AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​: ಹೆರಿಗೆ ವೇಳೆ ಮಗು ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರ ಆರೋಪ

ಬೆಂಗಳೂರು(Bengaluru) ನಗರ ಜಿಲ್ಲೆಯ ಆನೇಕಲ್‌ ಸರ್ಕಾರಿ ಆಸ್ಪತ್ರೆ (Government Hospital)ಯಲ್ಲಿ ನಡೆದಿದೆ. ಇದೀಗ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಕೊನೆಯುಸಿರೆಳೆದಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಆನೇಕಲ್‌ನ ಪಂಪ್‌ಹೌಸ್ ನಿವಾಸಿಯಾಗಿದ್ದ ಸುಮಲತಾ ಎಂಬುವವರು ಇಂದು(ನ.21) ಬೆಳಗ್ಗೆ 10.30ಕ್ಕೆ ಹೆರಿಗೆ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದರು.

ಆನೇಕಲ್​: ಹೆರಿಗೆ ವೇಳೆ ಮಗು ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರ ಆರೋಪ
ಪ್ರಾತಿನಿಧಿಕ ಚಿತ್ರ
ರಾಮು, ಆನೇಕಲ್​
| Edited By: |

Updated on: Nov 21, 2023 | 6:21 PM

Share

ಬೆಂಗಳೂರು, ನ.21: ಹೆರಿಗೆ ವೇಳೆ ಮಗು ಸಾವನ್ನಪ್ಪಿರುವ(Child Death) ಘಟನೆ ಬೆಂಗಳೂರು(Bengaluru) ನಗರ ಜಿಲ್ಲೆಯ ಆನೇಕಲ್‌ ಸರ್ಕಾರಿ ಆಸ್ಪತ್ರೆ (Government Hospital)ಯಲ್ಲಿ ನಡೆದಿದೆ. ಇದೀಗ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಕೊನೆಯುಸಿರೆಳೆದಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಆನೇಕಲ್‌ನ ಪಂಪ್‌ಹೌಸ್ ನಿವಾಸಿಯಾಗಿದ್ದ ಸುಮಲತಾ ಎಂಬುವವರು ಇಂದು(ನ.21) ಬೆಳಗ್ಗೆ 10.30ಕ್ಕೆ ಹೆರಿಗೆ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದರು. ಬೆಳಗ್ಗೆ 11 ಗಂಟೆಯಿಂದ ನಾರ್ಮಲ್ ಡೆಲಿವರಿಗೆ ಟ್ರೈ ಮಾಡಿದ್ದರು. ಆದರೆ, ಈ ವೇಳೆ ಮಗುವಿಗೆ ಉಸಿರಾಟದ ಸಮಸ್ಯೆ ಇದೆ ಎಂದು ವೈದ್ಯರು ಹೇಳಿದ್ದರಂತೆ.

ಇನ್ನು ನಾರ್ಮಲ್​ ಹೆರಿಗೆ ಮಾಡಿಸಲು ವೈದ್ಯರು ಪ್ರಯತ್ನಪಟ್ಟಿದ್ದಾರೆ. ಆದರೆ, ಮಗು 4.5 ಕೆ.ಜಿ ತೂಕ ಇದ್ದಿದ್ದರಿಂದ ನಾರ್ಮಲ್ ಡೆಲಿವರಿ ಸಾಧ್ಯವಾಗಿರಲಿಲ್ಲ. ಈ ಸಂದರ್ಭದಲ್ಲಿ ಮಗುವನ್ನು ಹೊರತೆಗೆಯಲು ವೈದ್ಯರು ಪ್ರಯತ್ನಿಸಿದ್ದರು. ಮಗುವನ್ನು ಹೊರತೆಗೆಯಲು ಆಗದಿದ್ದಾಗ ಸಿಸೇರಿಯನ್ ಮಾಡಿದ್ದರು. ಹಸುಗೂಸನ್ನು ಹೊರ ತೆಗೆದಾಗ ದೇಹದ ತುಂಬೆಲ್ಲಾ ಗಾಯವಾಗಿದೆ. ಬಳಿಕ ಹಸುಗೂಸು ಮೃತಪಟ್ಟಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರಂತೆ. ಹೀಗಾಗಿ ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ:19 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ, ಸಂಬಂಧಿಕರಿಂದ ಪ್ರತಿಭಟನೆ

ಇನ್ನು ಇಂತಹ ಘಟನೆಗಳು ನಡೆಯುತ್ತಲೆ ಇರುತ್ತದೆ. ಕಳೆದ ಸೆ.16 ರಂದು ಬೆಂಗಳೂರು ಗ್ರಾ. ಜಿಲ್ಲೆಯ ವಿಜಯಪುರ ನಗರದ ದಾದಾಪೀರ್ ಮತ್ತು ನಜಿಯಾ ಬಾನು ದಂಪತಿಯ ಮಗಳಾದ 6 ವರ್ಷದ ರಾಬಿಯಾ ಎಂಬ ಮಗುವಿಗೆ ಕೆಮ್ಮು, ಕಫಾ ಕಾಣಿಸಿಕೊಂಡಿತ್ತು. ಹೀಗಾಗಿ ಚಿಕಿತ್ಸೆಗೆಂದು ಮಗುವನ್ನು ದೇವನಹಳ್ಳಿಯ ಆಕಾಶ್ ಆಸ್ವತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಬಳಿಕ ಮಗು ಮೃತಪಟ್ಟಿದ್ದು ವೈದ್ಯರ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದರು. ಇದೀಗ ಮತ್ತೊಂದು ಹಸುಗೂಸು ಮೃತಪಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ