AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರಾ! ಗುಂಡಿ ಗಂಡಾಂತರ ಮುಂದುವರೆದಿದೆ, ಇಟ್ಟುಮಡು ಮುಖ್ಯರಸ್ತೆಯಲ್ಲಿ ರಸ್ತೆ ಧಡಾರನೆ ಕುಸಿದುಬಿಟ್ಟಿದೆ

ಬೆಂಗಳೂರು ನಗರದಲ್ಲಿ ಗುಂಡಿಗಳ ಅವಾಂತರ ಮುಂದುವರೆದಿದೆ. ಮಾರುತಿನಗರದ ಇಟ್ಟುಮಡು ಮುಖ್ಯರಸ್ತೆಯಲ್ಲಿ BWSSB ಡ್ರೈನೇಜ್​​ ಚೇಂಬರ್ ಪಕ್ಕದಲ್ಲೇ ಶುಕ್ರವಾರ ರಾತ್ರಿ ಏಕಾಏಕಿ ರಸ್ತೆ ಕುಸಿದಿದೆ.

ಬೆಂಗಳೂರಿಗರೇ ಎಚ್ಚರಾ! ಗುಂಡಿ ಗಂಡಾಂತರ ಮುಂದುವರೆದಿದೆ, ಇಟ್ಟುಮಡು ಮುಖ್ಯರಸ್ತೆಯಲ್ಲಿ ರಸ್ತೆ ಧಡಾರನೆ ಕುಸಿದುಬಿಟ್ಟಿದೆ
ಇಟ್ಟುಮಡು ಮುಖ್ಯರಸ್ತೆ
TV9 Web
| Updated By: ಆಯೇಷಾ ಬಾನು|

Updated on:Jan 21, 2023 | 1:22 PM

Share

ಬೆಂಗಳೂರು: ಲಕ್ಷಾಂತರ ಮಂದಿಗೆ ಬದುಕು ಕಟ್ಟಿಕೊಟ್ಟ ಬೆಂಗಳೂರು ನಗರದಲ್ಲೀಗ ವಾಹನ ಸವಾರರಿಗೆ ಜೀವ ಭಯ ಕಾಡುತ್ತಿದೆ. ನಗರದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಅವಘಡಗಳು ಸಂಭವಿಸುತ್ತಿವೆ. ಮೆಟ್ರೋ ಪಿಲ್ಲರ್ ದುರಂತದಿಂದ ತಾಯಿ ಮಗು ಸಾವನ್ನಪ್ಪಿದ್ದರು. ಬಳಿಕ ಮಹಾಲಕ್ಷ್ಮೀ ಲೇಔಟ್ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಳಪೆ ಕಾಮಗಾರಿಯಿಂದ ಏಕಾಏಕಿ ರಸ್ತೆ ಕುಸಿದಿತ್ತು. ಇದೀಗ ಅದೇ ರೀತಿ ಮತ್ತೊಂದು ಘಟನೆ ನಡೆದಿದೆ. ಮಾರುತಿನಗರದ ಇಟ್ಟುಮಡು ಮುಖ್ಯರಸ್ತೆಯಲ್ಲಿ BWSSB ಡ್ರೈನೇಜ್​​ ಚೇಂಬರ್ ಪಕ್ಕದಲ್ಲೇ ರಸ್ತೆ ಕುಸಿದಿದೆ. ಇದರಿಂದ ವಾಹನ ಸವಾರರು ಯಾವಾಗ ಏನು ಆಗುತ್ತೋ ಎಂಬ ಭಯದಲ್ಲೇ ಪ್ರಾಣ ಕೈಯಲ್ಲಿಡಿದು ವಾಹನ ಚಲಾಯಿಸುವಂತಾಗಿದೆ.

ಬೆಂಗಳೂರು ನಗರದಲ್ಲಿ ಗುಂಡಿಗಳ ಅವಾಂತರ ಮುಂದುವರೆದಿದೆ. ಮಾರುತಿನಗರದ ಇಟ್ಟುಮಡು ಮುಖ್ಯರಸ್ತೆಯಲ್ಲಿ BWSSB ಡ್ರೈನೇಜ್​​ ಚೇಂಬರ್ ಪಕ್ಕದಲ್ಲೇ ಶುಕ್ರವಾರ ರಾತ್ರಿ ಏಕಾಏಕಿ ರಸ್ತೆ ಕುಸಿದಿದೆ. ರಸ್ತೆ ಮಧ್ಯೆ ಗುಂಡಿ ಬಿದ್ದ ಪರಿಣಾಮ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಂಗಳೂರಿನಲ್ಲಿ ಈ ತಿಂಗಳು ವರದಿಯಾದ ಮೂರನೇ ಪ್ರಕರಣ ಇದಾಗಿದೆ. ಸದ್ಯ ವಿಷಯ ತಿಳಿಯುತ್ತಿದ್ದಂತೆಯೇ BWSSB ಹಾಗೂ BBMP ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. Road Cave

ಇದನ್ನೂ ಓದಿ: ಮಹಾಲಕ್ಷ್ಮೀ ಲೇಔಟ್ ಮುಖ್ಯರಸ್ತೆಯಲ್ಲಿ ಏಕಾಏಕಿ ಕುಸಿದ ರಸ್ತೆ; ಜೀವ ಭಯದಲ್ಲಿ ವಾಹನ ಸವಾರರು

2 ದಿನಗಳ ಹಿಂದೆ ಬಿಬಿಎಂಪಿ ರಸ್ತೆಗೆ ಟಾರ್ ಹಾಕಿದ್ದು ಮಹಾಲಕ್ಷ್ಮಿ ಲೇಔಟ್ ಮುಖ್ಯ ರಸ್ತೆ ಸಪ್ತಗಿರಿ ಕಲ್ಯಾಣ ಮಂಟಪದ ಬಳಿ ಪೈಪ್​ಲೈನ್ ಹಾದು ಹೋಗಿರುವ ಜಾಗದಲ್ಲೇ ರಸ್ತೆ ಕುಸಿದು ಬಿದ್ದಿತ್ತು. ಕೇವಲ ಎರಡು ದಿನದಲ್ಲೇ ರಸ್ತೆ ಕುಸಿದು ಬಿದ್ದಿದನ್ನು ನೋಡಿದ ಸಾರ್ವಜನಿಕರು ಬಿಬಿಎಂಪಿಯ ಕಳಪೆ ಕಾಮಗಾರಿ ಬಗ್ಗೆ ಟೀಕೆ ಮಾಡಿದ್ದರು. ಆದ್ರೆ ಈಗ ಮತ್ತೆ ಅದೇ ರೀತಿಯ ಘಟನೆ ಮರು ಕಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:22 pm, Sat, 21 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ