AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ ಕುಮಾರ್ ಹೆಗಡೆ ಕಾರು ಕಿರಿಕ್: ವ್ಯಕ್ತಿ ಮೇಲೆ ಹಲ್ಲೆ ಒಪ್ಪಿಕೊಂಡ ಡ್ರೈವರ್, ಗನ್ ಮ್ಯಾನ್..!

ಉತ್ತರ ಕನ್ನಡದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಪುತ್ರ, ಚಾಲಕ ಮತ್ತು ಗನ್ಮ್ಯಾನ್ ಅವರ ವಿರುದ್ಧ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹಳೇ ನಿಜಗಲ್ ಬಳಿ ಘಟನೆ ನಡೆದಿದ್ದು, ಓವರ್‌ ಟೇಕಿಂಗ್‌ ವಿಚಾರದಲ್ಲಿ ಜಗಳ ಆರಂಭವಾಗಿದೆ ಎನ್ನಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಾಲಕ ಹಾಗೂ ಗನ್ಮ್ಯಾನ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಅನಂತ ಕುಮಾರ್ ಹೆಗಡೆ ಕಾರು ಕಿರಿಕ್:  ವ್ಯಕ್ತಿ ಮೇಲೆ ಹಲ್ಲೆ ಒಪ್ಪಿಕೊಂಡ ಡ್ರೈವರ್, ಗನ್ ಮ್ಯಾನ್..!
ಅನಂತ ಕುಮಾರ್ ಹೆಗಡೆ ಕಾರು ಚಾಲಕನಿಂದ ಹಲ್ಲೆ
ವಿವೇಕ ಬಿರಾದಾರ
ವಿವೇಕ ಬಿರಾದಾರ| Edited By: |

Updated on:Jun 23, 2025 | 7:41 PM

Share

ನೆಲಮಂಗಲ, ಜೂನ್​ 23: ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ (BJP) ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ (Ananth Kumar Hegde) ಅವರ ಪುತ್ರ, ಗನ್‌ಮ್ಯಾನ್‌ ಮತ್ತು ಕಾರು ಚಾಲಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೇ ನಿಜಗಲ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ (National Highway 4) ಘಟನೆ ನಡೆದಿದೆ. ಮಾಜಿ ಸಂಸದ ಅನಂತ್​ ಕುಮಾರ್ ಹೆಗಡೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ.

ಈ ವೇಳೆ, ಅನಂತ್ ಕುಮಾರ್ ಹೆಗಡೆ ಅವರು ಇದ್ದ ಕಾರನ್ನು ಮತ್ತೊಂದು ಕಾರು ಓವರ್​​ಟೇಕ್​ ಮಾಡಿದೆ. ಓವರ್‌ಟೇಕ್‌ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ಮತ್ತು ಅನಂತ್ ಕುಮಾರ್ ಹೆಗಡೆ ಅವರ ಪುತ್ರ ಆಶುತೋಷ್ ಮತ್ತೊಂದು ಕಾರಿನಲ್ಲಿದ್ದ ಸಲ್ಮಾನ್, ಸೈಪ್, ಇಲಿಯಾಜ್ ಖಾನ್, ಗುಲಷಿರ್ ಉನ್ನಿಸಾ ಎಂಬುವರ ಮೇಲೆ ಹಲ್ಲೆ ಮಾಡಿರುವ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಯಿಂದ ಗಾಯಗೊಂಡವರನ್ನು ದಾಬಸ್‌ಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ನೆಲಮಂಗಲ ಡಿವೈಎಸ್‌ಪಿ ಕಚೇರಿಯಲ್ಲಿ ಅನಂತ್‌ ಕುಮಾರ್‌ ಹೆಗಡೆ, ಚಾಲಕ ಮತ್ತು ಗನ್​ಮ್ಯಾನ್​ನನ್ನು ಡಿವೈಎಸ್ಪಿ ಜಗದೀಶ್ ವಿಚಾರಣೆ ನಡೆಸಿದ್ದಾರೆ.

ಹಲ್ಲೆ ಮಾಡಿಲ್ಲ ಎಂದ ಅನಂತ ಕುಮಾರ್ ಹೆಗಡೆ

ಅನ್ಯ ಕೋಮಿನವರ ಮೇಲೆ ಹಲ್ಲೆ ಮಾಡಿರುವುದನ್ನು ಅನಂತ ಕುಮಾರ್ ಹೆಗಡೆ ಕಾರು ಚಾಲಕ ಮತ್ತು ಗನ್​ಮ್ಯಾನ್​ ಒಪ್ಪಿಕೊಂಡಿದ್ದಾರೆ. “ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದಾಗ, ಹಿಂದಿನಿಂದ ಬಂದ ಇನ್ನೊವಾ ಕಾರು ಓವರ್ ಟೇಕ್ ಮಾಡಿತು. ಓವರ್ ಟೇಕ್ ಮಾಡಿದ ಕಾರು ನಮ್ಮ ಕಾರಿಗೆ ಟಚ್ ಆಗುವ ಸಂದರ್ಭ ಹಿನ್ನೆಲೆಯಲ್ಲಿ ಚಾಲಕ ಕೇಳಿದ್ದಾನೆ. ಅವರೂ ಕೂಡಾ ಬೈದಿದ್ದಾರೆ ಮಾತಿಗೆ ಮಾತು ಬೆಳೆದಿದೆ” ಎಂದು ಅನಂತ್​ ಕುಮಾರ್ ಹೆಗಡೆ ಹೇಳಿದ್ದಾರೆ.

ಈ ವೇಳೆ ಹಲ್ಲೆ ಮಾಡಿರುವುದಾಗಿ ಅನಂತ ಕುಮಾರ್ ಹೆಗಡೆ ಅವರ ಕಾರು ಚಾಲಕ ಹಾಗೂ ಗನ್ ಮ್ಯಾನ್ ಒಪ್ಪಿಕೊಂಡಿದ್ದಾರೆ. “ಆದರೆ, ನಾನು ಕಾರಿನಲ್ಲೇ ಇದ್ದೆ. ಹಲ್ಲೆ ಮಾಡಿಲ್ಲ ಎಂದು ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ. ಘಟನೆ ಸಂಬಂಧ ದಾಬಸ್ ಪೇಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವರದಿ: ಮಂಜುನಾಥ್​

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Mon, 23 June 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ