿ ಅಮಿತ್ ಶಾ ಪ್ರವಾಸ ಕೈಗೊಂಡಿದ್ದಾರೆ. ಅವರ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಇಂದು ಕರ್ನಾಟಕಕ್ಕೆ ಅಮಿತ್​ ಶಾ: ಇಲ್ಲಿದೆ ಬೀದರ್, ರಾಯಚೂರು, ಬೆಂಗಳೂರು ಪ್ರವಾಸದ ಸಂಪೂರ್ಣ  ವೇಳಾಪಟ್ಟಿ
ಅಮಿತ್​ ಶಾ
ಆಯೇಷಾ ಬಾನು
|

Updated on:Mar 26, 2023 | 7:17 AM

Share

ಬೆಂಗಳೂರು: ಏಪ್ರಿಲ್ ತಿಂಗಳ ಅಂತ್ಯದಲ್ಲಿ ಅಥವಾ ಮೇ ತಿಂಗಳ ಆರಂಭದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Elections 2023) ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ಸಮಯ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರು ಸಂಚಾರ, ಪ್ರಚಾರ ಜೋರು ಮಾಡಿದ್ದಾರೆ. ಮಾರ್ಚ್ 25ರಂದು ನರೇಂದ್ರ ಮೋದಿ(Narendra Modi) ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು. ಇಂದು ಚುನಾವಣಾ ಚಾಣಕ್ಯ ಅಮಿತ್ ಶಾ(Amit Shah) ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದ ಶಾ ಇಂದು ಬೀದರ್, ರಾಯಚೂರು, ಬೆಂಗಳೂರಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಬೀದರ್​ನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗಿ

ಮೊದಲಿಗೆ ಬೀದರ್​ನಲ್ಲಿ ಅಮಿತ್ ಶಾ ವಿವಿಧ ಕಾರ್ಯಕ್ರಮದಲ್ಲಿ‌ ಭಾಗಿಯಾಗಲಿದ್ದಾರೆ. ಮುಂಜಾನೆ 10 ಗಂಟೆಗೆ ಬೀದರ್ ಏರ್ ಬೇಸ್ ನಿಂದ ಗೋರಟಾ ಗ್ರಾಮಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಇನ್ನೂರು ಕನ್ನಡಿಗರ ಹತ್ಯೆಯಾದ ಸ್ಥಳದಲ್ಲಿ ಗ್ರಾಮಸ್ಥರ ಜೊತೆಗೆ ಅರ್ಧ ಗಂಟೆ ಸಂವಾದ ನಡೆಸಲಿದ್ದಾರೆ. ನಂತರ ಗೋರಟಾ ಗ್ರಾಮದ ಕೂಗಳೆತೆ ದೂರದಲ್ಲಿರುವ ಹುತಾತ್ಮರ ‌ಸ್ಮಾರಕ 103 ಅಡಿ ಎತ್ತರದ ಧ್ವಜ ಸ್ತಂಭ, ಸರ್ದಾರ್ ವಲ್ಲಭಭಾಯ್ ಪಟೇಲ್ ರ 11 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರತಿಮೆ ಲೋಕಾರ್ಪಣೆ ‌ಬಳಿಕ ಕೇಶವ ಕಾರ್ಯ ಸಂವರ್ಧನ ಸಮೀತಿಯವರು ಆಯೋಜಿರುವ ವೇದಿಕೆ ಕಾರ್ಯಕ್ರಮದಲ್ಲಿ‌ ಭಾಗಿಯಾಗಲಿದ್ದಾರೆ. ಬೃಹತ್ ವೇದಿಕೆ ಕಾರ್ಯಕ್ರಮಕ್ಕೆ ಬೀದರ್, ತೆಲಂಗಾಣ, ಮಹಾರಾಷ್ಟ್ರ, ಕಲ್ಬುರ್ಗಿ ‌ಜಿಲ್ಲೆಯಿಂದ ಜನರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಇಂದು ಬೆಂಗಳೂರಿಗೆ ಅಮಿತ್ ಶಾ, ಟ್ರಾಫಿಕ್ ಬಿಸಿ: ಈ ರಸ್ತೆಗಳನ್ನು ಬಿಟ್ಟು ಪರ್ಯಾಯ ಮಾರ್ಗ ಬಳಸಲು ವಾಹನ ಸವಾರರಿಗೆ ಸೂಚನೆ

ಅಮಿತ್ ಶಾ ವೇಳಾಪಟ್ಟಿ ಹೀಗಿದೆ

ಬೆಳಗ್ಗೆ 10.30ಕ್ಕೆ ಗೊರಟಾ ಗ್ರಾಮಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಶಾ, ಗೊರಟಾ ಹುತಾತ್ಮ ಸ್ಮಾರಕ, ಪಟೇಲ್​ ಸ್ಮಾರಕ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1.45ಕ್ಕೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಶಾ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಬೆಂಗಳೂರಿಗೆ ಆಗಮಿಸಿ ರೇಸ್​ಕೋರ್ಸ್​ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ನಡೆಯಲಿರುವ ಗುಜರಾತ್​ ಸಮಾಜದ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6.30ಕ್ಕೆ ವಿಧಾನಸೌಧದ ಮುಂದೆ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ನಂತರ ಬೆಂಗಳೂರು ಹಬ್ಬ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ 8.30ಕ್ಕೆ ಖಾಸಗಿ ಹೋಟೆಲ್​ನಲ್ಲಿ ರಾಜ್ಯ BJP ಕೋರ್ ಕಮಿಟಿ ಸಭೆ ನಡೆಯಲಿದ್ದು ಇಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಿ ನಾಳೆ ಬೆಳಗ್ಗೆ 9 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:14 am, Sun, 26 March 23

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್