ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಿರುವ ಕಿಲಾಡಿಗಳು: ತರಕಾರಿ ಬಿಲ್ ನೀಡಲು ಬಳಕೆ!

ಜಾಹೀರಾತಿನ ಹೆಸರಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪದಲ್ಲಿ ಐದು ಜನ ಬಿಎಂಟಿಸಿ ಅಧಿಕಾರಿಗಳ ಮೇಲೆ ಕಳೆದ ವಾರವಷ್ಟೇ ಎಫ್ಐಆರ್ ಆಗಿತ್ತು. ಇದೀಗ ಪ್ರಯಾಣಿಕರಿಗೆ ನೀಡುವ ಟಿಕೆಟ್ ರೋಲ್ ಅನ್ನು ಕೂಡ ಕದ್ದು ತರಕಾರಿ ಅಂಗಡಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಆ ಮೂಲಕ ಮತ್ತೊಂದು ಅಕ್ರಮ ಬಯಲಾದಂತಾಗಿದೆ.

ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಿರುವ ಕಿಲಾಡಿಗಳು: ತರಕಾರಿ ಬಿಲ್ ನೀಡಲು ಬಳಕೆ!
ಬಿಎಂಟಿಸಿ ಟಿಕೆಟ್ ರೋಲ್
Follow us
Kiran Surya
| Updated By: Ganapathi Sharma

Updated on: Feb 05, 2025 | 7:22 AM

ಬೆಂಗಳೂರು, ಫೆಬ್ರವರಿ 5: ಸಾಮಾನ್ಯವಾಗಿ ‌ಟಿಕೆಟ್ ಪೇಪರ್ ರೋಲ್​ಗಳನ್ನು ಪ್ರಯಾಣಿಕರಿಗೆ ಟಿಕೆಟ್ ನೀಡಲು ಬಳಸುತ್ತಾರೆ. ಆದರೆ, ಟಿಕೆಟ್ ನೀಡಲು ಬಳಸುವ ಎಲೆಕ್ಟ್ರಿಕ್ ಬಸ್​ನ ಪೇಪರ್ ಟಿಕೆಟ್ ರೋಲ್ ಅನ್ನು ಇಲ್ಲೊಬ್ಬ ವ್ಯಾಪಾರಿ ಹಣ್ಣು ಹಾಗೂ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಬಿಲ್ ಕೊಡಲು ಬಳಸುತ್ತಿದ್ದಾನೆ!

ಯಲಹಂಕದ ತರಕಾರಿ ಮಳಿಗೆಯಲ್ಲಿ ಬಿಎಂಟಿಸಿ ಟಿಕೆಟ್ ರೋಲ್

ಬೆಂಗಳೂರಿನ ಯಲಹಂಕದ ಅಟ್ಟೂರು ಲೇಔಟ್​​ನ ಎಸ್​ಆರ್​ಎಸ್ ತರಕಾರಿ ಹಾಗೂ ಹಣ್ಣು ವ್ಯಾಪಾರಿ ಮಳಿಗೆಯಲ್ಲಿ ಟಿಕೆಟ್ ರೋಲ್ ಉಪಯೋಗಿಸಿ, ತರಕಾರಿ ಹಾಗೂ ಹಣ್ಣಿನ ರೇಟ್ ಮುದ್ರಿಸಿ ಕೊಟ್ಟಿದ್ದ. ಈ ಬಗ್ಗೆ ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಬಿಎಂಟಿಸಿಗೆ ಮಾಹಿತಿ ನೀಡಿದ್ದರು. ಬಿಎಂಟಿಸಿ ಅಧಿಕಾರಿಗಳು ಅಂಗಡಿಗೆ ಹೋಗಿ ಪರಿಶೀಲಿಸಿದಾಗ ಎರಡು ಟಿಕೆಟ್ ರೋಲ್ ಪತ್ತೆಯಾಗಿದೆ.

ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು

ವ್ಯಾಪಾರಿ ಮುರಳಿಕೃಷ್ಣ ಮೇಲೆ ಯಲಹಂಕ ನ್ಯೂ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾತನಾಡಿದ ಸಾರಿಗೆ ನೌಕರರ ಮುಖಂಡರು, ಇದು ಬಿಎಂಟಿಸಿ ಭದ್ರತಾ ಮತ್ತು ಜಾಗೃತದಳದ ಅಧಿಕಾರಿಗಳ ನಿರ್ಲಕ್ಷ್ಯ ಎಂದಿದ್ದಾರೆ.

ಈ ಸಂಬಂಧ ಯಲಹಂಕ ಪೋಲಿಸ್ ಸ್ಟೇಷನ್​ಗೆ ಬಿಎಂಟಿಸಿ ದೂರು ನೀಡಿದೆ. ಯಲಹಂಕದ ಸುತ್ತಮುತ್ತಲಿನ ಸಾಕಷ್ಟು ಅಂಗಡಿಯಲ್ಲಿ ಬಿಎಂಟಿಸಿ ಟಿಕೆಟ್​ ರೋಲ್​ನಲ್ಲಿ ತಮ್ಮ ಅಂಗಡಿಯ ಬಿಲ್ ಗಳನ್ನು ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ಈ ಹಿಂದೆ ಇನ್ಸೆಂಟಿವ್​ಗಾಗಿ ಕಂಡಕ್ಟರ್​ಗಳು ಬಿಎಂಟಿಸಿಯ ಶಕ್ತಿ ಯೋಜನೆಯ ಟಿಕೆಟ್​​ಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪ ಕೇಳಿಬಂದಿತ್ತು. ಇದೀಗ ಟಿಕೆಟ್ ರೋಲ್ ಅಕ್ರಮ ಬಯಲಾಗಿದೆ.

ಸಿಕ್ಕಿಬಿದ್ದರೆ ಅಮಾನತಾಗುವುದು ಖಚಿತ

ಬಿಎಂಟಿಸಿ ಟಿಕೆಟ್ ರೋಲ್​ಗಳನ್ನು ಕದ್ದು ಮಾರಾಟ ಮಾಡಿದವರು ಸಿಕ್ಕಿಬಿದ್ದರೆ ಅಮಾನತಾಗುವುದು ಖಚಿತ ಎಂದು ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: Aero India 2025: ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್ ವ್ಯವಸ್ಥೆ, ಈ ಜಾಗದಲ್ಲಿ ಪಾರ್ಕಿಂಗ್

ಒಟ್ಟಿನಲ್ಲಿ ಕಳೆದ ವಾರವಷ್ಟೇ ಬಿಎಂಟಿಸಿ ಬಸ್​ಗಳ ಮೇಲೆ ಜಾಹೀರಾತು ಹಾಕುವ ವಿಚಾರದಲ್ಲಿ ಅಕ್ರಮವೆಸಗಿದ್ದು ಬಯಲಿಗೆ ಬಂದಿತ್ತು. ಇದೀಗ ಪ್ರಯಾಣಿಕರಿಗೆ ನೀಡುವ ಟಿಕೆಟ್​ಗೆ ಬೇಕಿರುವ ರೋಲ್​ ಅನ್ನು ಮಾರಾಟ ಮಾಡುತ್ತಿರುವುದು ಬಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು