AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಮೈದಾನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್; ಮೈದಾನದ ಮೂಲ ದಾಖಲಾತಿಗಳು ಬಿಬಿಎಂಪಿ ಬಳಿ ಇಲ್ಲವಂತೆ! ಮುಂದೇನು?

ಮೈದಾನದ ವಿಚಾರವಾಗಿ ಈ ಹಿಂದೆ ಯಾರೋ ಖಾಸಗಿ ವ್ಯಕ್ತಿ ಇದು ನನ್ನ ಜಾಗ ಎಂದು ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು. ಆಗ ಸುಪ್ರಿಂ ಕೋರ್ಟ್ ವರ್ಷದಲ್ಲಿ ಎರಡು ದಿನ ಪ್ರಾರ್ಥನೆಗೆ ಅವಕಾಶ ನೀಡಲು ಸೂಚಿಸಿದೆ. ಈ ಮೈದಾನದ ಮೂಲ ದಾಖಲೆಗಳು ಬಿಬಿಎಂಪಿ ಬಳಿ ಇಲ್ಲ. ಸದ್ಯ ಬಿಬಿಎಂಪಿ ಜಂಟಿ ಆಯುಕ್ತರು, ಸರ್ವೆ ಇಲಾಖೆಗೆ ತೆರಳಿ ಮೂಲ ದಾಖಲೆ ಹುಡುಕುವ ಕೆಲಸ ಮಾಡುತ್ತಿದ್ದಾರೆ.

ಚಾಮರಾಜಪೇಟೆ ಮೈದಾನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್; ಮೈದಾನದ ಮೂಲ ದಾಖಲಾತಿಗಳು ಬಿಬಿಎಂಪಿ ಬಳಿ ಇಲ್ಲವಂತೆ! ಮುಂದೇನು?
ಚಾಮರಾಜಪೇಟೆಯ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Updated By: ಆಯೇಷಾ ಬಾನು|

Updated on:Jun 14, 2022 | 4:48 PM

Share

ಬೆಂಗಳೂರು: ಚಾಮರಾಜಪೇಟೆ ಮೈದಾನ ವಿಚಾರ( Chamrajpet Edga Ground Controversy) ದಿನದಿಂದ ದಿನಕ್ಕೆ ತಾರಕ್ಕೇರುತ್ತಿದೆ. ಮೊನ್ನೆ ಸ್ಥಳೀಯರು ಮತ್ತು ಪೊಲೀಸರ ನಡುವೆ ಕಾಳಗ ನಡೆದಿತ್ತು. ಇದೀಗ ಹಿಂದೂಪರ ಸಂಘಟನೆ, ಮೈದಾನ ವಿಚಾರವಾಗಿ ಪಾಲಿಕೆಗೆ ಡೆಡ್ ಲೈನ್ ಕೊಟ್ಟಿದ್ದು, ಇದೀಗ ಚಾಮರಾಜಪೇಟೆ ಮೈದಾನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮೈದಾನದ ಮೂಲ ದಾಖಲಾತಿಗಳು ಬಿಬಿಎಂಪಿ ಬಳಿ ಇಲ್ಲ.

ಮೈದಾನದ ವಿಚಾರವಾಗಿ ಈ ಹಿಂದೆ ಯಾರೋ ಖಾಸಗಿ ವ್ಯಕ್ತಿ ಇದು ನನ್ನ ಜಾಗ ಎಂದು ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು. ಆಗ ಸುಪ್ರಿಂ ಕೋರ್ಟ್ ವರ್ಷದಲ್ಲಿ ಎರಡು ದಿನ ಪ್ರಾರ್ಥನೆಗೆ ಅವಕಾಶ ನೀಡಲು ಸೂಚಿಸಿದೆ. ಈ ಮೈದಾನದ ಮೂಲ ದಾಖಲೆಗಳು ಬಿಬಿಎಂಪಿ ಬಳಿ ಇಲ್ಲ. ಸದ್ಯ ಬಿಬಿಎಂಪಿ ಜಂಟಿ ಆಯುಕ್ತರು, ಸರ್ವೆ ಇಲಾಖೆಗೆ ತೆರಳಿ ಮೂಲ ದಾಖಲೆ ಹುಡುಕುವ ಕೆಲಸ ಮಾಡುತ್ತಿದ್ದಾರೆ. ಮೈದಾನದಲ್ಲಿ ಕಾರ್ಯಕ್ರಮ ಮಾಡುವವರು ಮನವಿ ಪತ್ರ ನೀಡಲಿ. ಬಿಬಿಎಂಪಿ, ಪೊಲೀಸ್ ಇಲಾಖೆ ಜೊತೆ ಸಭೆ ನಡೆಸಿ ಅಂತಿಮ ತೀರ್ಮಾನ ಮಾಡಲಾಗುವುದು. ಆದರೆ ಇಂದೇ ಕಾರ್ಯಕ್ರಮಕ್ಕೆ ಅನುಮತಿ ನೀಡುವುದು ಅನುಮಾನ. ಹೀಗಾಗಿ ಮೂಲ ದಾಖಲೆ ಪತ್ರ ಸಿಕ್ಕ ಬಳಿಕ ಅನುಮತಿ ವಿಚಾರ ಚರ್ಚೆಯಾಗಲಿದೆ. ಇದನ್ನೂ ಓದಿ: ಚಿಕ್ಕಮಗಳೂರು: ಮುಸ್ಲಿಮರು ಪೂಜಿಸುತ್ತಿದ್ದ ದೇವರಕಟ್ಟೆಗೆ ಬೆಂಕಿ, ಕುರಾನ್, ಪೂಜಾ ಸಾಮಗ್ರಿಗಳಿಗೆ ಹಾನಿ

ಜೂ.21ರಂದು ಯೋಗ ದಿನಾಚರಣೆಗೆ ಅನುಮತಿ ನೀಡುವಂತೆ ಮನವಿ ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನವನ್ನು ಜೂ.21ರಂದು ಯೋಗ ದಿನಾಚರಣೆಗೆ ಅನುಮತಿ ನೀಡುವಂತೆ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ವಿಶ್ವ ಸನಾತನ ಹಿಂದೂ ಪರಿಷತ್ ಮನವಿ ಮಾಡಿದೆ. ​ಮೈದಾನದಲ್ಲಿ ನಮಗೆ ಅನುಮತಿ ಕೊಡಿ, ಕೊಡಲ್ಲ ಅಂತಾದ್ರೂ ಹೇಳಿ. ಮುಂದೆ ಏನು ಮಾಡಬೇಕೋ ನಾವು ನಿರ್ಣಯ ತೆಗೆದುಕೊಳ್ತೇವೆ ಎಂದಿದ್ದಾರೆ. ಅಲ್ಲದೆ ಕೋರ್ಟ್​ಗೆ ಹೋಗೋದಕ್ಕೆ ಸಿದ್ಧವೆಂದಿದ್ದ ಸನಾತನ ಹಿಂದೂ ಪರಿಷತ್ ಇವತ್ತು ಮಧ್ಯಾಹ್ನ 3 ಗಂಟೆವರೆಗೆ ಬಿಬಿಎಂಪಿಗೆ ಡೆಡ್​ಲೈನ್ ಕೊಟ್ಟಿದ್ದರು. ಆದರೆ ಬಿಬಿಎಂಪಿಯಿಂದ ಯಾವುದೇ ಗ್ರೀನ್ ಸಿಗ್ನಲ್ ಸಿಗದ ಹಿನ್ನೆಲೆ ಪಶ್ಚಿಮ ವಲಯದ ಜಂಟಿ ಆಯುಕ್ತರ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ.

ಹೈ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಈದ್ಗಾ ವಾರ್? ಈ ವಿಚಾರಕ್ಕೆ ಸಂಬಂಧಿಸಿ ಮಗದೊಮ್ಮೆ ಕೋರ್ಟ್ ಕದ ತಟ್ಟಲು ಹಿಂದೂ ಸಂಘಟನೆ ಸಜ್ಜಾಗಿದೆ. ಬಿಬಿಎಂಪಿಗೆ ಮೂರು ದಿನದ ಡೆಡ್ ಲೈನ್ ನೀಡಲಾಗಿತ್ತು. ಯೋಗ ದಿನಾಚರಣೆಗೆ ಅವಕಾಶ ಕೊಡದೇ ಇದ್ರೇ, ಬಿಬಿಎಂಪಿ ಇದನ್ನು ಬಿಬಿಎಂಪಿ ಮೈದಾನ ಅಂತಾ ಘೋಷಿಸದೇ ಇದ್ರೇ ಹೈಕೋರ್ಟ್ ಮೊರೆ ಹೋಗುವುದಾಗಿ ಹಿಂದೂ ಸಂಘಟನೆ ತಿಳಿಸಿತ್ತು. ಸದ್ಯ ಬಿಬಿಎಂಪಿ ಕಾನೂನು ಕೋಶದ ಅಭಿಪ್ರಾಯ ಕೇಳಿದೆ. ಇನ್ನೂ ಕಾನೂನು ಕೋಶ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಈ ಮಧ್ಯೆ ಬಿಬಿಎಂಪಿಯ ವಿಳಂಬ ಧೋರಣೆಗೆ ಕೆರಳಿದ ಹಿಂದೂ ಸಂಘಟನೆಗಳು ಮತ್ತೆ ಮೂರು ದಿನದ ಡೆಡ್ ಲೈನ್ ಕೊಟ್ಟಿವೆ. ಇದನ್ನೂ ಓದಿ:ತಾಳಿ ಕಟ್ಟದೆ ಬಸವ ತತ್ವದ ಅಡಿಯಲ್ಲಿ ಮಠಾಧೀಶರ ಸಮ್ಮುಖದಲ್ಲಿ ನಡೆದ ವಿಶಿಷ್ಟ ಮದುವೆ

ವಕ್ಫ್ ಬೋರ್ಡ್​ಗೆ ಬಿಬಿಎಂಪಿಯಿಂದ ನೋಟಿಸ್ ಜಾರಿ ನಿಮ್ಮ ಆಸ್ತಿ ಅನ್ನೋದಾದ್ರೆ ದಾಖಲೆ ನೀಡುವಂತೆ ವಕ್ಫ್ ಬೋರ್ಡ್​ಗೆ ಬಿಬಿಎಂಪಿ ನೋಟಿಸ್ ನೀಡಿದೆ. ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:06 pm, Tue, 14 June 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?