AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಗೆ ಇನ್ನೊಂದು ಬಲಿ; ತಾಯಿ ಸಾವು, ಕೂದಲೆಳೆ ಅಂತರದಲ್ಲಿ ಅಪ್ಪ-ಮಗಳು ಪಾರು

Killer BMTC: ಪ್ರೋ ಕಬಡಿ ಪಂದ್ಯ ವೀಕ್ಷಿಸಲು ಹೋಗುವಾಗ ನಿನ್ನೆ ಸಂಜೆ 6.30ರ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ BMTC ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ದಂಪತಿ ಹಾಗೂ ಪುಟ್ಟ ಮಗು ಕೆಳಗೆ ಬಿದ್ದಿದ್ದು ಮಹಿಳೆ ಮೇಲೆ ಬಸ್ ಹರಿದು ಸ್ಥಳದಲ್ಲೇ ಮೃತಪೊಟ್ಟಿದ್ದಾರೆ.

ಬಿಎಂಟಿಸಿಗೆ ಇನ್ನೊಂದು ಬಲಿ; ತಾಯಿ ಸಾವು, ಕೂದಲೆಳೆ ಅಂತರದಲ್ಲಿ ಅಪ್ಪ-ಮಗಳು ಪಾರು
ಸೀಮಾ
Follow us
Jagadisha B
| Updated By: ಆಯೇಷಾ ಬಾನು

Updated on: Dec 14, 2023 | 12:03 PM

ಬೆಂಗಳೂರು, ಡಿ.14: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಡಿಕ್ಕಿಯಾಗಿ (BMTC Accident) ಗೃಹಿಣಿ ಮೃತಪಟ್ಟ ಘಟನೆ ನಡೆದಿದೆ. ಪ್ರೋ ಕಬಡಿ ನೋಡಲು ಹೋಗುತಿದ್ದ ದಂಪತಿಗೆ ಯಮನಂತೆ ಬಂದ ಬಿಎಂಟಿಸಿ ಮಹಿಳೆಯ ಪ್ರಾಣ (Death) ತೆಗೆದುಕೊಂಡಿದೆ. ಸೀಮಾ ಮೃತ ಗೃಹಿಣಿ. ನಿನ್ನೆ ಸಂಜೆ 6.30ರ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ಘಟನೆ ನಡೆದಿದೆ. BMTC ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಅಪಘಾತದ ಬಳಿಕ ಬಸ್ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ.

ಕಳೆದ ಎರಡೂವರೆ ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿ ಸಿಂಗಸಂಧ್ರದಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಪ್ರೋ ಕಬಡಿ ಪಂದ್ಯ ವೀಕ್ಷಿಸಲು ತಮ್ಮ ಪುಟ್ಟ ಮಗುವಿನ ಜೊತೆ ಬೈಕ್​ನಲ್ಲಿ ಹೋಗುವಾಗ ಬಸ್​ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಮೂವರು ಕೆಳಗೆ ಬಿದ್ದಿದ್ದಾರೆ. ಬಿಎಂಟಿಸಿ ಬಸ್​ನ ಚಕ್ರದಡಿ ಸಿಲುಕಿದ ಸೀಮಾ(21) ಹೆಲ್ಮೆಟ್ ಧರಿಸಿದ್ದರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮಗು ಗಾನವಿ, ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

ಇದನ್ನೂ ಓದಿ: ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಇನ್ನು ಘಟನೆ ಸಂಬಂಧ ಮಾತನಾಡಿದ ಮೃತಳ ಪತಿ ಗುರುಮೂರ್ತಿ, ಸಂಜೆ ಪ್ರೋ ಕಬಡಿ ನಡೆಯುತಿತ್ತು. ಪತ್ನಿ ಮಗು ಕರೆದುಕೊಂಡು ಹೊಗ್ತಿದ್ದೆ. ಈ ವೇಳೆ ವೇಗವಾಗಿ ಬಸ್ ತಿರುಗಿಸಿ ಡಿಕ್ಕಿ ಹೊಡೆದಿದ್ದಾರೆ. ಪತ್ನಿ ಸಾವು ಸಂಭವಿಸುತಿದ್ದಂತೆ ಚಾಲಕ, ಕಂಡಕ್ಟರ್ ಇಬ್ಬರು ಪರಾರಿಯಾಗಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ. ಘಟನೆ ಬಳಿಕ ಯಾವ ಒಬ್ಬ ಬಿಎಂಟಿಸಿ ಅಧಿಕಾರಿಯೂ ಬಂದಿಲ್ಲ. ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಮೂಲತಃ ವಿಜಯನಗರ ಜಿಲ್ಲೆಯ ಶ್ರೀಕಂಠಪುರ ತಾಂಡಾದ ನಿವಾಸಿಗಳಾದ ದಂಪತಿ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಸ್ಕಾಂನಲ್ಲಿ ಲೈನ್​ಮ್ಯಾನ್​ ಆಗಿ‌‌ ಗುರುಮೂರ್ತಿ ಕೆಲಸ ಮಾಡುತ್ತಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಗೃಹಿಣಿ ಸೀಮಾ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ