AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಳುವಾಗಿದ್ದ 40 ಕೆ.ಜಿ. ಚಿನ್ನಾಭರಣವನ್ನು ಮಾಲೀಕರಿಗೆ ವಾಪಸ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ನನ್ನ ಪೊಲೀಸ್ ಇಲಾಖೆ ನನ್ನ ಹೆಮ್ಮೆ. ಪೊಲೀಸರ ಕೆಲಸ ನೋಡಿ ನನ್ನ ಹೃದಯ ತುಂಬಿ ಬಂದಿದೆ. ಕಾರಣ ಅಷ್ಟೊಂದು ಕೇಸ್​ಗಳನ್ನು ಭೇದಿಸಿದ್ದಾರೆ. ಸೈಬರ್ ಕ್ರೈಂ ಸ್ಟೇಷನ್​ಗೂ ನಾನು ಭೇಟಿ ಕೊಟ್ಟಿದ್ದೇನೆ.

ಬೆಂಗಳೂರಿನಲ್ಲಿ ಕಳುವಾಗಿದ್ದ 40 ಕೆ.ಜಿ. ಚಿನ್ನಾಭರಣವನ್ನು ಮಾಲೀಕರಿಗೆ ವಾಪಸ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಚಿನ್ನಾಭರಣವನ್ನು ಮಾಲೀಕರಿಗೆ ವಾಪಸ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Updated By: sandhya thejappa|

Updated on: Aug 18, 2021 | 11:25 AM

Share

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕಳುವಾಗಿದ್ದ 40 ಕೆ.ಜಿ.ಯಷ್ಟು ಚಿನ್ನಾಭರಣವನ್ನು ಮಾಲೀಕರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಾಪಸ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಸಾವಿರಾರು ಕೆ.ಜಿ ಗಾಂಜಾ, ಡ್ರಗ್ಸ್​ನ ನಗರ ಪೊಲೀಸರು ಪ್ರದರ್ಶನ ಮಾಡಿದರು. ಜೊತೆಗೆ ರಾಬರಿ, ಕೊಲೆ, ಕಳ್ಳತನ ಕೇಸ್​ನಲ್ಲಿ ವಶಪಡಿಸಿಕೊಂಡಿದ್ದ ಮಾಲುಗಳು ಮತ್ತು ಕೋಟ್ಯಂತರ ಬೆಲೆಯ ಅಂಬರ್ ಗ್ರೀಸ್​ನ ಪ್ರದರ್ಶನ ಮಾಡಿದರು. ಈ ಕಾರ್ಯಕ್ರಮದಲ್ಲಿ ಚಿನ್ನಾಭರಣವನ್ನು ಮಾಲೀಕರಿಗೆ ಗೃಹ ಸಚಿವರು ವಾಪಸ್ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಆರಗ ಜ್ಞಾನೇಂದ್ರ, ನನ್ನ ಪೊಲೀಸ್ ಇಲಾಖೆ ನನ್ನ ಹೆಮ್ಮೆ. ಪೊಲೀಸರ ಕೆಲಸ ನೋಡಿ ನನ್ನ ಹೃದಯ ತುಂಬಿ ಬಂದಿದೆ. ಕಾರಣ ಅಷ್ಟೊಂದು ಕೇಸ್​ಗಳನ್ನು ಭೇದಿಸಿದ್ದಾರೆ. ಸೈಬರ್ ಕ್ರೈಂ ಸ್ಟೇಷನ್​ಗೂ ನಾನು ಭೇಟಿ ಕೊಟ್ಟಿದ್ದೇನೆ. ಸೈಬರ್ ಕ್ರೈಂ ಪ್ರಕರಣನ್ನು ಭೇದಿಸುವುದು ನೋಡಿದರೆ ಖುಷಿ ಆನಿಸುತ್ತೆ. ಅಂತರಾಷ್ಟ್ರೀಯ ಪೊಲೀಸರು ಸಹ ಬಂದು ತರಬೇತಿ ಪಡೆಯುತ್ತಿದ್ದಾರೆ. 32 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಇವತ್ತು ಪೊಲೀಸರು ಪ್ರದರ್ಶನ ಮಾಡಿದ್ದಾರೆ. ಕೇಸ್ ಭೇದಿಸುವುದನ್ನು ಸಿನಿಮಾಗಳಲ್ಲಿ ನೋಡುತ್ತಿದ್ದೆವು. ಆದರೆ ಈಗ ಕಣ್ಣ ಮುಂದೆ ನೋಡಿದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಬರ್ ಗ್ರೀಸ್ ಅನ್ನೋದು ನನಗೆ ಗೊತ್ತೇ ಇರಲಿಲ್ಲ. ಅದು ಒಂದು ಕೆ.ಜಿಗೆ ಒಂದು ಕೋಟಿ ಅಂತೆ. ಅದನ್ನು ಕೂಡ ಈಗ ರಿಕವರಿ ಮಾಡಿದ್ದಾರೆ. ಕಳ್ಳತನದಿಂದ ಆ ಸಂಪತ್ತು ಬೇರೆಯವರ ಪಾಲಾಗುತಿತ್ತು. ಅದನ್ನ ಹಿಡಿದು ದೇಶದ ಖಜಾನೆ ತುಂಬುವ ಕೆಲಸ ಮಾಡಿದ್ದಾರೆ. ಕೋಟ್ಯಂತರ ಬೆಲೆ ಬಾಳುವ ಮಾದಕ ವಸ್ತು ಪತ್ತೆ ಹಚ್ಚಿದ್ದಾರೆ. ನೂರಾರು ಕೋಟಿ ವೆಚ್ಚದಲ್ಲಿ ಡ್ರಗ್ಸ್ ಮಾಫಿಯಾ ನಡಿಯುತ್ತಿದೆ. ಡ್ರಗ್ಸ್ ಯುವ ಜನಾಂಗದ ಜೀವನ ಹಾಳು ಮಾಡುತ್ತಿದೆ. ಇದನ್ನ ತಡೆಯುವಲ್ಲಿ ಪೊಲೀಸರ ಕಾರ್ಯ ಮೆಚ್ಚುವಂತದ್ದು ಎಂದು ತಿಳಿಸಿದ ಗೃಹ ಸಚಿವರು, ಪೊಲೀಸ್ ಇಲಾಖೆಗೆ ಕೋಟಿ ಕೋಟಿ ಸೆಲ್ಯೂಟ್ ಎಂದರು.

ಪೊಲೀಸರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಸಮಾಜ ಹಾಳಾಗುತ್ತದೆ. ಅಪ್ರಾಮಾಣಿಕ ಪೊಲೀಸರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಕೊಲೆ ಪ್ರಕರಣಗಳಲ್ಲಿ ಕೆಲ ಪೊಲೀಸರು ಭಾಗಿಯಾಗುತ್ತಾರೆ. ಅಂತಹ ಪೊಲೀಸರನ್ನು ನೋಡಿದರೆ ಅವಮಾನವಾಗುತ್ತದೆ. ಪ್ರಾಮಾಣಿಕ ಪೊಲೀಸರ ಬೆನ್ನು ತಟ್ಟುವ ಕೆಲಸ ಮಾಡುತ್ತೇವೆ. ಅಪ್ರಾಮಾಣಿಕ ಪೊಲೀಸರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಅಪರಾಧಿಗಳ ಪರ ನಿಲ್ಲುವಂತಹ ಪೊಲೀಸರ ಪಟ್ಟಿ ಮಾಡಿ ಎಂದು ಆರಗ ಜ್ಞಾನೇಂದ್ರ ಸೂಚನೆ ನೀಡಿದರು.

ಇದನ್ನೂ ಓದಿ

ದೆಹಲಿ ರೇಪ್​ ಕೇಸ್​; ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಗೆ ಫೇಸ್​​ಬುಕ್​ನಿಂದ ನೋಟಿಸ್​​

ನವರಂಗಿ ಆಟ, ಮೈ ಮಾಟದಿಂದ ಹನಿಟ್ರ್ಯಾಪ್ ಮಾಡುತ್ತಿದ್ದ ಕಿರಾತಕರ ಗ್ಯಾಂಗ್ ಅರೆಸ್ಟ್

(Araga Jnanendra returned 40 kg of theft jewelery to the owner in Bengaluru)

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!