AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ: ನೆಲಕ್ಕುರುಳಿದ ಕ್ರೇನ್​, ತಪ್ಪಿದ ಭಾರೀ ಅನಾಹುತ

ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ. ಆ ಮೂಲಕ ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ: ನೆಲಕ್ಕುರುಳಿದ ಕ್ರೇನ್​, ತಪ್ಪಿದ ಭಾರೀ ಅನಾಹುತ
ನೆಲಕ್ಕುರುಳಿದ ಕ್ರೇನ್
ರಾಚಪ್ಪಾಜಿ ನಾಯ್ಕ್
| Edited By: |

Updated on:Jul 07, 2023 | 11:22 PM

Share

ಬೆಂಗಳೂರು: ಮೆಟ್ರೋ (metro) ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ. ಆ ಮೂಲಕ ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಜಾರಿ ಬಿಳ್ಳಲು ಕಾರಣ ಏನು ಎಂಬುವುದನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮಡಿವಾಳ ಕಡೆಗೆ ಬರುವವರು ಬಿಟಿಎಂ ಲೇಔಟ್​ ಮೂಲಕ ಸಂಚರಿಸಬೇಕು. ಅದೇ ರೀತಿಯಾಗಿ ಬಿಟಿಎಂ ಲೇಔಟ್​ನಿಂದ ಮಡಿವಾಳಕ್ಕೆ ಹೋಗುವವರು ಎಚ್​ಎಸ್​​ಆರ್​ 14ನೇ ಮುಖ್ಯ ರಸ್ತೆ ಮೂಲಕ ಸಾಗಬೇಕಿದೆ.​

ಇದನ್ನೂ ಓದಿ: Metro Pillar collapsed ಮೆಟ್ರೋ ಕಂಬಿ ಕುಸಿದು ತಾಯಿ, ಮಗು ಸಾವು ಪ್ರಕರಣ: ಐವರ ವಿರುದ್ಧ ಕೇಸ್ ಬುಕ್

ಇತ್ತೀಚೆಗೆ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ ಕುಸಿದು ಬಿದ್ದು, ಮಹಿಳೆ ಮತ್ತು ಎರಡು ವರ್ಷದ ಮಗು ಸಾವನ್ನಪ್ಪಿರುವಂತಹ ಘಟನೆ ನಗರದ ನಾಗವಾರದಲ್ಲಿ ನಡೆದಿತ್ತು. ಕಲ್ಯಾಣ್​ ನಗರದಿಂದ ಹೆಚ್​ಆರ್​ಬಿಆರ್​ ಲೇಔಟ್​ಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗುತ್ತಿದ್ದ ಮೆಟ್ರೊ ರೈಲ್ವೆ ಪಿಲ್ಲರ್​ನ ರಾಡ್​ಗಳು ರಸ್ತೆ ಮೇಲೆ ಕುಸಿದು ಬಿದ್ದ ಪರಿಣಾಮ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: Bengaluru News: ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್​ಐಆರ್ ದಾಖಲು

ಈ ಘಟನೆ ಮಾಸುವ ಮುನ್ನವೇ ನಮ್ಮ ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ ಉಂಟಾಗಿರುವುದು ಸಾರ್ವಜನಿಕರಲ್ಲಿ ಮತ್ತು ವಾಹನ ಸವಾರರಲ್ಲಿ ಆತಂಕ ಶುರುವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:10 pm, Fri, 7 July 23

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು