AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತನ್ನ ಏರಿಯಾ ಬಿಟ್ಟು ಬೇರೆ ಏರಿಯಾದಲ್ಲಿ ಪ್ಯಾಸೆಂಜರ್ ಪಿಕ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ

ನಿಮ್ಮ ಏರಿಯಾ ಯಾವುದು? ಯಾಕೆ ನಮ್ಮ ಏರಿಯಾದಲ್ಲಿ ಪ್ಯಾಸೆಂಜರ್​ನ ಪಿಕ್ ಮಾಡಿದೆ ಎಂದು ನಾಲ್ಕೈದು ಆಟೋ ಡ್ರೈವರ್​ಗಳು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರಂತೆ. ಹಲ್ಲೆ ಮಾಡಿ ಬೆದರಿಕೆ ಹಾಕುವ ದೃಶ್ಯ ಹಿಂದೆ ಬರ್ತಿದ್ದ ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಂಗಳೂರು: ತನ್ನ ಏರಿಯಾ ಬಿಟ್ಟು ಬೇರೆ ಏರಿಯಾದಲ್ಲಿ ಪ್ಯಾಸೆಂಜರ್ ಪಿಕ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ
ಆಟೋ ಚಾಲಕನಿಗೆ ಆಟೋ ಚಾಲಕರಿಂದಲೇ ಬೆದರಿಕೆ
Shivaprasad B
| Updated By: ಆಯೇಷಾ ಬಾನು|

Updated on:Aug 20, 2023 | 7:13 AM

Share

ಬೆಂಗಳೂರು, ಆ.20: ನಗರದಲ್ಲಿ ಪ್ಯಾಸೆಂಜರ್ ವಿಚಾರವಾಗಿ ಆಟೋ ಚಾಲಕರ ನಡುವೆ ಕಿರಿಕ್ ಆಗಿದ್ದು ಆಟೋ ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ತನ್ನ ಏರಿಯಾ ಬಿಟ್ಟು ಬೇರೆ ಏರಿಯಾದಲ್ಲಿ ಪ್ಯಾಸೆಂಜರ್ ಪಿಕ್ ಮಾಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆಟೋ ಚಾಲಕ ತನ್ನ ಏರಿಯಾ ಬಿಟ್ಟು ಬೇರೆ ಏರಿಯಾದಲ್ಲಿ ಪ್ಯಾಸೆಂಜರ್ ಪಿಕ್ ಮಾಡಿದ ಎಂಬ ಕಾರಣಕ್ಕೆ ಇತರೆ ನಾಲ್ಕೈದು ಆಟೋ ಚಾಲಕರು ಫಾಲೋ ಮಾಡಿಕೊಂಡು ಬಂದು ನಾಗಸಂದ್ರ ಮೆಟ್ರೋ ಸ್ಟೇಷನ್‌ ಬಳಿ ಆಟೋ ತಡೆದು ಚಾಲಕನನ್ನ ಹಿಗ್ಗಾಮುಗ್ಗ ಥಳಿಸಿದ್ದಾರೆ.

ನಿಮ್ಮ ಏರಿಯಾ ಯಾವುದು? ಯಾಕೆ ನಮ್ಮ ಏರಿಯಾದಲ್ಲಿ ಪ್ಯಾಸೆಂಜರ್​ನ ಪಿಕ್ ಮಾಡಿದೆ ಎಂದು ನಾಲ್ಕೈದು ಆಟೋ ಡ್ರೈವರ್​ಗಳು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರಂತೆ. ಹಲ್ಲೆ ಮಾಡಿ ಬೆದರಿಕೆ ಹಾಕುವ ದೃಶ್ಯ ಹಿಂದೆ ಬರ್ತಿದ್ದ ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಲಾಟೆ ಆಗುತ್ತಿರುವುದನ್ನು ನೋಡಿ ಪ್ರಯಾಣಿಕ ಆಟೋ ಇಳಿದಿದ್ದಾನೆ.

ಸದ್ಯ ಶುಭಮ್ ಗುಪ್ತ ಎಂಬ ವ್ಯಕ್ತಿ ಈ ಘಟನೆ ಸಂಬಂಧ ವಿಡಿಯೋ ಸಮೇತ ಬೆಂಗಳೂರು ಪೊಲೀಸ್ ಪೇಜ್​ಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ಆಟೋ ಡ್ರೈವರ್​ಗಳು ಪ್ರಯಾಣಿಕರನ್ನ ಬೇರೆ ಏರಿಯಾದಲ್ಲಿ ಪಿಕ್ ಮಾಡಬಾರದ? ಆ ರೀತಿಯ ರೂಲ್ಸ್ ಏನಾದ್ರೂ ಇದೀಯಾ ಎಂದು ಟ್ವೀಟ್ ಮಾಡಿದ್ದಾರೆ. ಸದ್ಯ ವಿಡಿಯೋ ಆಧರಿಸಿ ಘಟನೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ; ಹೆಚ್​ಕೆ ಪಾಟೀಲ್ ಹೇಳಿದ್ದಿಷ್ಟು

ಯುವಕನ ಬರ್ಬರ ಹತ್ಯೆ

ಮೈಸೂರಿನ ವಿದ್ಯಾನಗರದ 4ನೇ ಕ್ರಾಸ್​ನಲ್ಲಿ ಯುವಕನ ಬರ್ಬರ ಹತ್ಯೆ ನಡೆದಿದೆ. ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬಾಲರಾಜ್(28) ಎಂಬ ಯುವಕನ  ಹತ್ಯೆಗೈದಿದ್ದಾರೆ. ಘಟನೆ ಸಂಬಂಧ ತೇಜಸ್, ಸಂಜಯ್, ಕಿರಣ್, ಸಾಮ್ರಾಟ್ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪೊಲೀಸರು ಕೊಲೆ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:07 am, Sun, 20 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ