AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ದೇಶ ತೊರೆಯಲು ಮುಂದಾಗಿದ್ದ ಆರೋಪಿ ಆರೀಫ್: ಎನ್ಐಎ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಶಂಕಿತ ಉಗ್ರ ಮೊಹಮ್ಮದ್ ಆರೀಫ್ ಬಂಧನ ಕೇಸ್​ಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಎನ್ಐಎ ಅಧಿಕಾರಿಗಳು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಕುಟುಂಬ ಸಮೇತ ದೇಶ ತೊರೆಯಲು ಆರೋಪಿ ಆರೀಫ್ ಮುಂದಾಗಿದ್ದ ಎಂಬ ಸ್ಫೋಟಕ ಮಾಹಿತಿ ಎನ್ಐಎ ಅಧಿಕಾರಿಗಳ ತನಿಖೆ ವೇಳೆ ಬಹಿರಂಗವಾಗಿದೆ.

ಕುಟುಂಬ ಸಮೇತ ದೇಶ ತೊರೆಯಲು ಮುಂದಾಗಿದ್ದ ಆರೋಪಿ ಆರೀಫ್: ಎನ್ಐಎ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ
ಶಂಕಿತ ಉಗ್ರ ಮೊಹಮ್ಮದ್ ಆರೀಫ್
Shivaprasad B
| Edited By: |

Updated on: Oct 16, 2023 | 9:46 PM

Share

ಬೆಂಗಳೂರು, ಅಕ್ಟೋಬರ್​​ 16: ಶಂಕಿತ ಉಗ್ರ ಮೊಹಮ್ಮದ್ ಆರೀಫ್ ಬಂಧನ ಕೇಸ್​ಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಎನ್ಐಎ ಅಧಿಕಾರಿಗಳು ಚಾರ್ಜ್​ಶೀಟ್ (Suspected Terrorists) ಸಲ್ಲಿಸಿದ್ದಾರೆ. ಕುಟುಂಬ ಸಮೇತ ದೇಶ ತೊರೆಯಲು ಆರೋಪಿ ಆರೀಫ್ ಮುಂದಾಗಿದ್ದ ಎಂಬ ಸ್ಫೋಟಕ ಮಾಹಿತಿ ಎನ್ಐಎ ಅಧಿಕಾರಿಗಳ ತನಿಖೆ ವೇಳೆ ಬಹಿರಂಗವಾಗಿದೆ. ಇರಾನ್ ಗಡಿ ಮೂಲಕ ಅಕ್ರಮವಾಗಿ ಅಫ್ಘಾನಿಸ್ತಾನಕ್ಕೆ ಎಂಟ್ರಿಯಾಗಲು ಆರೀಫ್ ಸಂಚು ರೂಪಿಸಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ತಮ್ಮ ಇಡೀ ಕುಟುಂಬಕ್ಕೆ ಇರಾನ್ ವೀಸಾಕ್ಕೆ ಅರ್ಜಿ ಸಲ್ಲಿಸಿದ್ದ.

ಇರಾನ್​ಗೆ ತೆರಳಲು 4 ವಿಮಾನ ಟಿಕೆಟ್ ಬುಕ್ ಮಾಡಿದ್ದ ಆರೋಪಿ, ಅಲ್ಲದೇ ಮರಳಿ ಭಾರತಕ್ಕೆ ಬರುವಂತೆ ತೋರಿಸಲು ಮೆಗಾ ಪ್ಲ್ಯಾನ್​ ಕೂಡ ಸಿದ್ದಪಡಿಸಿದ್ದ. ಭಾರತಕ್ಕೆ ಬರುವ 4 ಡಮ್ಮಿ ರಿಟರ್ನ್ ಫ್ಲೈಟ್ ಬುಕ್ ಮಾಡಿದ್ದ. ಇರಾನ್​​ನ ಮಶಾದ್​ನಲ್ಲಿನ ಹೋಟೆಲ್​ನಲ್ಲಿ ವಾಸ್ತವ್ಯಕ್ಕೆ ತಯಾರಿ ಮಾಡಲಾಗಿತ್ತು. ಇದೇ ವೇಳೆ ಮತ್ತೊಬ್ಬ ಉಗ್ರ ಹಮ್ರಾಜ್ ಶೇಕ್ ಕೃತ್ಯ ಬಯಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ: ಐವರನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲಿರುವ ಎನ್ಐಎ ಅಧಿಕಾರಿಗಳು

ಭಾರತದಲ್ಲಿ ಇಸ್ಲಾಮಿಕ್ ಆಡಳಿತ ಸ್ಥಾಪಿಸಲು ಉದ್ದೇಶಿಸಿದ್ದರು. ಟಿಟಿಪಿ ಸಿದ್ಧಾಂತವನ್ನು ಪ್ರಚಾರ ಮಾಡಿ ಯುವಕರ ನೇಮಕಾತಿ ಮಾಡಲಾಗುತ್ತಿತ್ತು. ಟಿಟಿಪಿ ಸಂಚು ಮುಂದುವರೆಸಲು ಪಾಕಿಸ್ತಾನಕ್ಕೆ ಹಣ ವರ್ಗಾವಣೆ ಮಾಡಿದ್ದ. ಆ ಮೂಲಕ ವಿಧ್ವಂಸಕ ಕೃತ್ಯಗಳನ್ನ ಎಸಗಿ ಜಿಹಾದ್ ಸ್ಥಾಪಿಸಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಎನ್ಐಎ ಟೀಂ ತನಿಖೆ ವೇಳೆ ಇಬ್ಬರು ಉಗ್ರರ ಸಂಚು ಬಯಲಾಗಿದೆ.

2023ರ ಫೆಬ್ರವರಿಯಲ್ಲಿ ಬೆಂಗಳೂರಿನ ಥಣಿಸಂದ್ರದಲ್ಲಿ ಎನ್ಐಎ ಹಾಗೂ ಐಎಸ್​​ಡಿ ಆರೀಫ್​ನನ್ನು ಬಂಧಿಸಿತ್ತು. ಆರೀಫ್ ಜೊತೆಗೆ ಥಾಣೆಯಲ್ಲಿ ಮತ್ತೊಬ್ಬ ಉಗ್ರ ಹಮ್ರಾಜ್ ವರ್ಷಿದ್ ಶೇಖ್ ಎಂಬಾತನನ್ನು ಎನ್ಐಎ ತಂಡ ಬಂಧಿಸಿತ್ತು.

ಇದನ್ನೂ ಓದಿ: ಬೆಂಗಳೂರಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣ: ನಜಿರ್​​ಗೆ ಹಣ ತಲುಪಿಸುತ್ತಿದ್ದವ ಜನರಲ್ ಸ್ಟೋರ್ ಮಾಲೀಕ‌‌ !

ನಿಷೇಧಿತ ತೆಹ್ರೀಕ್ ಎ ತಾಲಿಬಾನ್ ಪಾಕಿಸ್ತಾನ್ ಸಂಘಟನೆ ಜೊತೆ ಆರೋಪಿಗಳ ನಂಟು ಹೊಂದಿದ್ದರು. ನಿಷೇಧಿತ ಟಿಟಿಪಿ ಸಂಘಟನೆ ಚಟುವಟಿಕೆ ಮುಂದುವರಿಸಲು ಇಬ್ಬರು ಉಗ್ರರು ಯೋಜನೆ ರೂಪಿಸಿದ್ದರು. ಸಂಘಟನೆಗೆ ಹಣ ಸಂಗ್ರಹಿಸಲು ಹಾಗೂ ಯುವಕರನ್ನ ಸೆಳೆಯಲು ಯತ್ನಿಸಿದ್ದು, ಆ ಮೂಲಕ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದರು.

ನಗರದಲ್ಲಿ ಫ್ರೆಂಚ್ ಟ್ರಾನ್ಸ್ ಲೇಟರ್ ಆಗಿದ್ದ ಮೊಹಮ್ಮದ್ ಆರೀಫ್, ಉತ್ತರ ಪ್ರದೇಶದ ಅಲಿಘರ್ ಮೂಲದ ನಿವಾಸಿ. ಎನ್ ಕ್ರಿಫ್ಟೇಡ್ ಸೋಷಿಯಲ್ ಮೀಡಿಯಾ ಮೂಲಕ ಆರೋಪಿಗಳು ಸಂವಹನ ನಡೆಸಿದ್ದ. ಸಿರಿಯಾ ಮೂಲದ ಹ್ಯಾಂಡ್ಲರ್ಸ್ ಜೊತೆ ಆನ್‌ಲೈನ್ ಮೂಲಕ ಸಂಪರ್ಕ ಹೊಂದಿದ್ದು, ಇಬ್ಬರು ಆರೋಪಿಗಳ ವಿರುದ್ಧ ಐಪಿಸಿ ಹಾಗೂ ಯುಎಪಿಎ ಸೆಕ್ಷನ್ ಅಡಿಯಲ್ಲಿ ತನಿಖೆ ನಡೆಸಿ ಸದ್ಯ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ