AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ವಕೀಲನ ಅಪಹರಣ, 9 ಆರೋಪಿಗಳನ್ನು ಬಂಧಿಸಿದ ಅನ್ನಪೂರ್ಣೇಶ್ವರಿ ನಗರ ಪೊಲೀಸರು

ಕಿಡ್ನಾಪ್ ಮಾಹಿತಿ ಬಂದ ಐದಾರು ಗಂಟೆಯಲ್ಲೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಹಾಡಹಗಲೇ 2 ಫಾರ್ಚ್ಯೂನರ್ ಕಾರಿನಲ್ಲಿ ವಕೀಲನ ಅಪಹರಣ ಮಾಡಲಾಗಿತ್ತು. ಬಳಿಕ ಬ್ಯಾಡರಹಳ್ಳಿ ಬಳಿಯ ಡಿ ಗ್ರೂಪ್ ಲೇಔಟ್‌ನಲ್ಲಿ ಸಿದ್ದೇಶ್ ಎಂಬಾತನ ಫೈನಾನ್ಸ್ ಕಚೇರಿಯಲ್ಲಿ ವಕೀಲನನ್ನು ಇಟ್ಟಿದ್ದರು.

ಹಣಕ್ಕಾಗಿ ವಕೀಲನ ಅಪಹರಣ, 9 ಆರೋಪಿಗಳನ್ನು ಬಂಧಿಸಿದ ಅನ್ನಪೂರ್ಣೇಶ್ವರಿ ನಗರ ಪೊಲೀಸರು
ಹಣಕ್ಕಾಗಿ ವಕೀಲನ ಅಪಹರಣ, 9 ಆರೋಪಿಗಳನ್ನು ಬಂಧಿಸಿದ ಅನ್ನಪೂರ್ಣೇಶ್ವರಿ ನಗರ ಪೊಲೀಸರು
TV9 Web
| Updated By: ಆಯೇಷಾ ಬಾನು|

Updated on: Sep 29, 2021 | 9:27 AM

Share

ಬೆಂಗಳೂರು: ಟೆಕ್ಕಿ ಕಿಡ್ನಾಪ್(Kidnap) ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿದೆ. ಹಣಕ್ಕಾಗಿ ವಕೀಲನನ್ನು ಅಪಹರಿಸಿದ್ದು ಆರೋಪಿಗಳನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರುಣ್‌ಕುಮಾರ್, ಯುವರಾಜ್, ನರೇಶ್, ಅಶೋಕ್, ಯುಗಾನಂದ್, ನೆಲ್ಸನ್ ಕುಮಾರ್, ಸಂಜಯ್, ಸಿದ್ದೇಶ್, ವಿಜಯ್ ಕುಮಾರ್‌ ಬಂಧಿತ ಆರೋಪಿಗಳು.

ಕಿಡ್ನಾಪ್ ಮಾಹಿತಿ ಬಂದ ಐದಾರು ಗಂಟೆಯಲ್ಲೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಹಾಡಹಗಲೇ 2 ಫಾರ್ಚ್ಯೂನರ್ ಕಾರಿನಲ್ಲಿ ವಕೀಲನ ಅಪಹರಣ ಮಾಡಲಾಗಿತ್ತು. ಬಳಿಕ ಬ್ಯಾಡರಹಳ್ಳಿ ಬಳಿಯ ಡಿ ಗ್ರೂಪ್ ಲೇಔಟ್‌ನಲ್ಲಿ ಸಿದ್ದೇಶ್ ಎಂಬಾತನ ಫೈನಾನ್ಸ್ ಕಚೇರಿಯಲ್ಲಿ ವಕೀಲನನ್ನು ಇಟ್ಟಿದ್ದರು. ಬಳಿಕ ₹10 ಲಕ್ಷ ನೀಡಲು ವಕೀಲನ ಕುಟುಂಬಸ್ಥರಿಗೆ ಕರೆ ಮಾಡಿ ಡಿಮ್ಯಾಂಡ್ ಮಾಡಿದ್ದಾರೆ. ಕುಟುಂಬಸ್ಥರು ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ಕಾರ್ಯಾಚರಣೆಗೆ ಮುಂದಾದ ಪೊಲೀಸರು ದೂರು ದಾಖಲಾದ ಕೇವಲ ಐದಾರು ಗಂಟೆಯಲ್ಲೇ 9 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಮಧ್ಯರಾತ್ರಿ 1 ಗಂಟೆಗೆ ಫೈನಾನ್ಸ್ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿ ವಕೀಲನನ್ನು ರಕ್ಷಿಸುವುದರ ಜೊತೆ ಆರೋಪಿಗಳನ್ನು ಬಂಧಿಸಿದ್ದಾರೆ.

ಹಣಕ್ಕಾಗಿ ಟೆಕ್ಕಿ ಕಿಡ್ನಾಪ್ ಕೆಲ ದಿನಗಳ ಹಿಂದೆ ಹಣದ ಆಸೆಯಿಂದ ಟೆಕ್ಕಿಗಳು ಇನ್ನೊರ್ವ ಟೆಕ್ಕಿಯನ್ನು ಕಿಡ್ನ್ಯಾಪ್ (Kidnap) ಮಾಡಿದ್ದ ಘಟನೆ ನಡೆದಿತ್ತು. ಸದ್ಯ ಕಿಡ್ನ್ಯಾಪ್ ಆಗಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಕಿಡ್ನ್ಯಾಪ್ ಆಗಿದ್ದ ಟೆಕ್ಕಿ ವಿನೀತ್ ವರ್ಧನ್ ಎಂಬುವವರನ್ನು ರಕ್ಷಣೆ ಮಾಡಲಾಗಿದೆ. ಚೆನ್ನೈನಲ್ಲಿ ಬೆಂಗಳೂರು ಪೊಲೀಸರು ವಿನೀತ್​ನ ರಕ್ಷಣೆ ಮಾಡಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಕೋರಮಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಆಗಸ್ಟ್ ತಿಂಗಳಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿತ್ತು.

ಹಣದ ವಿಚಾರಕ್ಕೆ ವಿನೀತ್ ವರ್ಧನ್​ನ ಕಿಡ್ನ್ಯಾಪ್ ಆಗಿತ್ತು. ಎಡ್ವಿನ್ ಪ್ರಶಾಂತ್ ಮತ್ತು ಆತನ ಟೀಮ್ ವಿನೀತ್​ನ ಕಿಡ್ನ್ಯಾಪ್ ಮಾಡಿದ್ದರು. ಕಿಡ್ನ್ಯಾಪರ್ಸ್ 50 ಕಿಲೋಮೀಟರ್ ಕ್ರಮಿಸಿ ಫೋನ್ ಕರೆ ಮಾಡಿದ್ದರು. ಫೋನ್ ಕರೆ ಮಾಡಿದ ಬಳಿಕ ಸ್ವಿಚ್ ಆಫ್ ಮಾಡುತ್ತಿದ್ದರು. ಫಾಸ್ಟ್​ಟ್ಯಾಗ್​ ಮೂಲಕ ಕಿಡ್ನ್ಯಾಪರ್ಸ್ ಸುಳಿವು ಪತ್ತೆಯಾಗಿತ್ತು. ಕೋರಮಂಗಲ ಪೊಲೀಸರು ಕಾರ್ಯಚರಣೆ ನಡೆಸಿ ಎಡ್ವಿನ್ ಪ್ರಶಾಂತ್, ಸಂತೋಷ್, ಅರಿವೇಗಲನ್ ಬಂಧಿಸಿದ್ದಾರೆ.

ಇದನ್ನೂ ಓದಿ: ಟೆಕ್ಕಿಗಳಿಂದಲೇ ಟೆಕ್ಕಿ ಕಿಡ್ನ್ಯಾಪ್! ಆರೋಪಿಗಳಿಗೆ ಹಣ ನೀಡಿ ಬಂಧಿಸಿದ ಬೆಂಗಳೂರು ಪೊಲೀಸರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ