AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎನಲ್ಲಿ ಅಕ್ರಮ! ನಕಲಿ ದಾಖಲೆ ಮೂಲಕ ಕ್ರಯಪತ್ರವನ್ನು ತಯಾರಿಸುತ್ತಿದ್ದ ಆರೋಪಿಗಳ ವಿರುದ್ಧ ಎಫ್ಐಆರ್

ಆರೋಪಿಗಳು ಬೆಂಗಳೂರಿನ ಹೆಚ್ಬಿಆರ್ ಲೇಔಟ್, ಕೆಂಗೇರಿ ಸೇರಿದಂತೆ ನಗರದ ಹಲವೆಡೆ ಬಿಡಿಎ ಜಾಗಕ್ಕೆ ಬೋಗಸ್ ದಾಖಲೆ ಸೃಷ್ಟಿಸುತ್ತಿದ್ದರು. ಗುತ್ತಿಗೆ, ಮಾರಾಟ ಒಪ್ಪಂದದ ನಕಲಿ ಪ್ರತಿಗಳು ಸೃಷ್ಟಿ ಮಾಡುತ್ತಿದ್ದರು.

ಬಿಡಿಎನಲ್ಲಿ ಅಕ್ರಮ! ನಕಲಿ ದಾಖಲೆ ಮೂಲಕ ಕ್ರಯಪತ್ರವನ್ನು ತಯಾರಿಸುತ್ತಿದ್ದ ಆರೋಪಿಗಳ ವಿರುದ್ಧ ಎಫ್ಐಆರ್
ಎಫ್​ಐಆರ್ (ಸಾಂದರ್ಭಿಕ ಚಿತ್ರ)
TV9 Web
| Edited By: sandhya thejappa|

Updated on: Jan 25, 2022 | 8:50 AM

Share

ಬೆಂಗಳೂರು: ಬಿಡಿಎನಲ್ಲಿ (BDA) ಅಕ್ರಮವೆಸಗಿದ ಸುಮಾರು 8 ಜನರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಿಎಸ್ 3 ಅನಿಲ್ ಕುಮಾರ್, ಡಿಎಸ್ 4 ಎಸ್ ಎಮ್ ಮಂಗಳಾ, ಅನಿಲ್ ಕುಮಾರ್ ಸೇರಿ, ನಕಲಿ ಫಲಾನುಭವಿಗಳಾದ ಅಪ್ಪಯ್ಯಣ್ಣ, ಶ್ರೀನಿವಾಸರೆಡ್ಡಿ, ಕಮರುನ್ನೀಸಾ, ರುಕ್ಮಿಣಿ, ರಾಜೇಂದ್ರ, ಗುಲಾಬ್ ಜಾನ್, ಶಶಿಕುಮಾರ್, ಬಿಡಿಎ ಕೇಸ್ ವರ್ಕರ್ ವೆಂಕಟರಮಣಪ್ಪ, ಸಂಜಯ್ ಕುಮಾರ್, ಕಮಲಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು ಬೆಂಗಳೂರಿನ ಹೆಚ್ಬಿಆರ್ ಲೇಔಟ್, ಕೆಂಗೇರಿ ಸೇರಿದಂತೆ ನಗರದ ಹಲವೆಡೆ ಬಿಡಿಎ ಜಾಗಕ್ಕೆ ಬೋಗಸ್ ದಾಖಲೆ ಸೃಷ್ಟಿಸುತ್ತಿದ್ದರು. ಗುತ್ತಿಗೆ, ಮಾರಾಟ ಒಪ್ಪಂದದ ನಕಲಿ ಪ್ರತಿಗಳು ಸೃಷ್ಟಿ ಮಾಡುತ್ತಿದ್ದರು. ನಂತರ ಅದೇ ನಕಲಿ ದಾಖಲೆ ಇಟ್ಟುಕೊಂಡು ಕ್ರಯಪತ್ರವನ್ನು ತಯಾರಿಸುತ್ತಿದ್ದರು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಶೇಷಾದ್ರಿಪುರಂ ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.

ಹಣ ದೋಚಿದ್ದ ಆರೋಪಿ ಬಂಧನ ವ್ಯಕ್ತಿಯನ್ನು ಅಡ್ಡಗಟ್ಟಿ ಹಣ ದೋಚಿದ್ದ ಆರೋಪಿ ಅರೆಸ್ಟ್ ಆಗಿದ್ದಾನೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸರು ಆರೋಪಿ ಅಬ್ದುಲ್ ವಾಹಿದ್ ಎಂಬುವವನನ್ನು ಬಂಧಿಸಿದ್ದಾರೆ. ಬೇತಮಂಗಲ ಬಳಿ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಅಡ್ಡಗಟ್ಟಿ 1.52 ಲಕ್ಷ ರೂ. ಹಣ ದೋಚಿದ್ದ. ಈ ಸಂಬಂಧ ಬೇತಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶ್ರೀಗಂಧ ಮರ ಸಾಗಿಸಲು ಯತ್ನಿಸುತ್ತಿದ್ದ ಆರೋಪಿ ಸೆರೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿಯ ಚರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ದಾಳಿ ನಡೆಸಿ ಶ್ರೀಗಂಧ ಮರ ಕಡಿದು ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಹೇಮಣ್ಣ ಬಂಧನಕ್ಕೊಳಗಾಗಿದ್ದು, ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.

ಅಕ್ಕಿ ಗೋಡೌನ್ ಮೇಲೆ ದಾಳಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾದ ಬಳಿ ಗೋಡೌನ್ ಒಂದರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಗೋಡೌನ್ ಮೇಲೆ ದಾಳಿ ನಡೆಸಿ 821 ಚೀಲ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಗೋಡೌನ್ ಮಾಲೀಕ ತಿಮ್ಮಾರೆಡ್ಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ದೇವರ ದರ್ಶನ ಮಾಡುವ ಮುಂಚೆ ಈ ಕ್ರಮವನ್ನು ನೆನಪಿನಲ್ಲಿಡಿ, ಆಗಲೇ ದರ್ಶನದ ಫಲ ಪ್ರಾಪ್ತಿಯಾಗುವುದು

ಲಸಿಕೆ ಒಲ್ಲೆನೆಂದು ಮಾಳಿಗೆ ಹತ್ತಿ ಕುಳಿತ ಮಂಜುನಾಥನನ್ನು ಕೆಳಗಿಳಿಸಲು ಅರೋಗ್ಯ ಕಾರ್ಯಕರ್ತರು ಹರಸಾಹಸ ಪಡಬೇಕಾಯಿತು!

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ