AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ 6 ರೈಲು ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆಗೆ ಒಪ್ಪಿಗೆ

ಹೆಚ್ಚಿನ ರೈಲುಗಳ ಸಂಚಾರಕ್ಕೆ ಅನುಕೂಲ ಆಗಲು ಹಾಗೂ ರೈಲು ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರಿನ ಆರು ಪ್ರಮುಖ ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್​ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಒಟ್ಟು 639.05 ಕಿಮೀ ದೂರಕ್ಕೆ ಅನುಮತಿ ದೊರೆತಿದ್ದು, ಇದಕ್ಕೆ ಸುಮಾರು 874 ಕೋಟಿ ರೂ. ವೆಚ್ಚವಾಗಲಿದೆ.

ಬೆಂಗಳೂರಿನ ಈ 6 ರೈಲು ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆಗೆ ಒಪ್ಪಿಗೆ
ರೈಲು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Feb 12, 2024 | 8:29 AM

Share

ಬೆಂಗಳೂರು, ಫೆಬ್ರವರಿ 12: ಹೆಚ್ಚುತ್ತಿರುವ ಪ್ರಯಾಣಿಕರ ಮತ್ತು ಸರಕು ಸಾಗಾಣೆಯ ದೃಷ್ಟಿಯಿಂದ ಲೈನ್​ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರಿನ (Bengaluru) ಆರು ಪ್ರಮುಖ ರೈಲು (Train) ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ (Automatic Signalling System)​ ವ್ಯವಸ್ಥೆಯನ್ನು ಅಳವಡಿಸುವ ನೈಋತ್ಯ ರೈಲ್ವೆ ಇಲಾಖೆಯ (South Western Railway) ಪ್ರಸ್ತಾವನೆಗೆ ರೈಲ್ವೆ ಮಂಡಳಿ (Indian Railway) ಅನುಮೋದನೆ ನೀಡಿದೆ.

ಸ್ವಯಂಚಾಲಿತ ಸಿಗ್ನಲಿಂಗ್​ ಸಿಸ್ಟಂ ಎಲ್ಲೆಲ್ಲಿ?

ಬೆಂಗಳೂರು ನಗರ-ಯಶವಂತಪುರ-ಯಲಹಂಕ 17.75 ಕಿ.ಮೀ

ಯಶವಂತಪುರ-ಅರಸೀಕೆರೆ ವಿಭಾಗದಲ್ಲಿ 160.65 ಕಿ.ಮೀ

ಲೊಟ್ಟೆಗೊಲ್ಲಹಳ್ಳಿ-ಹೊಸೂರು ವಿಭಾಗದ 63.6 ಕಿ.ಮೀ

ವೈಟ್‌ಫೀಲ್ಡ್-ಜೋಲಾರ್‌ಪೇಟೆ ವಿಭಾಗ 119 ಕಿ.ಮೀ

ಬೈಯ್ಯಪ್ಪನಹಳ್ಳಿ-ಪೆನುಕೊಂಡ ವಿಭಾಗ ಚನ್ನಸಂದ್ರ ಮಾರ್ಗವಾಗಿ 139.8 ಕಿ.ಮೀ

ಬೆಂಗಳೂರು ನಗರ-ಮೈಸೂರು 138.25 ಕಿ.ಮೀ

ಹೆಚ್ಚಿನ ರೈಲುಗಳ ಸಂಚಾರಕ್ಕೆ ಅನುಕೂಲ ಆಗಲು ಹಾಗೂ ರೈಲು ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರಿನ ಆರು ಪ್ರಮುಖ ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್​ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಒಟ್ಟು 639.05 ಕಿಮೀ ದೂರಕ್ಕೆ ಅನುಮತಿ ದೊರೆತಿದ್ದು, ಇದಕ್ಕೆ ಸುಮಾರು 874 ಕೋಟಿ ರೂ. ವೆಚ್ಚವಾಗಲಿದೆ. ನೈರುತ್ಯ ರೈಲ್ವೆ ಇಲಾಖೆ ಪ್ರಸ್ತುತ ಬೆಂಗಳೂರು ವಿಭಾಗದಲ್ಲಿ ಕೆಎಸ್‍ಆರ್ ಬೆಂಗಳೂರು ನಗರ-ವೈಟ್‍ಫೀಲ್ಡ್ ವಿಭಾಗದಲ್ಲಿ ಆಟೋಮೆಟಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ.

ನೈಋತ್ಯ ರೈಲ್ವೆ ಇಲಾಖೆ ಅಧಿಕಾರಿಗಳ ಪ್ರಕಾರ, ಇದು ಥ್ರೋಪುಟ್ ಅನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಚೆನ್ನೈ, ಮೈಸೂರು, ಹುಬ್ಬಳ್ಳಿ ಮತ್ತು ಹೈದರಾಬಾದ್ ಸೇರಿದಂತೆ ಎಲ್ಲ ದಿಕ್ಕುಗಳಲ್ಲಿ ಬೆಂಗಳೂರು ಪ್ರದೇಶಕ್ಕೆ ಮತ್ತು ಅಲ್ಲಿಂದ ಬರುವ ರೈಲುಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಬೆಂಗಳೂರಿಗೆ ಶೀಘ್ರ ಬರಲಿದೆ ಸಬ್ ಅರ್ಬನ್ ರೈಲು, ಅಂತಿಮ ಹಂತದಲ್ಲಿ 2 ಕಾರಿಡಾರ್: ಎಂಬಿ ಪಾಟೀಲ್

ಸ್ವಯಂಚಾಲಿತ ಸಿಗ್ನಲಿಂಗ್ ರೈಲು ಮೂಲಸೌಕರ್ಯವನ್ನು ಆಧುನೀಕರಿಸುವ ಮತ್ತು ಉತ್ತಮಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ಇದು ಹೆಚ್ಚು ಪರಿಣಾಮಕಾರಿ ಮತ್ತು ದೃಢವಾದ ಸಾರಿಗೆ ಜಾಲವನ್ನು ಖಾತ್ರಿಪಡಿಸುತ್ತದೆ. ಸ್ವಯಂಚಾಲಿತ ಸಿಗ್ನಲಿಂಗ್ ಅಳವಡಿಸುವುದರಿಂದ ಹಲವಾರು ಪ್ರಯೋಜನಗಳಿವೆ ಎಂದು ನೈಋತ್ಯ ರೈಲ್ವೆ ಇಲಾಖೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ್ ಕನಮಡಿ ಹೇಳಿದರು.

ನೈಋತ್ಯ ರೈಲ್ವೆ ಇಲಾಖೆ ಅಧಿಕಾರಿಯ ಪ್ರಕಾರ, ಈ ವ್ಯವಸ್ಥೆ ಅಳವಡಿಸುವುದರಿಂದ ರೈಲುಗಳು ತ್ವರಿತವಾಗಿ ಫ್ಲಾಟಫಾರಂನಿಂದ ನಿರ್ಗಮಿಸುತ್ತವೆ ಮತ್ತು ನಿಲ್ದಾಣಕ್ಕೆ ಬರುವ ಸಮಯ ವಿಳಂಬವನ್ನು ಕಡಿಮೆ ಮಾಡುತ್ತದೆ. ಸ್ವಯಂಚಾಲಿತ ಸಿಗ್ನಲಿಂಗ್‌ನ ಅಳವಡಿಸುವುದರಿಂದ ಎಲ್ಲ ಮಾಧರಿಯ ರೈಲುಗಳ ಕಾರ್ಯಾಚರಣೆಯನ್ನು ಹೆಚ್ಚಿಸುತ್ತದೆ.

ಸುರಕ್ಷತಾ ಮಾನದಂಡಗಳನ್ನು ಅನುಸರಿಸುತ್ತಾ, ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಇದು ಸಹಾಯ ಮಾಡುತ್ತದೆ. ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯು ರೈಲುಗಳ ಸರಾಸರಿ ವೇಗವನ್ನು ಹೆಚ್ಚಿಸುತ್ತದೆ ಏಕೆಂದರೆ ಬ್ಲಾಕ್ ವಿಭಾಗಗಳನ್ನು ವೇಗವಾಗಿ ತೆರವುಗೊಳಿಸಲಾಗುತ್ತದೆ, ಇದು ಸುಗಮ ಮತ್ತು ಹೆಚ್ಚು ಪರಿಣಾಮಕಾರಿ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ