AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಗೆ ಇನ್ನೊಂದು ಬಲಿ; ತಾಯಿ ಸಾವು, ಕೂದಲೆಳೆ ಅಂತರದಲ್ಲಿ ಅಪ್ಪ-ಮಗಳು ಪಾರು

Killer BMTC: ಪ್ರೋ ಕಬಡಿ ಪಂದ್ಯ ವೀಕ್ಷಿಸಲು ಹೋಗುವಾಗ ನಿನ್ನೆ ಸಂಜೆ 6.30ರ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ BMTC ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ದಂಪತಿ ಹಾಗೂ ಪುಟ್ಟ ಮಗು ಕೆಳಗೆ ಬಿದ್ದಿದ್ದು ಮಹಿಳೆ ಮೇಲೆ ಬಸ್ ಹರಿದು ಸ್ಥಳದಲ್ಲೇ ಮೃತಪೊಟ್ಟಿದ್ದಾರೆ.

ಬಿಎಂಟಿಸಿಗೆ ಇನ್ನೊಂದು ಬಲಿ; ತಾಯಿ ಸಾವು, ಕೂದಲೆಳೆ ಅಂತರದಲ್ಲಿ ಅಪ್ಪ-ಮಗಳು ಪಾರು
ಸೀಮಾ
ಜಗದೀಶ ಬಿ.
| Edited By: ಆಯೇಷಾ ಬಾನು|

Updated on: Dec 14, 2023 | 12:03 PM

Share

ಬೆಂಗಳೂರು, ಡಿ.14: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಡಿಕ್ಕಿಯಾಗಿ (BMTC Accident) ಗೃಹಿಣಿ ಮೃತಪಟ್ಟ ಘಟನೆ ನಡೆದಿದೆ. ಪ್ರೋ ಕಬಡಿ ನೋಡಲು ಹೋಗುತಿದ್ದ ದಂಪತಿಗೆ ಯಮನಂತೆ ಬಂದ ಬಿಎಂಟಿಸಿ ಮಹಿಳೆಯ ಪ್ರಾಣ (Death) ತೆಗೆದುಕೊಂಡಿದೆ. ಸೀಮಾ ಮೃತ ಗೃಹಿಣಿ. ನಿನ್ನೆ ಸಂಜೆ 6.30ರ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ಘಟನೆ ನಡೆದಿದೆ. BMTC ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಅಪಘಾತದ ಬಳಿಕ ಬಸ್ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ.

ಕಳೆದ ಎರಡೂವರೆ ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿ ಸಿಂಗಸಂಧ್ರದಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಪ್ರೋ ಕಬಡಿ ಪಂದ್ಯ ವೀಕ್ಷಿಸಲು ತಮ್ಮ ಪುಟ್ಟ ಮಗುವಿನ ಜೊತೆ ಬೈಕ್​ನಲ್ಲಿ ಹೋಗುವಾಗ ಬಸ್​ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಮೂವರು ಕೆಳಗೆ ಬಿದ್ದಿದ್ದಾರೆ. ಬಿಎಂಟಿಸಿ ಬಸ್​ನ ಚಕ್ರದಡಿ ಸಿಲುಕಿದ ಸೀಮಾ(21) ಹೆಲ್ಮೆಟ್ ಧರಿಸಿದ್ದರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮಗು ಗಾನವಿ, ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

ಇದನ್ನೂ ಓದಿ: ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಇನ್ನು ಘಟನೆ ಸಂಬಂಧ ಮಾತನಾಡಿದ ಮೃತಳ ಪತಿ ಗುರುಮೂರ್ತಿ, ಸಂಜೆ ಪ್ರೋ ಕಬಡಿ ನಡೆಯುತಿತ್ತು. ಪತ್ನಿ ಮಗು ಕರೆದುಕೊಂಡು ಹೊಗ್ತಿದ್ದೆ. ಈ ವೇಳೆ ವೇಗವಾಗಿ ಬಸ್ ತಿರುಗಿಸಿ ಡಿಕ್ಕಿ ಹೊಡೆದಿದ್ದಾರೆ. ಪತ್ನಿ ಸಾವು ಸಂಭವಿಸುತಿದ್ದಂತೆ ಚಾಲಕ, ಕಂಡಕ್ಟರ್ ಇಬ್ಬರು ಪರಾರಿಯಾಗಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ. ಘಟನೆ ಬಳಿಕ ಯಾವ ಒಬ್ಬ ಬಿಎಂಟಿಸಿ ಅಧಿಕಾರಿಯೂ ಬಂದಿಲ್ಲ. ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಮೂಲತಃ ವಿಜಯನಗರ ಜಿಲ್ಲೆಯ ಶ್ರೀಕಂಠಪುರ ತಾಂಡಾದ ನಿವಾಸಿಗಳಾದ ದಂಪತಿ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಸ್ಕಾಂನಲ್ಲಿ ಲೈನ್​ಮ್ಯಾನ್​ ಆಗಿ‌‌ ಗುರುಮೂರ್ತಿ ಕೆಲಸ ಮಾಡುತ್ತಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಗೃಹಿಣಿ ಸೀಮಾ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ