AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಯುವತಿಯೊಂದಿಗೆ ಚಾಟಿಂಗ್; ಜಿಮ್​​ಗೆ ನುಗ್ಗಿ ಸಹೋದರರಿಂದ ಟ್ರೈನರ್ ಮೇಲೆ ಹಲ್ಲೆ

ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಅನಂತನಗರದ ಜಿಮ್ ಟ್ರೈನರ್​ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಕ್ಲೈಂಟ್​ಗೆ ಮೆಸೇಜ್​​ ಮಾಡಿದ್ದಕ್ಕೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಜಿಮ್ ಟ್ರೈನರ್​​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್​​​ಐಆರ್​ ದಾಖಲಾಗಿದೆ.

ಆನೇಕಲ್: ಯುವತಿಯೊಂದಿಗೆ ಚಾಟಿಂಗ್; ಜಿಮ್​​ಗೆ ನುಗ್ಗಿ ಸಹೋದರರಿಂದ ಟ್ರೈನರ್ ಮೇಲೆ ಹಲ್ಲೆ
ಟ್ರೈನರ್ ಮೇಲೆ ಮಾರಣಾಂತಿಕ ಹಲ್ಲೆ
ರಾಮು, ಆನೇಕಲ್​
| Edited By: |

Updated on: Oct 01, 2025 | 1:23 PM

Share

ಆನೇಕಲ್, ಅಕ್ಟೋಬರ್​ 01: ಸಿನಿಮಾ ಸ್ಟೈಲ್​ನಲ್ಲಿ ಏಕಾಏಕಿ ಜಿಮ್​ಗೆ ನುಗ್ಗದ ಐವರು ಟ್ರೈನರ್ (trainer) ಮೇಲೆ ಮಾರಣಾಂತಿಕ ಹಲ್ಲೆ (Assault) ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಅನಂತನಗರದ ರಿಪ್ಡ್ ಜಿಮ್​ನಲ್ಲಿ ಸೆಪ್ಟೆಂಬರ್​ 23ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆ ಆಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ.

ನಡೆದದ್ದೇನು?

ಆನೇಕಲ್ ನಿವಾಸಿ ಸಂದೀಪ್ ಹಲ್ಲೆಗೊಳಗಾದ ಜಿಮ್ ಟ್ರೈನರ್​.​ ​ಅರುಣ್, ಗೌತಮ್, ಅನುಷಾ, ಮೇಘನಾ ಸೇರಿ ಐವರಿಂದ ಹಲ್ಲೆ ಮಾಡಲಾಗಿದೆ. ಅನುಷಾ ಟ್ರೈನರ್ ಸಂದೀಪ್ ಕ್ಲೈಂಟ್ ಆಗಿದ್ದು, ಇಬ್ಬರು ಸ್ನೇಹಿತರಾಗಿದ್ದರು. ವಾಟ್ಸಾಪ್​ನಲ್ಲಿ ಚಾಟಿಂಗ್ ಕೂಡ ಮಾಡುತ್ತಿದ್ದರು.

ಇದನ್ನೂ ಓದಿ: ಫೇಸ್​ಬುಕ್​ನಲ್ಲಿ ಪರಿಚಯವಾದ ಮಹಿಳೆ ಜತೆ ಸಲುಗೆ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್: ಲಕ್ಷಾಂತರ ರೂ. ವಂಚನೆ

ಅನುಷಾ ಮೊಬೈಲ್ ಚೆಕ್ ಮಾಡಿದಾಗ ಇವರಿಬ್ಬ ಸ್ನೇಹದ ಬಗ್ಗೆ ಅನುಷಾಳ ಸಹೋದರರಾದ ಗೌತಮ್ ಮತ್ತು ಅರುಣ್​​ಗೆ ಗೊತ್ತಾಗಿದೆ. ಅನುಷಾ ಮೊಬೈಲ್ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿ ಜಿಮ್​​ಗೆ ನುಗ್ಗಿ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಸದ್ಯ ಐವರ ವಿರುದ್ಧ ಎಫ್​​ಐಆರ್​​ ದಾಖಲಾಗಿದ್ದು, ಗಂಭೀರ ಗಾಯಗೊಂಡ ಸಂದೀಪ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಬೈಕ್​ಗಳ ನಡುವೆ ಡಿಕ್ಕಿ: ಇಬ್ಬರಿಗೆ ಗಾಯ

ಎರಡು ಬೈಕ್​ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವಂತಹ ಘಟನೆ ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ನಡೆದಿದೆ. ವಿನಯ್(23) ಸ್ಥಿತಿ ಗಂಭೀರವಾಗಿದ್ದು, ಸಿರಿ(22)ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಹುಡುಗಿಯರನ್ನ ಚುಡಾಯಿಸಿದ ಆರೋಪ: ಕುಟುಂಬಗಳ ನಡುವೆ ಮಾರಾಮಾರಿ

ಡಿಯೋ ಬೈಕ್​ನಲ್ಲಿ ಮಹಾಲಕ್ಷ್ಮೀ ಲೇಔಟ್ ಕಡೆ ಸಿರಿ ತೆರಳುತ್ತಿದ್ದರು. ಅದೇ ಮಾರ್ಗವಾಗಿ ವೇಗವಾಗಿ ಯುವಕ ಬೈಕ್​ನಲ್ಲಿ ಬರ್ತಿದ್ದ. ಈ ವೇಳೆ ಅಪಘಾತ ಸಂಭವಿಸಿದೆ. ಹೆಲ್ಮೆಟ್ ಧರಿಸದ ಕಾರಣ ವಿನಯ್ ತಲೆಗೆ ತೀವ್ರ ಪೆಟ್ಟಾಗಿದೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​