AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಬೆಂಗಳೂರಿನಲ್ಲಿ ಮುಂದಿನ ವಾರ ಆರಂಭ; ನಂದಿನಿ ಜತೆ ಪೈಪೋಟಿ ಇಲ್ಲವೆಂದ ಕಂಪನಿ

ರಾಜ್ಯ ರಾಜಧಾನಿಯಲ್ಲಿ ಅಮುಲ್ ಹಾಲು, ಮೊಸರು ಮಾರಾಟ ವಿಚಾರವಾಗಿ ರಾಜಕೀಯ ವಾಕ್ಸಮರ ತೀವ್ರಗೊಂಡಿರುವ ಬೆನ್ನಲ್ಲೇ ಮುಂದಿನ ವಾರ ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಆರಂಭವಾಗಲಿದೆ ಎಂದು ಕಂಪನಿಯ ಎಂಡಿ ಜಯನ್ ಮೆಹ್ತಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.

ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಬೆಂಗಳೂರಿನಲ್ಲಿ ಮುಂದಿನ ವಾರ ಆರಂಭ; ನಂದಿನಿ ಜತೆ ಪೈಪೋಟಿ ಇಲ್ಲವೆಂದ ಕಂಪನಿ
ಅಮುಲ್Image Credit source: Twitter
ಗಣಪತಿ ಶರ್ಮಾ
|

Updated on: Apr 08, 2023 | 1:42 PM

Share

ಮುಖ್ಯಾಂಶಗಳು

  • ಮುಂದಿನ ವಾರ ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಆರಂಭ.
  • ಆಂಧ್ರದ ಮದನಪಲ್ಲಿಯಿಂದ ಬೆಂಗಳೂರಿಗೆ ಹಾಲು, ಮೊಸರು ಸರಬರಾಜು.
  • ಅಮುಲ್ ಹಾಲು, ಮೊಸರು ಮಾರಾಟ ವಿಚಾರವಾಗಿ ಮುಮದುವರಿದ ರಾಜಕೀಯ ವಾಕ್ಸಮರ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಮುಲ್ ಹಾಲು, ಮೊಸರು (Amul) ಮಾರಾಟ ವಿಚಾರವಾಗಿ ರಾಜಕೀಯ ವಾಕ್ಸಮರ ತೀವ್ರಗೊಂಡಿರುವ ಬೆನ್ನಲ್ಲೇ ಮುಂದಿನ ವಾರ ಅಮುಲ್ ಕ್ವಿಕ್ ಇ-ಕಾಮರ್ಸ್ ಪ್ಲಾಟ್​ಫಾರ್ಮ್ ಆರಂಭವಾಗಲಿದೆ ಎಂದು ಕಂಪನಿಯ ಎಂಡಿ ಜಯನ್ ಮೆಹ್ತಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಆಂಧ್ರದ ಮದನಪಲ್ಲಿಯಿಂದ ಬೆಂಗಳೂರಿಗೆ ಹಾಲು, ಮೊಸರು ಸರಬರಾಜಾಗಲಿದೆ. ಇ-ಕಾರ್ಮಸ್ ಮೂಲಕ ಅಮುಲ್​ ಹಾಲು, ಮೊಸರು ಮಾರಾಟ ಮಾಡುತ್ತೇವೆ. ನಂದಿನಿ ಅಥವಾ ಕರ್ನಾಟಕ ಹಾಲು ಉತ್ಪಾದಕರ ಜತೆ ಪೈಪೋಟಿ ನಡೆಸಲ್ಲ ಎಂದು ಅವರು ಹೇಳಿದ್ದಾರೆ.

ಅಮುಲ್​​ ಹಾಗೂ ಕೆಎಂಎಫ್ ಸಂಬಂಧ ಚೆನ್ನಾಗಿದೆ. ನಂದಿನಿ ಹಾಲಿನ ಮಳಿಗೆ ರೀತಿ ನಾವು ಸ್ಟಾಲ್, ಬೂತ್​ ಹಾಕುವುದಿಲ್ಲ ಎಂದು ಜಯನ್ ಮೆಹ್ತಾ ಮಾಹಿತಿ ನೀಡಿದ್ದಾರೆ.

ಯಾರಿಗೆ ಅಮುಲ್ ಉತ್ಪನ್ನ ಬೇಕೋ ಅವರು ಇ- ಕಾರ್ಮಸ್ ಪ್ಲಾಟ್​ಫಾರ್ಮ್ ಮೂಲಕ ಖರೀದಿ ಮಾಡಬಹುದು. ಬೆಂಗಳೂರಿನಿಂದ‌ 100 ಕಿಲೋ ಮೀಟರ್ ದೂರದ ಮದನಪಲ್ಲಿಯಲ್ಲಿ ಅಮುಲ್ ಪ್ಲಾಂಟ್ ಇದೆ. ಅಲ್ಲಿಂದ ಕಳುಹಿಸುತ್ತೇವೆಯೇ ವಿನಃ ನಂದಿನಿಯ ರೀತಿ ಬೂತ್, ಮಳಿಗೆಗಳನ್ನು ತೆರೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್​, ಕಾಂಗ್ರೆಸ್​ನಿಂದ ಅಮುಲ್ ವಿಚಾರದಲ್ಲಿ ರಾಜಕೀಯ; ಸಿಎಂ ಬೊಮ್ಮಾಯಿ

ರಾಜ್ಯದ ನಂದಿನಿಯನ್ನು ಮುಗಿಸಲು ಅಮುಲ್​ ಮುಂದಾಗಿದೆ ಎಂಬ ಪ್ರತಿಪಕ್ಷಗಳ ನಾಯಕರ ಅರೋಪದ ಸಂದರ್ಭದಲ್ಲೇ ಜಯನ್ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.

ಅಮುಲ್ ಜತೆ ಕೆಎಂಎಫ್​ ವಿಲೀನಕ್ಕೆ ಹುನ್ನಾರ; ನಾರಾಯಣಗೌಡ

ಅಮುಲ್ ಜತೆ ಕೆಎಂಎಫ್​ ವಿಲೀನಕ್ಕೆ ಹುನ್ನಾರ ನಡೆಯುತ್ತಿದೆ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ‘ಟಿವಿ9’ಗೆ ಹೇಳಿಕೆ ನೀಡಿದ್ದಾರೆ. ಕೆಎಂಎಫ್​ ಕರ್ನಾಟಕ ರೈತರ ಬದುಕು. ಅಮುಲ್ ಪದಾರ್ಥಗಳನ್ನು ಮಾರಾಟ ಮಾಡಲು ಬಿಡುವುದಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿಕೊಳ್ಳಬಾರದು. ಅಮುಲ್​ ಉತ್ಪನ್ನಗಳನ್ನು ವಿರೋಧಿಸಿ ಚಳವಳಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ