AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ ಶುರುವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ ಹಿನ್ನೆಲೆ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಇಂದಿನಿಂದ 2 ದಿನ ಧರಣಿಗೆ ಮುಂದಾಗಿದ್ದಾರೆ. ಬಜೆಟ್ ವೇಳೆ ತಮ್ಮ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಹಾಗೂ ಎಐಟಿಯುಸಿ ಸಂಘಟನೆಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಇಗಾಗಲೇ ಅನೇಕ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿದ್ದಾರೆ. ಸುಮಾರು 11ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ […]

ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!
ಸಾಧು ಶ್ರೀನಾಥ್​
|

Updated on:Jan 23, 2020 | 4:53 PM

Share

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ ಶುರುವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ ಹಿನ್ನೆಲೆ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಇಂದಿನಿಂದ 2 ದಿನ ಧರಣಿಗೆ ಮುಂದಾಗಿದ್ದಾರೆ. ಬಜೆಟ್ ವೇಳೆ ತಮ್ಮ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಹಾಗೂ ಎಐಟಿಯುಸಿ ಸಂಘಟನೆಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಇಗಾಗಲೇ ಅನೇಕ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿದ್ದಾರೆ. ಸುಮಾರು 11ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ ಱಲಿ ಮೂಲಕ ತೆರಳಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 1 ಲಕ್ಷದ 30 ಸಾವಿರ ಕಾರ್ಯಕರ್ತೆಯರು, ಸಹಾಯಕಿಯರಿದ್ದಾರೆ.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು: 1.ಸೇವಾ ಹಿರಿತನದ ಆಧಾರದಲ್ಲಿ ಸಂಬಳ ನೀಡಬೇಕು 2.ಎಲ್.ಕೆ.ಜಿ ಮತ್ತು ಯು.ಕೆ.ಜಿ ಗಳನ್ನು ಅಂಗನವಾಡಿಯಲ್ಲೇ ಆರಂಭಿಸಬೇಕು 3. ವೇತನ ಆಯೋಗದ ಪ್ರಕಾರ ಕನಿಷ್ಠ ವೇತನ 17 ಸಾವಿರ ನೀಡಬೇಕು 4. ನಿವೃತ್ತಿ ನಂತರ ತಿಂಗಳ ಮೂರು ಸಾವಿರ ರೂಪಾಯಿ ಪಿಂಚಣಿ ನೀಡಬೇಕು 5. ನಿವೃತ್ತಿಯಾದವರಿಗೆ 50 ಸಾವಿರ ರೂಪಾಯಿ ನೀಡಲಾಗ್ತಿತ್ತು ಕಳೆದ ಎರಡು ವರ್ಷಗಳಿಂದ ಅದನ್ನು ನಿಲ್ಲಿಸಲಾಗಿದೆ ಅದನ್ನು ಪ್ರಾರಂಭಿಸಬೇಕು

Published On - 9:36 am, Thu, 23 January 20

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ