AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ 6 ರೈಲು ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆಗೆ ಒಪ್ಪಿಗೆ

ಹೆಚ್ಚಿನ ರೈಲುಗಳ ಸಂಚಾರಕ್ಕೆ ಅನುಕೂಲ ಆಗಲು ಹಾಗೂ ರೈಲು ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರಿನ ಆರು ಪ್ರಮುಖ ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್​ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಒಟ್ಟು 639.05 ಕಿಮೀ ದೂರಕ್ಕೆ ಅನುಮತಿ ದೊರೆತಿದ್ದು, ಇದಕ್ಕೆ ಸುಮಾರು 874 ಕೋಟಿ ರೂ. ವೆಚ್ಚವಾಗಲಿದೆ.

ಬೆಂಗಳೂರಿನ ಈ 6 ರೈಲು ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆಗೆ ಒಪ್ಪಿಗೆ
ರೈಲು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Feb 12, 2024 | 8:29 AM

Share

ಬೆಂಗಳೂರು, ಫೆಬ್ರವರಿ 12: ಹೆಚ್ಚುತ್ತಿರುವ ಪ್ರಯಾಣಿಕರ ಮತ್ತು ಸರಕು ಸಾಗಾಣೆಯ ದೃಷ್ಟಿಯಿಂದ ಲೈನ್​ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರಿನ (Bengaluru) ಆರು ಪ್ರಮುಖ ರೈಲು (Train) ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ (Automatic Signalling System)​ ವ್ಯವಸ್ಥೆಯನ್ನು ಅಳವಡಿಸುವ ನೈಋತ್ಯ ರೈಲ್ವೆ ಇಲಾಖೆಯ (South Western Railway) ಪ್ರಸ್ತಾವನೆಗೆ ರೈಲ್ವೆ ಮಂಡಳಿ (Indian Railway) ಅನುಮೋದನೆ ನೀಡಿದೆ.

ಸ್ವಯಂಚಾಲಿತ ಸಿಗ್ನಲಿಂಗ್​ ಸಿಸ್ಟಂ ಎಲ್ಲೆಲ್ಲಿ?

ಬೆಂಗಳೂರು ನಗರ-ಯಶವಂತಪುರ-ಯಲಹಂಕ 17.75 ಕಿ.ಮೀ

ಯಶವಂತಪುರ-ಅರಸೀಕೆರೆ ವಿಭಾಗದಲ್ಲಿ 160.65 ಕಿ.ಮೀ

ಲೊಟ್ಟೆಗೊಲ್ಲಹಳ್ಳಿ-ಹೊಸೂರು ವಿಭಾಗದ 63.6 ಕಿ.ಮೀ

ವೈಟ್‌ಫೀಲ್ಡ್-ಜೋಲಾರ್‌ಪೇಟೆ ವಿಭಾಗ 119 ಕಿ.ಮೀ

ಬೈಯ್ಯಪ್ಪನಹಳ್ಳಿ-ಪೆನುಕೊಂಡ ವಿಭಾಗ ಚನ್ನಸಂದ್ರ ಮಾರ್ಗವಾಗಿ 139.8 ಕಿ.ಮೀ

ಬೆಂಗಳೂರು ನಗರ-ಮೈಸೂರು 138.25 ಕಿ.ಮೀ

ಹೆಚ್ಚಿನ ರೈಲುಗಳ ಸಂಚಾರಕ್ಕೆ ಅನುಕೂಲ ಆಗಲು ಹಾಗೂ ರೈಲು ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರಿನ ಆರು ಪ್ರಮುಖ ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್​ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಒಟ್ಟು 639.05 ಕಿಮೀ ದೂರಕ್ಕೆ ಅನುಮತಿ ದೊರೆತಿದ್ದು, ಇದಕ್ಕೆ ಸುಮಾರು 874 ಕೋಟಿ ರೂ. ವೆಚ್ಚವಾಗಲಿದೆ. ನೈರುತ್ಯ ರೈಲ್ವೆ ಇಲಾಖೆ ಪ್ರಸ್ತುತ ಬೆಂಗಳೂರು ವಿಭಾಗದಲ್ಲಿ ಕೆಎಸ್‍ಆರ್ ಬೆಂಗಳೂರು ನಗರ-ವೈಟ್‍ಫೀಲ್ಡ್ ವಿಭಾಗದಲ್ಲಿ ಆಟೋಮೆಟಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ.

ನೈಋತ್ಯ ರೈಲ್ವೆ ಇಲಾಖೆ ಅಧಿಕಾರಿಗಳ ಪ್ರಕಾರ, ಇದು ಥ್ರೋಪುಟ್ ಅನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಚೆನ್ನೈ, ಮೈಸೂರು, ಹುಬ್ಬಳ್ಳಿ ಮತ್ತು ಹೈದರಾಬಾದ್ ಸೇರಿದಂತೆ ಎಲ್ಲ ದಿಕ್ಕುಗಳಲ್ಲಿ ಬೆಂಗಳೂರು ಪ್ರದೇಶಕ್ಕೆ ಮತ್ತು ಅಲ್ಲಿಂದ ಬರುವ ರೈಲುಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಬೆಂಗಳೂರಿಗೆ ಶೀಘ್ರ ಬರಲಿದೆ ಸಬ್ ಅರ್ಬನ್ ರೈಲು, ಅಂತಿಮ ಹಂತದಲ್ಲಿ 2 ಕಾರಿಡಾರ್: ಎಂಬಿ ಪಾಟೀಲ್

ಸ್ವಯಂಚಾಲಿತ ಸಿಗ್ನಲಿಂಗ್ ರೈಲು ಮೂಲಸೌಕರ್ಯವನ್ನು ಆಧುನೀಕರಿಸುವ ಮತ್ತು ಉತ್ತಮಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ಇದು ಹೆಚ್ಚು ಪರಿಣಾಮಕಾರಿ ಮತ್ತು ದೃಢವಾದ ಸಾರಿಗೆ ಜಾಲವನ್ನು ಖಾತ್ರಿಪಡಿಸುತ್ತದೆ. ಸ್ವಯಂಚಾಲಿತ ಸಿಗ್ನಲಿಂಗ್ ಅಳವಡಿಸುವುದರಿಂದ ಹಲವಾರು ಪ್ರಯೋಜನಗಳಿವೆ ಎಂದು ನೈಋತ್ಯ ರೈಲ್ವೆ ಇಲಾಖೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ್ ಕನಮಡಿ ಹೇಳಿದರು.

ನೈಋತ್ಯ ರೈಲ್ವೆ ಇಲಾಖೆ ಅಧಿಕಾರಿಯ ಪ್ರಕಾರ, ಈ ವ್ಯವಸ್ಥೆ ಅಳವಡಿಸುವುದರಿಂದ ರೈಲುಗಳು ತ್ವರಿತವಾಗಿ ಫ್ಲಾಟಫಾರಂನಿಂದ ನಿರ್ಗಮಿಸುತ್ತವೆ ಮತ್ತು ನಿಲ್ದಾಣಕ್ಕೆ ಬರುವ ಸಮಯ ವಿಳಂಬವನ್ನು ಕಡಿಮೆ ಮಾಡುತ್ತದೆ. ಸ್ವಯಂಚಾಲಿತ ಸಿಗ್ನಲಿಂಗ್‌ನ ಅಳವಡಿಸುವುದರಿಂದ ಎಲ್ಲ ಮಾಧರಿಯ ರೈಲುಗಳ ಕಾರ್ಯಾಚರಣೆಯನ್ನು ಹೆಚ್ಚಿಸುತ್ತದೆ.

ಸುರಕ್ಷತಾ ಮಾನದಂಡಗಳನ್ನು ಅನುಸರಿಸುತ್ತಾ, ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಇದು ಸಹಾಯ ಮಾಡುತ್ತದೆ. ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯು ರೈಲುಗಳ ಸರಾಸರಿ ವೇಗವನ್ನು ಹೆಚ್ಚಿಸುತ್ತದೆ ಏಕೆಂದರೆ ಬ್ಲಾಕ್ ವಿಭಾಗಗಳನ್ನು ವೇಗವಾಗಿ ತೆರವುಗೊಳಿಸಲಾಗುತ್ತದೆ, ಇದು ಸುಗಮ ಮತ್ತು ಹೆಚ್ಚು ಪರಿಣಾಮಕಾರಿ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ