AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಳುವಾಗಿದ್ದ 40 ಕೆ.ಜಿ. ಚಿನ್ನಾಭರಣವನ್ನು ಮಾಲೀಕರಿಗೆ ವಾಪಸ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ನನ್ನ ಪೊಲೀಸ್ ಇಲಾಖೆ ನನ್ನ ಹೆಮ್ಮೆ. ಪೊಲೀಸರ ಕೆಲಸ ನೋಡಿ ನನ್ನ ಹೃದಯ ತುಂಬಿ ಬಂದಿದೆ. ಕಾರಣ ಅಷ್ಟೊಂದು ಕೇಸ್​ಗಳನ್ನು ಭೇದಿಸಿದ್ದಾರೆ. ಸೈಬರ್ ಕ್ರೈಂ ಸ್ಟೇಷನ್​ಗೂ ನಾನು ಭೇಟಿ ಕೊಟ್ಟಿದ್ದೇನೆ.

ಬೆಂಗಳೂರಿನಲ್ಲಿ ಕಳುವಾಗಿದ್ದ 40 ಕೆ.ಜಿ. ಚಿನ್ನಾಭರಣವನ್ನು ಮಾಲೀಕರಿಗೆ ವಾಪಸ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಚಿನ್ನಾಭರಣವನ್ನು ಮಾಲೀಕರಿಗೆ ವಾಪಸ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on: Aug 18, 2021 | 11:25 AM

Share

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕಳುವಾಗಿದ್ದ 40 ಕೆ.ಜಿ.ಯಷ್ಟು ಚಿನ್ನಾಭರಣವನ್ನು ಮಾಲೀಕರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಾಪಸ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಸಾವಿರಾರು ಕೆ.ಜಿ ಗಾಂಜಾ, ಡ್ರಗ್ಸ್​ನ ನಗರ ಪೊಲೀಸರು ಪ್ರದರ್ಶನ ಮಾಡಿದರು. ಜೊತೆಗೆ ರಾಬರಿ, ಕೊಲೆ, ಕಳ್ಳತನ ಕೇಸ್​ನಲ್ಲಿ ವಶಪಡಿಸಿಕೊಂಡಿದ್ದ ಮಾಲುಗಳು ಮತ್ತು ಕೋಟ್ಯಂತರ ಬೆಲೆಯ ಅಂಬರ್ ಗ್ರೀಸ್​ನ ಪ್ರದರ್ಶನ ಮಾಡಿದರು. ಈ ಕಾರ್ಯಕ್ರಮದಲ್ಲಿ ಚಿನ್ನಾಭರಣವನ್ನು ಮಾಲೀಕರಿಗೆ ಗೃಹ ಸಚಿವರು ವಾಪಸ್ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಆರಗ ಜ್ಞಾನೇಂದ್ರ, ನನ್ನ ಪೊಲೀಸ್ ಇಲಾಖೆ ನನ್ನ ಹೆಮ್ಮೆ. ಪೊಲೀಸರ ಕೆಲಸ ನೋಡಿ ನನ್ನ ಹೃದಯ ತುಂಬಿ ಬಂದಿದೆ. ಕಾರಣ ಅಷ್ಟೊಂದು ಕೇಸ್​ಗಳನ್ನು ಭೇದಿಸಿದ್ದಾರೆ. ಸೈಬರ್ ಕ್ರೈಂ ಸ್ಟೇಷನ್​ಗೂ ನಾನು ಭೇಟಿ ಕೊಟ್ಟಿದ್ದೇನೆ. ಸೈಬರ್ ಕ್ರೈಂ ಪ್ರಕರಣನ್ನು ಭೇದಿಸುವುದು ನೋಡಿದರೆ ಖುಷಿ ಆನಿಸುತ್ತೆ. ಅಂತರಾಷ್ಟ್ರೀಯ ಪೊಲೀಸರು ಸಹ ಬಂದು ತರಬೇತಿ ಪಡೆಯುತ್ತಿದ್ದಾರೆ. 32 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಇವತ್ತು ಪೊಲೀಸರು ಪ್ರದರ್ಶನ ಮಾಡಿದ್ದಾರೆ. ಕೇಸ್ ಭೇದಿಸುವುದನ್ನು ಸಿನಿಮಾಗಳಲ್ಲಿ ನೋಡುತ್ತಿದ್ದೆವು. ಆದರೆ ಈಗ ಕಣ್ಣ ಮುಂದೆ ನೋಡಿದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಬರ್ ಗ್ರೀಸ್ ಅನ್ನೋದು ನನಗೆ ಗೊತ್ತೇ ಇರಲಿಲ್ಲ. ಅದು ಒಂದು ಕೆ.ಜಿಗೆ ಒಂದು ಕೋಟಿ ಅಂತೆ. ಅದನ್ನು ಕೂಡ ಈಗ ರಿಕವರಿ ಮಾಡಿದ್ದಾರೆ. ಕಳ್ಳತನದಿಂದ ಆ ಸಂಪತ್ತು ಬೇರೆಯವರ ಪಾಲಾಗುತಿತ್ತು. ಅದನ್ನ ಹಿಡಿದು ದೇಶದ ಖಜಾನೆ ತುಂಬುವ ಕೆಲಸ ಮಾಡಿದ್ದಾರೆ. ಕೋಟ್ಯಂತರ ಬೆಲೆ ಬಾಳುವ ಮಾದಕ ವಸ್ತು ಪತ್ತೆ ಹಚ್ಚಿದ್ದಾರೆ. ನೂರಾರು ಕೋಟಿ ವೆಚ್ಚದಲ್ಲಿ ಡ್ರಗ್ಸ್ ಮಾಫಿಯಾ ನಡಿಯುತ್ತಿದೆ. ಡ್ರಗ್ಸ್ ಯುವ ಜನಾಂಗದ ಜೀವನ ಹಾಳು ಮಾಡುತ್ತಿದೆ. ಇದನ್ನ ತಡೆಯುವಲ್ಲಿ ಪೊಲೀಸರ ಕಾರ್ಯ ಮೆಚ್ಚುವಂತದ್ದು ಎಂದು ತಿಳಿಸಿದ ಗೃಹ ಸಚಿವರು, ಪೊಲೀಸ್ ಇಲಾಖೆಗೆ ಕೋಟಿ ಕೋಟಿ ಸೆಲ್ಯೂಟ್ ಎಂದರು.

ಪೊಲೀಸರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಸಮಾಜ ಹಾಳಾಗುತ್ತದೆ. ಅಪ್ರಾಮಾಣಿಕ ಪೊಲೀಸರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಕೊಲೆ ಪ್ರಕರಣಗಳಲ್ಲಿ ಕೆಲ ಪೊಲೀಸರು ಭಾಗಿಯಾಗುತ್ತಾರೆ. ಅಂತಹ ಪೊಲೀಸರನ್ನು ನೋಡಿದರೆ ಅವಮಾನವಾಗುತ್ತದೆ. ಪ್ರಾಮಾಣಿಕ ಪೊಲೀಸರ ಬೆನ್ನು ತಟ್ಟುವ ಕೆಲಸ ಮಾಡುತ್ತೇವೆ. ಅಪ್ರಾಮಾಣಿಕ ಪೊಲೀಸರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಅಪರಾಧಿಗಳ ಪರ ನಿಲ್ಲುವಂತಹ ಪೊಲೀಸರ ಪಟ್ಟಿ ಮಾಡಿ ಎಂದು ಆರಗ ಜ್ಞಾನೇಂದ್ರ ಸೂಚನೆ ನೀಡಿದರು.

ಇದನ್ನೂ ಓದಿ

ದೆಹಲಿ ರೇಪ್​ ಕೇಸ್​; ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಗೆ ಫೇಸ್​​ಬುಕ್​ನಿಂದ ನೋಟಿಸ್​​

ನವರಂಗಿ ಆಟ, ಮೈ ಮಾಟದಿಂದ ಹನಿಟ್ರ್ಯಾಪ್ ಮಾಡುತ್ತಿದ್ದ ಕಿರಾತಕರ ಗ್ಯಾಂಗ್ ಅರೆಸ್ಟ್

(Araga Jnanendra returned 40 kg of theft jewelery to the owner in Bengaluru)

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?