AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಬೆಂಗಳೂರಿನಲ್ಲಿ ಮುಂದಿನ ವಾರ ಆರಂಭ; ನಂದಿನಿ ಜತೆ ಪೈಪೋಟಿ ಇಲ್ಲವೆಂದ ಕಂಪನಿ

ರಾಜ್ಯ ರಾಜಧಾನಿಯಲ್ಲಿ ಅಮುಲ್ ಹಾಲು, ಮೊಸರು ಮಾರಾಟ ವಿಚಾರವಾಗಿ ರಾಜಕೀಯ ವಾಕ್ಸಮರ ತೀವ್ರಗೊಂಡಿರುವ ಬೆನ್ನಲ್ಲೇ ಮುಂದಿನ ವಾರ ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಆರಂಭವಾಗಲಿದೆ ಎಂದು ಕಂಪನಿಯ ಎಂಡಿ ಜಯನ್ ಮೆಹ್ತಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.

ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಬೆಂಗಳೂರಿನಲ್ಲಿ ಮುಂದಿನ ವಾರ ಆರಂಭ; ನಂದಿನಿ ಜತೆ ಪೈಪೋಟಿ ಇಲ್ಲವೆಂದ ಕಂಪನಿ
ಅಮುಲ್Image Credit source: Twitter
ಗಣಪತಿ ಶರ್ಮಾ
|

Updated on: Apr 08, 2023 | 1:42 PM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಮುಲ್ ಹಾಲು, ಮೊಸರು (Amul) ಮಾರಾಟ ವಿಚಾರವಾಗಿ ರಾಜಕೀಯ ವಾಕ್ಸಮರ ತೀವ್ರಗೊಂಡಿರುವ ಬೆನ್ನಲ್ಲೇ ಮುಂದಿನ ವಾರ ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಆರಂಭವಾಗಲಿದೆ ಎಂದು ಕಂಪನಿಯ ಎಂಡಿ ಜಯನ್ ಮೆಹ್ತಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಆಂಧ್ರದ ಮದನಪಲ್ಲಿಯಿಂದ ಬೆಂಗಳೂರಿಗೆ ಹಾಲು, ಮೊಸರು ಸರಬರಾಜಾಗಲಿದೆ. ಇ-ಕಾರ್ಮಸ್ ಮೂಲಕ ಅಮುಲ್​ ಹಾಲು, ಮೊಸರು ಮಾರಾಟ ಮಾಡುತ್ತೇವೆ. ನಂದಿನಿ ಅಥವಾ ಕರ್ನಾಟಕ ಹಾಲು ಉತ್ಪಾದಕರ ಜತೆ ಪೈಪೋಟಿ ನಡೆಸಲ್ಲ ಎಂದು ಅವರು ಹೇಳಿದ್ದಾರೆ.

ಅಮುಲ್​​ ಹಾಗೂ ಕೆಎಂಎಫ್ ಸಂಬಂಧ ಚೆನ್ನಾಗಿದೆ. ನಂದಿನಿ ಹಾಲಿನ ಮಳಿಗೆ ರೀತಿ ನಾವು ಸ್ಟಾಲ್, ಬೂತ್​ ಹಾಕುವುದಿಲ್ಲ ಎಂದು ಜಯನ್ ಮೆಹ್ತಾ ಮಾಹಿತಿ ನೀಡಿದ್ದಾರೆ.

ಯಾರಿಗೆ ಅಮುಲ್ ಉತ್ಪನ್ನ ಬೇಕೋ ಅವರು ಇ- ಕಾರ್ಮಸ್ ಪ್ಲಾಟ್​ಫಾರ್ಮ್ ಮೂಲಕ ಖರೀದಿ ಮಾಡಬಹುದು. ಬೆಂಗಳೂರಿನಿಂದ‌ 100 ಕಿಲೋ ಮೀಟರ್ ದೂರದ ಮದನಪಲ್ಲಿಯಲ್ಲಿ ಅಮುಲ್ ಪ್ಲಾಂಟ್ ಇದೆ. ಅಲ್ಲಿಂದ ಕಳುಹಿಸುತ್ತೇವೆಯೇ ವಿನಃ ನಂದಿನಿಯ ರೀತಿ ಬೂತ್, ಮಳಿಗೆಗಳನ್ನು ತೆರೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್​, ಕಾಂಗ್ರೆಸ್​ನಿಂದ ಅಮುಲ್ ವಿಚಾರದಲ್ಲಿ ರಾಜಕೀಯ; ಸಿಎಂ ಬೊಮ್ಮಾಯಿ

ರಾಜ್ಯದ ನಂದಿನಿಯನ್ನು ಮುಗಿಸಲು ಅಮುಲ್​ ಮುಂದಾಗಿದೆ ಎಂಬ ಪ್ರತಿಪಕ್ಷಗಳ ನಾಯಕರ ಅರೋಪದ ಸಂದರ್ಭದಲ್ಲೇ ಜಯನ್ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.

ಅಮುಲ್ ಜತೆ ಕೆಎಂಎಫ್​ ವಿಲೀನಕ್ಕೆ ಹುನ್ನಾರ; ನಾರಾಯಣಗೌಡ

ಅಮುಲ್ ಜತೆ ಕೆಎಂಎಫ್​ ವಿಲೀನಕ್ಕೆ ಹುನ್ನಾರ ನಡೆಯುತ್ತಿದೆ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ‘ಟಿವಿ9’ಗೆ ಹೇಳಿಕೆ ನೀಡಿದ್ದಾರೆ. ಕೆಎಂಎಫ್​ ಕರ್ನಾಟಕ ರೈತರ ಬದುಕು. ಅಮುಲ್ ಪದಾರ್ಥಗಳನ್ನು ಮಾರಾಟ ಮಾಡಲು ಬಿಡುವುದಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿಕೊಳ್ಳಬಾರದು. ಅಮುಲ್​ ಉತ್ಪನ್ನಗಳನ್ನು ವಿರೋಧಿಸಿ ಚಳವಳಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ