ಬೆಂಗಳೂರಿನಲ್ಲಿ ಮತ್ತೊಂದು ಅಪಹರಣ​ ಪ್ರಕರಣ; ಕನ್ನಡ ಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್​ಐಆರ್

ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಕಿಡ್ನಾಪ್ ಕೇಸ್​ನಲ್ಲಿ ಕನ್ನಡ ಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಹೆಸರು ಕೇಳಿ ಬಂದಿದೆ. ಮಹಿಳೆಯೋರ್ವರಿಂದ ಸಾಲ ಪಡೆದು ವಾಪಾಸ್ ನೀಡಲು ಸತಾಯಿಸಿದಕ್ಕೆ ಮಹಿಳೆ ಕನ್ನಡ ಪರ ಅಧ್ಯಕ್ಷನ ಜೊತೆ ಸೇರಿಕೊಂಡು ಕಿಡ್ನಾಪ್ ಮಾಡಿಸಿದ್ದರು. ಸದ್ಯ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಅಪಹರಣ​ ಪ್ರಕರಣ; ಕನ್ನಡ ಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್​ಐಆರ್
ಕಿಡ್ನಾಪ್ ಕೇಸ್: ಕನ್ನಡ ಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ FIR
Follow us
| Updated By: ಆಯೇಷಾ ಬಾನು

Updated on: Jun 30, 2024 | 10:19 AM

ಬೆಂಗಳೂರು, ಜೂನ್.30: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಅಪಹರಣ​ (Kidnap) ಪ್ರಕರಣ ಬೆಳಕಿಗೆ ಬಂದಿದೆ. ಈ ಅಪಹರಣ ಪ್ರಕರಣದಲ್ಲಿ ಲೇಡಿ ಗ್ಯಾಂಗ್ ಜೊತೆ ಕನ್ನಡ ಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಹೆಸರು ಸಹ ಕೇಳಿ ಬಂದಿದೆ. ಘಟನೆ ಸಂಬಂಧ ಶಂಕರಪುರ ಪೊಲೀಸ್ ಠಾಣೆಯಲ್ಲಿ (Shankarapura Police Station) ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಪ್ರಕಾಶ್ ಅಲಿಯಾಸ್ ಕನ್ನಡ ಪ್ರಕಾಶ್ & ಗ್ಯಾಂಗ್​ ವಿರುದ್ಧ ಪ್ರಕರಣ ದಾಖಲಾಗಿದೆ.

ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ್ ಅವರನ್ನು ಪ್ರಕಾಶ್ & ಗ್ಯಾಂಗ್ ಅಪಹರಿಸಿತ್ತು. ಕಿಡ್ನಾಪ್ ಮಾಡಿದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಕನ್ನಡ ಪ್ರಕಾಶ್​ಗೆ ಸೇರಿದ ಕಚೇರಿಯಲ್ಲಿ ಮಂಜುನಾಥ್ ಅವರನ್ನು ಕರೆದುಕೊಂಡು ಬಂದು ಥಳಿಸಲಾಗಿತ್ತು. ಅಪಹರಿಸಿ ಹಣ, ಮನೆ ದಾಖಲೆಗಳನ್ನು ಕಸಿದುಕೊಂಡ ಆರೋಪ ಕೇಳಿ ಬಂದಿದೆ.

ಇನ್ನು ಮತ್ತೊಂದೆಡೆ ಅಪಹರಣಕ್ಕೊಳಗಾದ ಮಂಜುನಾಥ್ ಅವರು ಮಂಜುಳಾ ಎಂಬುವರ ಬಳಿ 8 ಲಕ್ಷ ಸಾಲ ಪಡೆದಿದ್ದರು. ಆದರೆ ಸಾಲ ಪಡೆದಿದ್ದ ಹಣ ವಾಪಸ್ ನೀಡದೆ ಮಂಜುನಾಥ್ ಸತಾಯಿಸಿದ್ದರು. ಹೀಗಾಗಿ ಮಂಜುಳಾ ಅವರು ಕನ್ನಡ ಪ್ರಕಾಶ್ ಜೊತೆ ಸೇರಿ ಕಿಡ್ನ್ಯಾಪ್​ ಪ್ಲ್ಯಾನ್​ ಮಾಡಿದ್ದರು. ಮಂಜುನಾಥ್​ನನ್ನು ಕಿಡ್ನ್ಯಾಪ್ ಮಾಡಿ ದಾಖಲೆ ಕಿತ್ತುಕೊಂಡಿದ್ದರು. ಸದ್ಯ ಮಂಜುಳಾ, ಪ್ರಕಾಶ್, ಚಲಪತಿ ಸೇರಿ 6 ಆರೋಪಿಗಳ ವಿರುದ್ಧ FIR ದಾಖಲಾಗಿದೆ.

ಇದನ್ನೂ ಓದಿ: New Criminal Laws: ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಜೂಜಾಟದಲ್ಲಿ ತೊಡಗಿದ್ದ 22 ಆರೋಪಿಗಳು ಪೊಲೀಸರ ವಶಕ್ಕೆ

ಚಿತ್ರದುರ್ಗದಲ್ಲಿ ಬಿಗ್ ಬಾಸ್ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದು ಜೂಜಾಟದಲ್ಲಿ ತೊಡಗಿದ್ದ 22 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು 85 ಸಾವಿರ ರೂ.‌ ಮೌಲ್ಯದ ಟೋಕನ್ ವಶಕ್ಕೆ ಪಡೆದಿದ್ದಾರೆ. ಬಿಗ್ ಬಾಸ್ ಹೋಟೆಲ್‌ನ 4ನೇ ಮಹಡಿಯಲ್ಲಿರುವ ಫೋರ್ಟ್ ಸಿಟಿ ರಿಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಜೂರಾಟ ನಡೆಯುತ್ತಿತ್ತು. ಡಿವೈಎಸ್​ಪಿ ದಿನಕರ್, ಸಿಪಿಐ ದೊಡ್ಡಣ್ಣ ನೇತೃತ್ವದಲ್ಲಿ ದಾಳಿ ನಡೆದಿದ್ದು 22 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗದ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ