AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಬೆಂಗಳೂರಿನಲ್ಲಿ ಮುಂದಿನ ವಾರ ಆರಂಭ; ನಂದಿನಿ ಜತೆ ಪೈಪೋಟಿ ಇಲ್ಲವೆಂದ ಕಂಪನಿ

ರಾಜ್ಯ ರಾಜಧಾನಿಯಲ್ಲಿ ಅಮುಲ್ ಹಾಲು, ಮೊಸರು ಮಾರಾಟ ವಿಚಾರವಾಗಿ ರಾಜಕೀಯ ವಾಕ್ಸಮರ ತೀವ್ರಗೊಂಡಿರುವ ಬೆನ್ನಲ್ಲೇ ಮುಂದಿನ ವಾರ ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಆರಂಭವಾಗಲಿದೆ ಎಂದು ಕಂಪನಿಯ ಎಂಡಿ ಜಯನ್ ಮೆಹ್ತಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.

ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಬೆಂಗಳೂರಿನಲ್ಲಿ ಮುಂದಿನ ವಾರ ಆರಂಭ; ನಂದಿನಿ ಜತೆ ಪೈಪೋಟಿ ಇಲ್ಲವೆಂದ ಕಂಪನಿ
ಅಮುಲ್Image Credit source: Twitter
Ganapathi Sharma
|

Updated on: Apr 08, 2023 | 1:42 PM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಮುಲ್ ಹಾಲು, ಮೊಸರು (Amul) ಮಾರಾಟ ವಿಚಾರವಾಗಿ ರಾಜಕೀಯ ವಾಕ್ಸಮರ ತೀವ್ರಗೊಂಡಿರುವ ಬೆನ್ನಲ್ಲೇ ಮುಂದಿನ ವಾರ ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಆರಂಭವಾಗಲಿದೆ ಎಂದು ಕಂಪನಿಯ ಎಂಡಿ ಜಯನ್ ಮೆಹ್ತಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಆಂಧ್ರದ ಮದನಪಲ್ಲಿಯಿಂದ ಬೆಂಗಳೂರಿಗೆ ಹಾಲು, ಮೊಸರು ಸರಬರಾಜಾಗಲಿದೆ. ಇ-ಕಾರ್ಮಸ್ ಮೂಲಕ ಅಮುಲ್​ ಹಾಲು, ಮೊಸರು ಮಾರಾಟ ಮಾಡುತ್ತೇವೆ. ನಂದಿನಿ ಅಥವಾ ಕರ್ನಾಟಕ ಹಾಲು ಉತ್ಪಾದಕರ ಜತೆ ಪೈಪೋಟಿ ನಡೆಸಲ್ಲ ಎಂದು ಅವರು ಹೇಳಿದ್ದಾರೆ.

ಅಮುಲ್​​ ಹಾಗೂ ಕೆಎಂಎಫ್ ಸಂಬಂಧ ಚೆನ್ನಾಗಿದೆ. ನಂದಿನಿ ಹಾಲಿನ ಮಳಿಗೆ ರೀತಿ ನಾವು ಸ್ಟಾಲ್, ಬೂತ್​ ಹಾಕುವುದಿಲ್ಲ ಎಂದು ಜಯನ್ ಮೆಹ್ತಾ ಮಾಹಿತಿ ನೀಡಿದ್ದಾರೆ.

ಯಾರಿಗೆ ಅಮುಲ್ ಉತ್ಪನ್ನ ಬೇಕೋ ಅವರು ಇ- ಕಾರ್ಮಸ್ ಪ್ಲಾಟ್​ಫಾರ್ಮ್ ಮೂಲಕ ಖರೀದಿ ಮಾಡಬಹುದು. ಬೆಂಗಳೂರಿನಿಂದ‌ 100 ಕಿಲೋ ಮೀಟರ್ ದೂರದ ಮದನಪಲ್ಲಿಯಲ್ಲಿ ಅಮುಲ್ ಪ್ಲಾಂಟ್ ಇದೆ. ಅಲ್ಲಿಂದ ಕಳುಹಿಸುತ್ತೇವೆಯೇ ವಿನಃ ನಂದಿನಿಯ ರೀತಿ ಬೂತ್, ಮಳಿಗೆಗಳನ್ನು ತೆರೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್​, ಕಾಂಗ್ರೆಸ್​ನಿಂದ ಅಮುಲ್ ವಿಚಾರದಲ್ಲಿ ರಾಜಕೀಯ; ಸಿಎಂ ಬೊಮ್ಮಾಯಿ

ರಾಜ್ಯದ ನಂದಿನಿಯನ್ನು ಮುಗಿಸಲು ಅಮುಲ್​ ಮುಂದಾಗಿದೆ ಎಂಬ ಪ್ರತಿಪಕ್ಷಗಳ ನಾಯಕರ ಅರೋಪದ ಸಂದರ್ಭದಲ್ಲೇ ಜಯನ್ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.

ಅಮುಲ್ ಜತೆ ಕೆಎಂಎಫ್​ ವಿಲೀನಕ್ಕೆ ಹುನ್ನಾರ; ನಾರಾಯಣಗೌಡ

ಅಮುಲ್ ಜತೆ ಕೆಎಂಎಫ್​ ವಿಲೀನಕ್ಕೆ ಹುನ್ನಾರ ನಡೆಯುತ್ತಿದೆ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ‘ಟಿವಿ9’ಗೆ ಹೇಳಿಕೆ ನೀಡಿದ್ದಾರೆ. ಕೆಎಂಎಫ್​ ಕರ್ನಾಟಕ ರೈತರ ಬದುಕು. ಅಮುಲ್ ಪದಾರ್ಥಗಳನ್ನು ಮಾರಾಟ ಮಾಡಲು ಬಿಡುವುದಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿಕೊಳ್ಳಬಾರದು. ಅಮುಲ್​ ಉತ್ಪನ್ನಗಳನ್ನು ವಿರೋಧಿಸಿ ಚಳವಳಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ