AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಪ್ರಕರಣ; ಬೆಂಗಳೂರಿನ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲು

ಮೈಸೂರು ಜಿಲ್ಲೆಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಗೋಡಾನ್ ಪತ್ತೆಯಾಗಿತ್ತು. ಸ್ಥಳೀಯರಿಗೆ ಮೊದಲು ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರಿಗೆ ಈ ಜಾಲದ ಬಗ್ಗೆ ಮಾಹಿತಿ ನೀಡಿದ್ದರು.

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಪ್ರಕರಣ; ಬೆಂಗಳೂರಿನ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Jan 09, 2022 | 8:32 AM

Share

ಬೆಂಗಳೂರು: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತುಪ್ಪ ಪೂರೈಕೆ ಮಾಡಿದ್ದ ಬೆಂಗಳೂರಿನ ಕೆಎಂಎಫ್ ಒಕ್ಕೂಟದ ಸಗಟು ಮಾರಾಟಗಾರ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಶ್ರುತಿ ಮಾರ್ಕೆಟಿಂಗ್ ಕಾರ್ಪೊರೇಷನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಎಂಎಫ್ ಹೆಚ್ಚುವರಿ ನಿರ್ದೇಶಕ ಡಾ. ಬಿಪಿ ಸುರೇಶ್ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಗೋಡಾನ್ ಪತ್ತೆಯಾಗಿತ್ತು. ಸ್ಥಳೀಯರಿಗೆ ಮೊದಲು ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರಿಗೆ ಈ ಜಾಲದ ಬಗ್ಗೆ ಮಾಹಿತಿ ನೀಡಿದ್ದರು. ಡಿಸೆಂಬರ್ 16ರಂದು ಸ್ಥಳಕ್ಕೆ ಸಮಿತಿ ಸದಸ್ಯರು ಹೋಗಿ ಪರಿಶೀಲಿಸಿದಾಗ ನಕಲಿ ಜಾಲ ಪತ್ತೆಯಾಗಿತ್ತು. ಇಲ್ಲಿ ನಂದಿನ ತುಪ್ಪದ ಕವರ್ ತಯಾರಿಸುವ ಕೆಲಸ, ಅಸಲಿ ನಂದಿನಿ ತುಪ್ಪಕ್ಕೆ ಕಲಬೆರಕೆ ಮಾಡುವ ಕೆಲಸ ಹಾಗೂ ಟಿನ್​ಗಳಿಗೆ ತುಂಬುವ ಕೆಲಸ ಮಾಡಲಾಗುತಿತ್ತು.

ತಲಾ 15 ಕೆಜಿ ತೂಕದ ಸುಮಾರು 1,000 ಟಿನ್​ಗಳು ದೊರಕಿವೆ. ರಾಶಿಗಟ್ಟಲೆ ವನಸ್ಪತಿ, ಪಾಮ್ ಆಯಿಲ್, ಕಲರಿಂಗ್ ಕೆಮಿಕಲ್, ನಂದಿನಿ ಬ್ರ್ಯಾಂಡ್ ತುಪ್ಪದ ನಕಲಿ ಕವರ್, ಪ್ಯಾಕಿಂಗ್ ಯೂನಿಟ್ ಎಲ್ಲವನ್ನೂ ಕಂಡು ಸಮಿತಿ ಸದಸ್ಯರೂ ಅವಕ್ಕಾಗಿದ್ದಾರೆ. ಕೂಡಲೇ ಪೊಲೀಸರು, ಕರ್ನಾಟಕ ಹಾಲು ಉತ್ಪನ್ನಗಳ ಸಹಕಾರ ಒಕ್ಕೂಟ, ಫುಡ್ ಸೇಫ್ಟಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು.

ಇದನ್ನೂ ಓದಿ

ಮೊಟೊ ಜಿ71 5ಜಿ ಸ್ಮಾರ್ಟ್​ಫೋನ್ ರವಿವಾರ ಲಾಂಚ್ ಆಗಲಿದ್ದು ಅದರ ಬೆಲೆ ಆಗಲೇ ಬಹಿರಂಗಗೊಂಡಿದೆ!

Karnataka Dam Water Level: ಕಬಿನಿ, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ