AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸದನದಲ್ಲಿ ಅಗತ್ಯವಿರುವಷ್ಟು ಉತ್ತರ ಕೊಡಲಾಗಿದೆ. ಇನ್ನೂ ಹೆಚ್ಚಿನ ಉತ್ತರ ನಾವು ಕೊಡಲು ಶಕ್ತವಾಗಿದ್ದೇವೆ. ಕೋರ್ಟ್ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿ. ಅದರ ಅರಿವು ನಮಗಿದೆ. ಎಲ್ಲರೂ ಆದೇಶಕ್ಕೆ ಬದ್ಧ ಆಗಿರಬೇಕು ಎಂದು ಜ್ಞಾನೇಂದ್ರ ಹೇಳಿದ್ದಾರೆ.

ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
TV9 Web
| Edited By: |

Updated on:Feb 15, 2022 | 4:18 PM

Share

ಬೆಂಗಳೂರು: ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ (ಫೆಬ್ರವರಿ 15) ಹೇಳಿಕೆ ನೀಡಿದ್ದಾರೆ. ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ಸರ್ಕಾರದ ಕರ್ತವ್ಯ ಮತ್ತು ಬದ್ಧತೆ. ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ, ಸಮಸ್ಯೆ ಆದ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಅದನ್ನು ನಾವು ಪರಿಶೀಲನೆ ಮಾಡ್ತಿದ್ದೇವೆ ಎಂದು ಅರಗ ಜ್ಙಾನೇಂದ್ರ ತಿಳಿಸಿದ್ದಾರೆ.

ಹಿಜಾಬ್ ವಿವಾದದ ಬಗ್ಗೆ ಸದನದಲ್ಲಿ ಉತ್ತರ ಕೊಡಲಾಗುವುದು. ನಮಗೂ ಸಮವಸ್ತ್ರ ಪಾಲನೆ ವಿಚಾರದಲ್ಲಿ ಸ್ಪಷ್ಟತೆ ತರುವ ಸದುದ್ದೇಶ ಇದೆ. ಇವತ್ತು ಸದನದಲ್ಲಿ ಈ ವಿಚಾರ ಪ್ರಸ್ತಾಪ ಆಯ್ತು. ಅಗತ್ಯವಿರುವಷ್ಟು ಉತ್ತರ ಕೊಡಲಾಗಿದೆ. ಇನ್ನೂ ಹೆಚ್ಚಿನ ಉತ್ತರ ನಾವು ಕೊಡಲು ಶಕ್ತವಾಗಿದ್ದೇವೆ. ಕೋರ್ಟ್ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿ. ಅದರ ಅರಿವು ನಮಗಿದೆ. ಎಲ್ಲರೂ ಆದೇಶಕ್ಕೆ ಬದ್ಧ ಆಗಿರಬೇಕು ಎಂದು ಜ್ಞಾನೇಂದ್ರ ಹೇಳಿದ್ದಾರೆ.

ಕಾಶ್ಮೀರ ವಿದ್ಯಾರ್ಥಿಗಳನ್ನ ಪ್ರತ್ಯೇಕವಾಗಿ ಕಾಣುತ್ತಿಲ್ಲ: ಕಮಲ್ ಪಂತ್ ಸ್ಪಷ್ಟನೆ

ಮುನ್ನೆಚ್ಚರಿಕಾ ಕ್ರಮವಾಗಿ ಮಾಹಿತಿ ಕೇಳಿರುವುದಕ್ಕೆ ಕಾಶ್ಮೀರಿ ವಿದ್ಯಾರ್ಥಿಗಳ ಅಸಮಾಧಾನ ಹಿನ್ನೆಲೆ ಕಾಶ್ಮೀರ ವಿದ್ಯಾರ್ಥಿಗಳನ್ನ ಪ್ರತ್ಯೇಕವಾಗಿ ಕಾಣುತ್ತಿಲ್ಲ. ಭೌಗೋಳಿಕ ಹಿನ್ನೆಲೆಯನ್ನ ಲೆಕ್ಕಿಸದೆ ಪೊಲೀಸರು ವಿದ್ಯಾರ್ಥಿಗಳ ಭದ್ರತೆಗಿರಲಿದ್ದೇವೆ. ಕಾಶ್ಮೀರಿ ವಿದ್ಯಾರ್ಥಿಗಳ ಭದ್ರತೆಗೆ ನಾವು ಬದ್ಧ ಎಂದು ಟ್ವೀಟ್ ಮೂಲಕ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ ಹಿನ್ನೆಲೆ: ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳ ಬಳಿ ಮಾಹಿತಿ ಕೇಳಿದ ಆಂತರಿಕ ಭದ್ರತಾ ದಳ

ದಾವಣಗೆರೆ ಜಿಲ್ಲೆಯಲ್ಲಿ ಶನಿವಾರದವರೆಗೆ ಸೆಕ್ಷನ್ 144 ಮುಂದುವರಿಕೆ

ದಾವಣಗೆರೆ ಜಿಲ್ಲೆಯಲ್ಲಿ ಶನಿವಾರದವರೆಗೆ ಸೆಕ್ಷನ್ 144 ಮುಂದುವರಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ನೀಡಿದ್ದಾರೆ. ನಾಳೆಯಿಂದ ಪಿಯು, ಪದವಿ ಕಾಲೇಜುಗಳು ಆರಂಭ ಹಿನ್ನೆಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ ಹೊರತುಪಡಿಸಿ ಬೇರೆಯವರಿಗೆ ಕಾಲೇಜಿನೊಳಗೆ ಪ್ರವೇಶ ಇರಲ್ಲ ಎಂದು ತಿಳಿಸಲಾಗಿದೆ.

ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಮೌಲಾನಾ ಆಜಾದ್ ಪ್ರೌಡ ಶಾಲೆಯಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದ ಘಟನೆ ನಡೆದಿದೆ. ಇದೇ ವಿಚಾರವಾಗಿ ಪಾಲಕರು ಮತ್ತು ಶಿಕ್ಷಕರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ. ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಶಿಕ್ಷಕರು ಹೊರಗೆ ನಿಲ್ಲಿಸಿದ್ದಾರೆ. ಹಿಜಾಬ್ ತಗೆದ್ರೆ ಮಾತ್ರ ಶಾಲೆಯೊಳಗೆ ಪ್ರವೇಶ ನೀಡೋದಾಗಿ ಶಿಕ್ಷಕರು ಹೇಳಿದ್ದರು. ಶಿಕ್ಷಕರ ವಿರುದ್ಧ ವಿದ್ಯಾರ್ಥಿನಿಯರು ಪಾಲಕರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ಮಧ್ಯಪ್ರವೇಶದಿಂದ ವಾತಾವರಣ ತಿಳಿಯಾಗಿದೆ. ವಿದ್ಯಾರ್ಥಿಗಳ ಮನವೊಲಿಸಿ ಶಿಕ್ಷಕರು ಹಿಜಾಬ್ ತಗೆಸಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಮೇಲಿರುವ ಕಾಳಜಿಯಿಂದ ಹಾಗೆ ಹೇಳಿದ್ದು; ಹಿಜಾಬ್ ಹೇಳಿಕೆ ಕುರಿತು ಕ್ಷಮೆ ಕೇಳಿದ ಜಮೀರ್ ಅಹ್ಮದ್

Published On - 4:15 pm, Tue, 15 February 22

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ