AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ ಶುರುವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ ಹಿನ್ನೆಲೆ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಇಂದಿನಿಂದ 2 ದಿನ ಧರಣಿಗೆ ಮುಂದಾಗಿದ್ದಾರೆ. ಬಜೆಟ್ ವೇಳೆ ತಮ್ಮ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಹಾಗೂ ಎಐಟಿಯುಸಿ ಸಂಘಟನೆಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಇಗಾಗಲೇ ಅನೇಕ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿದ್ದಾರೆ. ಸುಮಾರು 11ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ […]

ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 23, 2020 | 4:53 PM

Share

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ ಶುರುವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ ಹಿನ್ನೆಲೆ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಇಂದಿನಿಂದ 2 ದಿನ ಧರಣಿಗೆ ಮುಂದಾಗಿದ್ದಾರೆ. ಬಜೆಟ್ ವೇಳೆ ತಮ್ಮ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಹಾಗೂ ಎಐಟಿಯುಸಿ ಸಂಘಟನೆಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಇಗಾಗಲೇ ಅನೇಕ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿದ್ದಾರೆ. ಸುಮಾರು 11ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ ಱಲಿ ಮೂಲಕ ತೆರಳಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 1 ಲಕ್ಷದ 30 ಸಾವಿರ ಕಾರ್ಯಕರ್ತೆಯರು, ಸಹಾಯಕಿಯರಿದ್ದಾರೆ.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು: 1.ಸೇವಾ ಹಿರಿತನದ ಆಧಾರದಲ್ಲಿ ಸಂಬಳ ನೀಡಬೇಕು 2.ಎಲ್.ಕೆ.ಜಿ ಮತ್ತು ಯು.ಕೆ.ಜಿ ಗಳನ್ನು ಅಂಗನವಾಡಿಯಲ್ಲೇ ಆರಂಭಿಸಬೇಕು 3. ವೇತನ ಆಯೋಗದ ಪ್ರಕಾರ ಕನಿಷ್ಠ ವೇತನ 17 ಸಾವಿರ ನೀಡಬೇಕು 4. ನಿವೃತ್ತಿ ನಂತರ ತಿಂಗಳ ಮೂರು ಸಾವಿರ ರೂಪಾಯಿ ಪಿಂಚಣಿ ನೀಡಬೇಕು 5. ನಿವೃತ್ತಿಯಾದವರಿಗೆ 50 ಸಾವಿರ ರೂಪಾಯಿ ನೀಡಲಾಗ್ತಿತ್ತು ಕಳೆದ ಎರಡು ವರ್ಷಗಳಿಂದ ಅದನ್ನು ನಿಲ್ಲಿಸಲಾಗಿದೆ ಅದನ್ನು ಪ್ರಾರಂಭಿಸಬೇಕು

Published On - 9:36 am, Thu, 23 January 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು