Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಿಟಿ ಪೊಲೀಸರ ಹೆಸರಲ್ಲಿ ಟ್ರಾಫಿಕ್ ಫೈನ್ ವಸೂಲಿ ಮಾಡ್ತಿದ್ದ ಆರೋಪಿಗಳ ಬಂಧನ

ಸಿಲಿಕಾನ್​ ಸಿಟಿಯಲ್ಲಿ ಕಳ್ಳರ ಹಾವಳಿ ಮೀತಿಮೀರಿದೆ. ಈ ಕುರಿತು ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮಕೈಗೊಂಡರು ಖದೀಮರ ಕೈಚಳಕಕ್ಕೆ ಬ್ರೇಕ್ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ​ಮೃತ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಐಡಿ ಕಾರ್ಡ್ ಬಳಸಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಖತರ್ನಾಕ್​ ಕಳ್ಳರನ್ನ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಸಿಟಿ ಪೊಲೀಸರ ಹೆಸರಲ್ಲಿ ಟ್ರಾಫಿಕ್ ಫೈನ್ ವಸೂಲಿ ಮಾಡ್ತಿದ್ದ ಆರೋಪಿಗಳ ಬಂಧನ
ಬಂಧಿತ ಆರೋಪಿಗಳು
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:May 23, 2024 | 6:49 PM

ಬೆಂಗಳೂರು, ಮೇ.23: ರಾಜ್ಯ ರಾಜಧಾನಿ ಬೆಂಗಳೂರಿ(Bengaluru)ನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಇದೀಗ ಬೆಂಗಳೂರು ಸಿಟಿ ಪೊಲೀಸರ ಹೆಸರಿನಲ್ಲಿ ಟ್ರಾಫಿಕ್ ಫೈನ್(Traffic Fine) ವಸೂಲಿ ಮಾಡುತ್ತಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇವರು ವ್ಯಾಟ್ಸಪ್ ಮೂಲಕ ಮೆಸೇಜ್ ಕಳಿಸಿ ದಂಡ ಕಟ್ಟಿಸಿಕೊಳ್ಳುತ್ತಿದ್ದರು. ಈ ಹಿನ್ನಲೆ ಮೂವರನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜನ್ ಕುಮಾರ್ ಪೋರ್ಬಿ, ಇಸ್ಮಾಯಿಲ್ ಅಲಿ ಹಾಗೂ ಸುಭಿರ್ ಮಲ್ಲಿಕ್ ಬಂಧಿತರು.

ಮೃತ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಐಡಿ ಕಾರ್ಡ್ ಬಳಸಿ ವಂಚನೆ

ಈ ಆರೋಪಿಗಳ ಖತರ್ನಾಕ್​ ಪ್ಲ್ಯಾನ್​ಗೆ ಪೊಲೀಸರೆ ದಂಗಾಗಿದ್ದಾರೆ. ಹೌದು, ಮೃತ ಹೆಡ್​ ಕಾನ್ಸ್​ಟೇಬಲ್​ವೊಬ್ಬರ ಐಡಿ ಕಾರ್ಡ್ ಬಳಸಿ ಟ್ರಾಫಿಕ್ ಫೈನ್ ಆ್ಯಪ್, ಸಾರಿಗೆ ಇಲಾಖೆ ವೆಬ್ ಸೈಟ್​ಗಳಿಂದ ಸವಾರರ ಮಾಹಿತಿ ಪಡೆದು, ಬಳಿಕ ತಾವು ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಎಂದು ಸವಾರರಿಗೆ ನಕಲಿ ಐಡಿ ಕಾರ್ಡ್ ಕಳಿಸಿ, ಬಳಿಕ ಯುಪಿಐ ಐಡಿ ಕಳಿಸಿ ಮೊಬೈಲ್ ಮೂಲಕವೇ ದಂಡ ವಸೂಲಿ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಮೃತ ಹೆಡ್ ಕಾನ್ಸ್ ಟೇಬಲ್ ಮಗಳು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಅನ್ವಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಖರೀದಿ ನೆಪದಲ್ಲಿ ಶಾಪ್‌ಗೆ ಬಂದು 15 ಕೆ.ಜಿ ತುಪ್ಪ ಕದ್ದ ಕಳ್ಳರು; ವಿಡಿಯೋ ವೈರಲ್​

ಅಂಗನವಾಡಿ ಕಟ್ಟಡ ಬಿದ್ದು ಹಸು ಸಾವು

ಕೋಲಾರ: ಮುಳಬಾಗಿಲು ತಾಲೂಕಿನ ಮರವೇಮನೆ ಗ್ರಾಮದಲ್ಲಿ ಮಳೆಗೆ ನಿನ್ನೆ(ಮೇ.22) ರಾತ್ರಿ ಅಂಗನವಾಡಿ ಕಟ್ಟಡ ಬಿದ್ದು ಹಸುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ನಾರಾಯಣಪ್ಪ ಎಂಬುವರಿಗೆ ಸೇರಿದ 80 ಸಾವಿರ ‌ಮೌಲ್ಯದ ಸೀಮೆ ಹಸು ಇದಾಗಿದ್ದು, ಅದೃಷ್ಟವಶಾತ್ ರಾತ್ರಿ ವೇಳೆ ಕಟ್ಟಡ ಕುಸಿದು ಬಿದ್ದಿದ್ದರಿಂದ ಅನಾಹುತ ತಪ್ಪಿದೆ. ಈ ಕುರಿತು ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Thu, 23 May 24

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ