AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರಾ! ಗುಂಡಿ ಗಂಡಾಂತರ ಮುಂದುವರೆದಿದೆ, ಇಟ್ಟುಮಡು ಮುಖ್ಯರಸ್ತೆಯಲ್ಲಿ ರಸ್ತೆ ಧಡಾರನೆ ಕುಸಿದುಬಿಟ್ಟಿದೆ

ಬೆಂಗಳೂರು ನಗರದಲ್ಲಿ ಗುಂಡಿಗಳ ಅವಾಂತರ ಮುಂದುವರೆದಿದೆ. ಮಾರುತಿನಗರದ ಇಟ್ಟುಮಡು ಮುಖ್ಯರಸ್ತೆಯಲ್ಲಿ BWSSB ಡ್ರೈನೇಜ್​​ ಚೇಂಬರ್ ಪಕ್ಕದಲ್ಲೇ ಶುಕ್ರವಾರ ರಾತ್ರಿ ಏಕಾಏಕಿ ರಸ್ತೆ ಕುಸಿದಿದೆ.

ಬೆಂಗಳೂರಿಗರೇ ಎಚ್ಚರಾ! ಗುಂಡಿ ಗಂಡಾಂತರ ಮುಂದುವರೆದಿದೆ, ಇಟ್ಟುಮಡು ಮುಖ್ಯರಸ್ತೆಯಲ್ಲಿ ರಸ್ತೆ ಧಡಾರನೆ ಕುಸಿದುಬಿಟ್ಟಿದೆ
ಇಟ್ಟುಮಡು ಮುಖ್ಯರಸ್ತೆ
Follow us
TV9 Web
| Updated By: ಆಯೇಷಾ ಬಾನು

Updated on:Jan 21, 2023 | 1:22 PM

ಬೆಂಗಳೂರು: ಲಕ್ಷಾಂತರ ಮಂದಿಗೆ ಬದುಕು ಕಟ್ಟಿಕೊಟ್ಟ ಬೆಂಗಳೂರು ನಗರದಲ್ಲೀಗ ವಾಹನ ಸವಾರರಿಗೆ ಜೀವ ಭಯ ಕಾಡುತ್ತಿದೆ. ನಗರದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಅವಘಡಗಳು ಸಂಭವಿಸುತ್ತಿವೆ. ಮೆಟ್ರೋ ಪಿಲ್ಲರ್ ದುರಂತದಿಂದ ತಾಯಿ ಮಗು ಸಾವನ್ನಪ್ಪಿದ್ದರು. ಬಳಿಕ ಮಹಾಲಕ್ಷ್ಮೀ ಲೇಔಟ್ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಳಪೆ ಕಾಮಗಾರಿಯಿಂದ ಏಕಾಏಕಿ ರಸ್ತೆ ಕುಸಿದಿತ್ತು. ಇದೀಗ ಅದೇ ರೀತಿ ಮತ್ತೊಂದು ಘಟನೆ ನಡೆದಿದೆ. ಮಾರುತಿನಗರದ ಇಟ್ಟುಮಡು ಮುಖ್ಯರಸ್ತೆಯಲ್ಲಿ BWSSB ಡ್ರೈನೇಜ್​​ ಚೇಂಬರ್ ಪಕ್ಕದಲ್ಲೇ ರಸ್ತೆ ಕುಸಿದಿದೆ. ಇದರಿಂದ ವಾಹನ ಸವಾರರು ಯಾವಾಗ ಏನು ಆಗುತ್ತೋ ಎಂಬ ಭಯದಲ್ಲೇ ಪ್ರಾಣ ಕೈಯಲ್ಲಿಡಿದು ವಾಹನ ಚಲಾಯಿಸುವಂತಾಗಿದೆ.

ಬೆಂಗಳೂರು ನಗರದಲ್ಲಿ ಗುಂಡಿಗಳ ಅವಾಂತರ ಮುಂದುವರೆದಿದೆ. ಮಾರುತಿನಗರದ ಇಟ್ಟುಮಡು ಮುಖ್ಯರಸ್ತೆಯಲ್ಲಿ BWSSB ಡ್ರೈನೇಜ್​​ ಚೇಂಬರ್ ಪಕ್ಕದಲ್ಲೇ ಶುಕ್ರವಾರ ರಾತ್ರಿ ಏಕಾಏಕಿ ರಸ್ತೆ ಕುಸಿದಿದೆ. ರಸ್ತೆ ಮಧ್ಯೆ ಗುಂಡಿ ಬಿದ್ದ ಪರಿಣಾಮ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಂಗಳೂರಿನಲ್ಲಿ ಈ ತಿಂಗಳು ವರದಿಯಾದ ಮೂರನೇ ಪ್ರಕರಣ ಇದಾಗಿದೆ. ಸದ್ಯ ವಿಷಯ ತಿಳಿಯುತ್ತಿದ್ದಂತೆಯೇ BWSSB ಹಾಗೂ BBMP ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. Road Cave

ಇದನ್ನೂ ಓದಿ: ಮಹಾಲಕ್ಷ್ಮೀ ಲೇಔಟ್ ಮುಖ್ಯರಸ್ತೆಯಲ್ಲಿ ಏಕಾಏಕಿ ಕುಸಿದ ರಸ್ತೆ; ಜೀವ ಭಯದಲ್ಲಿ ವಾಹನ ಸವಾರರು

2 ದಿನಗಳ ಹಿಂದೆ ಬಿಬಿಎಂಪಿ ರಸ್ತೆಗೆ ಟಾರ್ ಹಾಕಿದ್ದು ಮಹಾಲಕ್ಷ್ಮಿ ಲೇಔಟ್ ಮುಖ್ಯ ರಸ್ತೆ ಸಪ್ತಗಿರಿ ಕಲ್ಯಾಣ ಮಂಟಪದ ಬಳಿ ಪೈಪ್​ಲೈನ್ ಹಾದು ಹೋಗಿರುವ ಜಾಗದಲ್ಲೇ ರಸ್ತೆ ಕುಸಿದು ಬಿದ್ದಿತ್ತು. ಕೇವಲ ಎರಡು ದಿನದಲ್ಲೇ ರಸ್ತೆ ಕುಸಿದು ಬಿದ್ದಿದನ್ನು ನೋಡಿದ ಸಾರ್ವಜನಿಕರು ಬಿಬಿಎಂಪಿಯ ಕಳಪೆ ಕಾಮಗಾರಿ ಬಗ್ಗೆ ಟೀಕೆ ಮಾಡಿದ್ದರು. ಆದ್ರೆ ಈಗ ಮತ್ತೆ ಅದೇ ರೀತಿಯ ಘಟನೆ ಮರು ಕಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:22 pm, Sat, 21 January 23

ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್