AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮಯಾತ್ರಿ ಬಗ್ಗೆ ಆಟೋ ಚಾಲಕರ ಒಕ್ಕೂಟ ಅಸಮಾಧಾನ: ಕಂಪನಿ ಹೇಳುವುದೇನು?

ನಗರದಲ್ಲಿ 32,000 ಚಾಲಕರನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಚಾಲಕರ ಒಕ್ಕೂಟವನ್ನು ದೂರವಿರಲು ಪ್ರಯತ್ನಿಸಿದ ನಂತರ ಆ್ಯಪ್​ ಸಂಸ್ಥೆಯು ಸುದ್ದಿಯಲ್ಲಿದೆ.

ನಮ್ಮಯಾತ್ರಿ ಬಗ್ಗೆ ಆಟೋ ಚಾಲಕರ ಒಕ್ಕೂಟ ಅಸಮಾಧಾನ: ಕಂಪನಿ ಹೇಳುವುದೇನು?
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on: Dec 14, 2023 | 10:48 AM

Share

ಬೆಂಗಳೂರು, ಡಿಸೆಂಬರ್ 14: ಬೆಂಗಳೂರಿನ ಪ್ರಮುಖ ಆಟೋ ರಿಕ್ಷಾ ಯೂನಿಯನ್‌ಗಳಲ್ಲಿ ಒಂದಾದ ಆಟೋ ರಿಕ್ಷಾ ಚಾಲಕರ ಒಕ್ಕೂಟವು (ARDU) ‘ನಮ್ಮ ಯಾತ್ರಿ’ ಆ್ಯಪ್​​​ನಿಂದ ನಿರ್ಗಮಿಸಿದೆ ಎಂದು ವರದಿಯಾಗಿರುವ ಬೆನ್ನಲ್ಲೇ, ಆ್ಯಪ್​ ಬಗ್ಗೆ ಒಕ್ಕೂಟ ಟೀಕೆ ಮಾಡಿದೆ. ವಿಶೇಷವೆಂದರೆ, ಕಳೆದ ವರ್ಷ ನಮ್ಮ ಯಾತ್ರಿ ಆ್ಯಪ್ ಬಿಡುಗಡೆ ಮಾಡುವಲ್ಲಿ ಚಾಲಕರ ಒಕ್ಕೂಟ ಪ್ರಮುಖ ಪಾತ್ರ ವಹಿಸಿತ್ತು.

ನಮ್ಮ ಯಾತ್ರಿ ಆ್ಯಪ್ ಅಭಿವೃದ್ಧಿಪಡಿಸುವುದನ್ನು ಚಾಲಕರ ಒಕ್ಕೂಟ ಸಂಪೂರ್ಣವಾಗಿ ಬೆಂಬಲಿಸಿತ್ತು. ಇದು ಒಕ್ಕೂಟದ ನಾಯಕರಾದ ರುದ್ರಮೂರ್ತಿ ಮತ್ತು ಪಟ್ಟಾಭಿರಾಮ ಅವರು ಬೆಂಗಳೂರಿನ ಚಾಲಕರು ಮತ್ತು ಪ್ರಯಾಣಿಕರಿಗಾಗಿ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್ ಆಗಿದೆ. ಸಮುದಾಯದ ಒಗ್ಗಟ್ಟು ನಮ್ಮ ಯಾತ್ರಿಯ ಯಶಸ್ಸಿಗೆ ಕಾರಣ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ ರುದ್ರಮೂರ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಪೊರೇಟ್ ಕಂಪನಿಗಳು ಜನಸಾಮಾನ್ಯರಿಂದ ಮಾತ್ರ ಯಶಸ್ವಿಯಾಗುತ್ತವೆ ಎಂದು ರುದ್ರಮೂರ್ತಿ ಹೇಳಿದ್ದು, ನಮ್ಮ ಯಾತ್ರಿ ಸಿಇಒ ವಿಮಲ್ ಕುಮಾರ್ ಅವರನ್ನು ಟೀಕಿಸಿದ್ದಾರೆ.

ನಗರದಲ್ಲಿ 32,000 ಚಾಲಕರನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಚಾಲಕರ ಒಕ್ಕೂಟವನ್ನು ದೂರವಿರಲು ಪ್ರಯತ್ನಿಸಿದ ನಂತರ ಆ್ಯಪ್​ ಸಂಸ್ಥೆಯು ಸುದ್ದಿಯಲ್ಲಿದೆ. ನಮ್ಮ ಯಾತ್ರಿಯನ್ನು ನವೆಂಬರ್ 2022 ರಲ್ಲಿ ಚಾಲಕರ ಸ್ವಂತ ಅಪ್ಲಿಕೇಶನ್ ಆಗಿ ಪ್ರಾರಂಭಿಸಲಾಯಿತು ಮತ್ತು ಬೆಂಗಳೂರಿನಲ್ಲಿ ಅಪ್ಲಿಕೇಶನ್ ಆಧಾರಿತ ಆಟೋ ರೈಡ್‌ಗಳಲ್ಲಿ ಇದು ಶೇ 25 ಮಾರುಕಟ್ಟೆ ಪಾಲನ್ನು ಹೊಂದಿದೆ.

ನಮ್ಮ ಯಾತ್ರಿಯು ಫಿನ್‌ಟೆಕ್ ಕಂಪನಿ ಜುಸ್ಪೇಯ ಒಡೆತನದಲ್ಲಿದೆ. ಇದು ಮೂಲತಃ ಸಾಫ್ಟ್‌ವೇರ್‌ನಲ್ಲಿ ಸೇವೆ (Saas) ಮಾದರಿಯ ಅಡಿಯಲ್ಲಿ ನಕ್ಷೆ ಮತ್ತು ಕ್ಲೌಡ್ ಸೇವೆಗಳನ್ನು ಒದಗಿಸಿದೆ.

ಇದನ್ನೂ ಓದಿ: ನಮ್ಮ ಯಾತ್ರಿ ಆ್ಯಪ್​ ಮೂಲಕ ಕೋಟಿ ಕೋಟಿ ಹಣ ಗಳಿಸಿದ ಆಟೋರಿಕ್ಷಾ ಚಾಲಕರು

‘ನಮ್ಮ ಯಾತ್ರಿಯು ಒಂದು ಲಕ್ಷಕ್ಕೂ ಹೆಚ್ಚು ಚಾಲಕರೊಂದಿಗೆ ಸಹಯೋಗ ಹೊಂದಿದೆ. ಅವರಲ್ಲಿ ಹೆಚ್ಚಿನವರು ಯಾವುದೇ ಒಕ್ಕೂಟದೊಂದಿಗೆ ಸಂಬಂಧ ಹೊಂದಿಲ್ಲ. ನಾವು ವೈಯಕ್ತಿಕ ಒಕ್ಕೂಟಗಳ ಹಿತಾಸಕ್ತಿಗಳಿಗಿಂತ ಸಮುದಾಯದ ಕಲ್ಯಾಣಕ್ಕೆ ಆದ್ಯತೆ ನೀಡುತ್ತೇವೆ’ ಎಂದು ಕಂಪನಿ ಹೇಳಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು