AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruimtnet Scam: ಶಾಂತಕುಮಾರ್​ ಬಂಧನ ಬೆನ್ನಲ್ಲೇ ಅಮೃತ್​ ಪೌಲ್​​ ವಿರುದ್ಧ ಗಂಭೀರ ಆರೋಪ: ಸಿಐಡಿ ವಿಚಾರಣೆ

ಅಮೃತ್ ಪಾಲ್ ವಿಚಾರಣೆಗೊಳಪಡಿಸುವ ಕುರಿತು ಈ ಹಿಂದೆಯೇ ಟಿವಿ 9 ವರದಿ ಬಿತ್ತರಿಸಿತ್ತು. ಪಿಎಸ್​ಐ ಅಕ್ರಮ ನೇಮಕಾತಿ ಸಂಬಂಧ ಇಂಚಿಂಚೂ ಮಾಹಿತಿ ಬಹಿರಂಗ ಮಾಡಲಾಗಿತ್ತು.

PSI Recruimtnet Scam: ಶಾಂತಕುಮಾರ್​ ಬಂಧನ ಬೆನ್ನಲ್ಲೇ ಅಮೃತ್​ ಪೌಲ್​​ ವಿರುದ್ಧ ಗಂಭೀರ ಆರೋಪ: ಸಿಐಡಿ ವಿಚಾರಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 26, 2022 | 3:04 PM

Share

ಬೆಂಗಳೂರು: ಪಿಎಸ್​ಐ ನೇಮಕಾತಿ ಹಗರಣ ಹಿನ್ನೆಲೆ ನಗರದ ಸಿಐಡಿ ಕಚೇರಿಯಲ್ಲಿ ಅಧಿಕಾರಿಗಳಿಂದ ಎಡಿಜಿಪಿ ಅಮೃತ್ ಪೌಲ್ ವಿಚಾರಣೆ ಮಾಡಲಾಗಿದೆ. ಈ ಹಿಂದೆ ಪೊಲೀಸ್ ನೇಮಕಾತಿ ವಿಭಾಗದಲ್ಲಿ ಅಮೃತ್ ಪೌಲ್ ಎಡಿಜಿಪಿ ಆಗಿದ್ದರು. ಪೊಲೀಸ್ ನೇಮಕಾತಿ ವಿಭಾಗದ ಶಾಂತಕುಮಾರ್ ಬಂಧನವಾಗಿತ್ತು. ನೇಮಕಾತಿ ವಿಭಾಗದಲ್ಲಿ ಡಿವೈಎಸ್​ಪಿ ಆಗಿದ್ದ ಶಾಂತಕುಮಾರ್, ಶಾಂತಕುಮಾರ್​ ಬಂಧನ ಬೆನ್ನಲ್ಲೇ ಪೌಲ್​ ವಿರುದ್ಧ ಗಂಭೀರ ಆರೋಪ ಕೇಳಿಬಂದಿತ್ತು. ನಿನ್ನೆ ಸಂಜೆ 4.30ರಿಂದ 7 ಗಂಟೆಯವರೆಗೆ ಅಮೃತ್​ ಪೌಲ್​ ವಿಚಾರಣೆ ಮಾಡಿದ್ದು, ಇಂದು ಬೆಳಗ್ಗೆ 11 ಗಂಟೆಯಿಂದ ಮತ್ತೆ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: ನಂಜನಗೂಡು ನಂಜುಂಡೇಶ್ವರನ ಸನ್ನಿಧಿಯಲ್ಲಿ ನೆರವೇರಿದ ಉಚಿತ ಸಾಮೂಹಿಕ ವಿವಾಹ

ಅಮೃತ್ ಪಾಲ್ ವಿಚಾರಣೆಗೊಳಪಡಿಸುವ ಕುರಿತು ಈ ಹಿಂದೆಯೇ ಟಿವಿ 9 ವರದಿ ಬಿತ್ತರಿಸಿತ್ತು. ಪಿಎಸ್​ಐ ಅಕ್ರಮ ನೇಮಕಾತಿ ಸಂಬಂಧ ಇಂಚಿಂಚೂ ಮಾಹಿತಿ ಬಹಿರಂಗ ಮಾಡಲಾಗಿತ್ತು. ಟಿವಿ 9 ವರದಿ ಬೆನ್ನಲ್ಲೇ ಡಿವೈಎಸ್​ಪಿ ಶಾಂತ ಕುಮಾರ್ ಬಂಧಿಸಿದ್ದ ಸಿಐಡಿ, ನೇಮಕಾತಿ ವಿಭಾಗದ ಕೆಲ ಅಧಿಕಾರಿ ಮತ್ತು ಸಿಬ್ಬಂದಿಗಳನ್ನ ಬಂಧಿಸಿ ತೀವ್ರ ವಿಚಾರಣೆ ನಡೆಸಿತ್ತು. ಅಕ್ರಮ ಸಂಬಂಧ ಹಲವು ಮಹತ್ವದ ಸಾಕ್ಷಿಗಳನ್ನ ಕಲೆಹಾಕಲಾಗಿತ್ತು. ನೇಮಕಾತಿ ವಿಭಾಗದಲ್ಲಿ ಎಡಿಜಿಪಿ ಅಮೃತ್​ ಪೌಲ್​ ನಿನ್ನೆ ಸಂಜೆ ಸಿಐಡಿಯಿಂದ ವಿಚಾರಣೆ ಮಾಡಲಾಗುತ್ತಿದೆ. ಸದ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು.

ಸಂಜೆ ವೇಳೆಗೆ ಅಮೃತ್ ಪೌಲ್ ಬಂಧನ ಸಾಧ್ಯತೆ..!

ಸಿಐಡಿ ಅಧಿಕಾರಿಗಳಿಂದ ಇಂದೇ ಅಮೃತ್ ಪೌಲ್ ಬಂಧನ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳು ಸಿಕ್ಕಿವೆ. ಅಮೃತ್ ಪೌಲ್ ಸಹಕಾರ ಇಲ್ಲದೆ ಅಕ್ರಮ ನಡೆಯಲು ಸಾಧ್ಯವಿಲ್ಲ. ಇಂದು ವಿಚಾರಣೆ ವೇಳೆ ಸೂಕ್ತ ಉತ್ತರ ನೀಡದಿದ್ದಲ್ಲಿ ಸಂಜೆ ವೇಳೆಗೆ ಸಿಐಡಿ ಅಧಿಕಾರಿಗಳಿಂದ ಬಂಧನವಾಗುವ ಸಾಧ್ಯತೆಯಿದೆ.

ಮತ್ತೆ ಸಿಐಡಿ ವಶಕ್ಕೆ ಶಾಂತಕುಮಾರ್

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ಡಿವೈಎಸ್​ಪಿ ಶಾಂತಕುಮಾರ್ ಅವರನ್ನು ಸಿಐಡಿ ವಶಕ್ಕೆ ತೆಗೆದುಕೊಂಡಿದೆ. ಸಿಐಡಿ ಕಸ್ಟಡಿಗೆ ನೀಡಿದ್ದ ಅವಧಿ ಮುಗಿದಿದ್ದ ಹಿನ್ನೆಲೆಯಲ್ಲಿ ನಿನ್ನೆ ಅವರನ್ನು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ಗೆ ಸಿಐಡಿ ಹಾಜರುಪಡಿಸಿತ್ತು. ಸಿಐಡಿ ಪರ ವಕೀಲರ ಮನವಿ ಮೇರೆಗೆ ಶಾಂತಕುಮಾರ್​ನನ್ನು ನ್ಯಾಯಾಲಯವು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ ಕೊಟ್ಟಿದೆ.

6 ಜನರ ಬಂಧನ

ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 6 ಮಂದಿಯನ್ನು ಸಿಐಡಿ ಬಂಧಿಸಿದೆ. ಇವರೆಲ್ಲರೂ ನೇಮಕಾತಿ ವಿಭಾಗದ ಡಿವೈಎಸ್​ಪಿ ಶಾಂತಕುಮಾರ್​ ಸೂಚನೆಯಂತೆ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಬಂಧಿತ ಆರು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಪೈಕಿ ಎಎಚ್​ಸಿ ಶ್ರೀಧರ್ ಬಳಿ ಸುಮಾರು ₹ 2 ಕೋಟಿ ನಗದು ಪತ್ತೆಯಾಗಿತ್ತು. ಹಿರಿಯ ಅಧಿಕಾರಿಗಳ ಸೂಚನೆಯಂತೆ ಹಣ ಪಡೆಯಲಾಗಿತ್ತು ಎಂಬ ಅಂಶವೂ ತನಿಖೆ ವೇಳೆ ಪತ್ತೆಯಾಯಿತು. ಸದ್ಯ ಐದರಿಂದ ಆರು ಅಭ್ಯರ್ಥಿಗಳಿಗೆ ಸೇರಿದ್ದ ಹಣ ಮಾತ್ರ ಸಿಕ್ಕಿದೆ. ಸಿಐಡಿ ತನಿಖೆ ವೇಳೆ ಇನ್ನಷ್ಟು ಹಣ ಪತ್ತೆಯಾಗುವ ಸಾಧ್ಯತೆಯಿದೆ. ಪ್ರಥಮ ದರ್ಜೆ ಗುಮಾಸ್ತ ಹರ್ಷನ ಮೂಲಕವೂ ಸಾಕಷ್ಟು ಅಕ್ರಮ ಅಗಿದೆ ಎಂದು ತಿಳಿಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:00 pm, Thu, 26 May 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ