AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಮಿಸ್ಟರ್ ಆಂಧ್ರ, ಆದ್ರೆ ಬೆಂಗಳೂರಿನಲ್ಲಿ ಖತರ್ನಾಕ್ ಸರಗಳ್ಳ

ಸೈಯದ್​ ಆಂಧ್ರದಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಮಿಸ್ಟರ್ ಆಂಧ್ರ ಪ್ರಶಸ್ತಿ ಪಡೆದಿದ್ದಾನೆ. ಅಲ್ಲಿ ಖ್ಯಾತಿ ಪಡೆದು ಒಳ್ಳೆ ಹೆಸರು ಮಾಡಿ ನಗರಕ್ಕೆ ಬಂದು ಕುಖ್ಯಾತಿ ಪಡೆಯುವ ಕೆಲಸ ಮಾಡಿದ್ದಾನೆ.

ಆಯೇಷಾ ಬಾನು
ಆಯೇಷಾ ಬಾನು|

Updated on:Apr 25, 2023 | 2:32 PM

Share

ಬೆಂಗಳೂರು: ಇಬ್ಬರು ಅಂತಾರಾಜ್ಯ ಕಳ್ಳರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್​ ಬಾಷಾ(34), ಶೇಕ್ ಅಯೂಬ್​(32) ಬಂಧಿತರು. ಬಂಧಿತರಿಂದ 6 ಲಕ್ಷ ಮೌಲ್ಯದ ಚಿನ್ನಾಭರಣ, 2 ಬೈಕ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿ ಸೈಯದ್, ಆಂಧ್ರ ಪ್ರದೇಶದಿಂದ ಜಾಲಿ ರೈಡ್ ಬಂದು ಬೆಂಗಳೂರಿನಲ್ಲಿ ಚೈನ್ ಸ್ನ್ಯಾಚಿಂಗ್ ಮಾಡುತ್ತಿದ್ದ. ಇನ್ನು ವಿಶೇಷವೆಂದರೆ ಸೈಯದ್​ ಆಂಧ್ರದಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಮಿಸ್ಟರ್ ಆಂಧ್ರ ಪ್ರಶಸ್ತಿ ಪಡೆದಿದ್ದಾನೆ. ಅಲ್ಲಿ ಖ್ಯಾತಿ ಪಡೆದು ಒಳ್ಳೆ ಹೆಸರು ಮಾಡಿ ನಗರಕ್ಕೆ ಬಂದು ಕುಖ್ಯಾತಿ ಪಡೆಯುವ ಕೆಲಸ ಮಾಡಿದ್ದಾನೆ.

ಆಂಧ್ರದಿಂದ ಬಂದು ನಗರದಲ್ಲಿ ಲಾಡ್ಜ್ ಮಾಡಿ ಸೈಯದ್ ಪಾರ್ಟಿ ಮಾಡ್ತಿದ್ದ. ಮಾರನೆ ದಿನ ರಸ್ತೆಗಿಳಿದು ಸರಗಳವು ಮಾಡ್ತಿದ್ದ. ಹೀಗೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾನಕಿ ಎಂಬುವವರ ಸರ ಕದ್ದಿದ್ದ. ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ. ದೂರು ಹಿನ್ನೆಲೆ ಪೊಲೀಸರು ಸಿಸಿಟಿವಿ ಜಾಡು ಹಿಡಿದು ಹೊರಟಾಗ ಸೈಯದ್ ಕದ್ದ ಬೈಕ್ ಸಿಕ್ಕಿತ್ತು. ಬೈಕ್ ಬಿಟ್ಟು ಹೋದವನು ಮತ್ತೆ ಬರ್ತಾನೆ ಎಂದು ಪೊಲೀಸರು ಬೈಕ್ ಗೆ ಜಿಪಿಎಸ್ ಅಳವಡಿಸಿದ್ದರು. ಹತ್ತು ಹದಿನೈದು ದಿನಗಳವರೆಗೂ ತಾಳ್ಮೆಯಿಂದ ಕಾದಿದ್ದ ಪೊಲೀಸರು ನಂತರ ಯಾವಾಗ ಜಿಪಿಎಸ್ ಆಕ್ಟೀವ್ ಆಯ್ತೋ ಗಿರಿನಗರ ಪೊಲೀಸರೂ ಆಕ್ಟೀವ್ ಆಗಿದ್ದರು. ಜಿಪಿಎಸ್ ನ ಫಾಲೋ ಮಾಡಿ ಕೊನೆಗೆ ವಿಶೇಷ ತಂಡದ ಬಲೆಗೆ ಮಿಸ್ಟರ್ ಆಂಧ್ರ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಮತ್ತೊಬ್ಬ ಆರೋಪಿ ಶೇಕ್ ಅಯೂಬ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಕಂದಮ್ಮನ ಪ್ರಾಣ ತೆಗೆದ ಸ್ಮಾರ್ಟ್‌ಫೋನ್, ವಿಡಿಯೋ ಗೇಮ್ ಆಡುತ್ತಿದ್ದ ವೇಳೆ ಸ್ಫೋಟ

ಈ ಖದೀಮರು ಕಳ್ಳತನ ಮಾಡುತ್ತಿದ್ದದ್ದು ಹೇಗೆ ಗೊತ್ತಾ?

ಆಂಧ್ರ ಮೂಲದ ಆರೋಪಿಗಳು ಬೆಂಗಳೂರಿಗೆ ಬಂದು ಇಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡ್ತಿದ್ರು. ಬಳಿಕ ಅದೇ ದ್ವಿಚಕ್ರ ವಾಹನದಲ್ಲಿ ಸರಗಳ್ಳತನ ಮಾಡ್ತಿದ್ರು. ನಂತರ ದ್ವಿಚಕ್ರ ಬಿಟ್ಟು ಆಟೋ ಮೂಲಕ ಕೆ.ಆರ್.ಪುರಂಗೆ ಹೋಗಿ ಅಲ್ಲಿಂದ ಬಸ್ ಏರಿ ತಮ್ಮ ಊರಿಗೆ ಪರಾರಿಯಾಗುತ್ತಿದ್ದರು. ಸಧ್ಯ ಈ ಖತರ್ನಾಕ್ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಖದೀಮರು ಸರಗಳ್ಳತನ ಮಾಡಿದ ಕೂಡಲೇ ಬಟ್ಟೆ ಬದಲಿಸ್ತಿದ್ದರಂತೆ. ಸಿಸಿಟಿವಿಯಲ್ಲಿ ತಮ್ಮ ಮುಖ ತಿಳಿಯಬಾರದು. ಪೊಲೀಸರು ನಮ್ಮನ್ನು ಹಿಡಿಯಬಾರದೆಂದು ನಾನಾ ರೀತಿಯ ತಯಾರಿ ಮಾಡಿಕೊಂಡಿದ್ದರು. ಆದ್ರೆ ಸಿನಿಮೀಯ ರೀತಿಯಲ್ಲಿ ಖಾಕಿ ಆರೋಪಿಗಳ ಹೆಡೆಮುರಿ ಕಟ್ಟಿದೆ. ಸಿಸಿಟಿವಿ ಪರಿಶೀಲನೆ ವೇಳೆ ಸಿಕ್ಕ ಕದ್ದ ಬೈಕ್​ನ ಸುಳಿವಿನಿಂದ ಮಿಸ್ಟರ್ ಆಂಧ್ರ ಸಿಕ್ಕಿಬಿದ್ದಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:29 pm, Tue, 25 April 23

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ