AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತ ಜಾಮೀನಿಗಾಗಿ ಹೈಕೋರ್ಟ್​ಗೆ ಅರ್ಜಿ, ಅತ್ತ ಜೈಲಿನಲ್ಲಿ ಪ್ರಜ್ವಲ್​ ಭೇಟಿಯಾದ ರೇವಣ್ಣ

3 ಪ್ರಕರಣಗಳಲ್ಲಿ ಜಾಮೀನು ಕೋರಿ ಹೈಕೋರ್ಟ್​ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಸೆಷನ್ಸ್ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅದರ ಬೆನ್ನಲ್ಲೇ ತಂದೆ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿ ಮಗನನ್ನು ಭೇಟಿಯಾಗಿದ್ದಾರೆ. ಇನ್ನು ಮತ್ತೋರ್ವ ಪುತ್ರ ಸೂರಜ್​ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್​ಗೆ ಸಂಬಂಧಿಸಿದ ಸೂರಜ್ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ನಾಳೆಗೆ ಮುಂದೂಡಿದೆ.

ಇತ್ತ ಜಾಮೀನಿಗಾಗಿ ಹೈಕೋರ್ಟ್​ಗೆ ಅರ್ಜಿ, ಅತ್ತ ಜೈಲಿನಲ್ಲಿ ಪ್ರಜ್ವಲ್​ ಭೇಟಿಯಾದ ರೇವಣ್ಣ
ಜೈಲಿನಲ್ಲಿ ಪ್ರಜ್ವಲ್​ ಭೇಟಿಯಾದ ರೇವಣ್ಣ
Ramesha M
| Edited By: |

Updated on: Jul 03, 2024 | 4:35 PM

Share

ಬೆಂಗಳೂರು, ಜು.03: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ಅವರನ್ನು ಹೊರತರಲು ತಂದೆ ಹೆಚ್​ಡಿ ರೇವಣ್ಣ(HD Revanna) ಹರಸಾಹಸ ಪಡುತ್ತಿದ್ದಾರೆ. ಅದರಂತೆ 3 ಪ್ರಕರಣಗಳಲ್ಲಿ ಜಾಮೀನು ಕೋರಿ ಹೈಕೋರ್ಟ್​ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಸೆಷನ್ಸ್ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅದರ ಬೆನ್ನಲ್ಲೇ ತಂದೆ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿ ಮಗನನ್ನು ಭೇಟಿಯಾಗಿದ್ದಾರೆ.

ಜೈಲಿನಲ್ಲಿ ಪ್ರಜ್ವಲ್​ ಭೇಟಿಯಾದ ರೇವಣ್ಣ

ಇನ್ನು ಅತ್ತ ಜಾಮೀನು ಅರ್ಜಿ ತಿರಸ್ಕರಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಆಗಮಿಸಿ, ಪರಪ್ಪನ ಅಗ್ರಹಾರ ಕ್ವಾರಂಟೈನ್​ ಜೈಲಿನಲ್ಲಿರುವ ಪುತ್ರ ಪ್ರಜ್ವಲ್​​ನ್ನು ಭೇಟಿ ಆಗಿದ್ದಾರೆ. ಈ ವೇಳೆ ಸುಮಾರು 30 ನಿಮಿಷ ಮಾತನಾಡಿದ ಅವರು, ಮುಂದಿನ ಕಾನೂನು ಹೋರಾಟದ ಕುರಿತು ಮಗನ ಜೊತೆ ಚರ್ಚೆ ಮಾಡಿ ಹೊರಬಂದಿದ್ದಾರೆ. ಇನ್ನು ಇದೇ ಜುಲೈ 1ರಂದು ತಾಯಿ ಭವಾನಿ, ಪ್ರಜ್ವಲ್ ಭೇಟಿಯಾಗಿ ತೆರಳಿದ್ದರು. ಅದರ ಬೆನ್ನಲ್ಲೇ ಇದೀಗ ತಂದೆ ಆಗಮಿಸಿದ್ದಾರೆ.

ಇದನ್ನೂ ಓದಿ:ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ಹೆಚ್ ಡಿ ರೇವಣ್ಣ

ರೇವಣ್ಣ ಮತ್ತೋರ್ವ ಪುತ್ರ ಸೂರಜ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಇನ್ನು ರೇವಣ್ಣ ಮತ್ತೋರ್ವ ಪುತ್ರ ಸೂರಜ್​ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್​ಗೆ ಸಂಬಂಧಿಸಿದ ಸೂರಜ್ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ನಾಳೆಗೆ ಮುಂದೂಡಿದ್ದು, ನಾಳೆ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಪರ ವಕೀಲರಿಗೆ ಸೂಚನೆ ನೀಡಿದೆ. ಈ ಹಿನ್ನಲೆ ಪರಪ್ಪನ ಅಗ್ರಹಾರ ಜೈಲಿನತ್ತ ಸೂರಜ್ ರೇವಣ್ಣನನ್ನು ಪೊಲೀಸರು ಕರೆದೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​