AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ: 35 ಲಕ್ಷ ರೂ. ಮೌಲ್ಯದ ರಕ್ತ ಚಂದನ ವಶಕ್ಕೆ

ಹರಿಯುವ ನದಿಯಲ್ಲಿ ಆಟೋ ಸಮೇತ ಆಟೋ ಚಾಲಕ ಕೊಚ್ಚಿ ಹೋಗಿರುವಂತಹ ಘಟನೆ ಕರ್ನಾಟಕ ಗಡಿನಾಡು ಆಂದ್ರದ ಅನಂತಪುರ ಜಿಲ್ಲೆ ಹಿಂದೂಪುರ ತಾಲೂಕಿನ ಕೊಡಿಕೊಂಡ ಗ್ರಾಮದ ಬಳಿ ನಡೆದಿದೆ.

ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ: 35 ಲಕ್ಷ ರೂ. ಮೌಲ್ಯದ ರಕ್ತ ಚಂದನ ವಶಕ್ಕೆ
ಬಂಧಿತ ಆರೋಪಿಗಳು ಮತ್ತು 35 ಲಕ್ಷ ರೂ ಮೌಲ್ಯದ ಸ್ಯಾಂಡಲ್ ವಶಕ್ಕೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 01, 2022 | 3:01 PM

ಆನೇಕಲ್: ರಕ್ತ ಚಂದನ (red sandal) ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದು, 35 ಲಕ್ಷ ರೂ ಮೌಲ್ಯದ 750 ಕೆಜಿ ರಕ್ತ ಚಂದನ ವಶಕ್ಕೆ ಪಡೆಯಲಾಗಿದೆ. ಸರ್ಜಾಪುರದ ಬಷೀರ್ ಅಹಮದ್, ಅಡಿಗಾರ ಕಲ್ಲಹಳ್ಳಿಯ ನಿಜಾಮ್ ಹಾಗೂ ತೋಷಿದ್ ಬಂಧಿತ ಆರೋಪಿಗಳು. ಕರ್ನಾಟಕದ ಗಡಿ ತಮಿಳುನಾಡಿನ ಬಾಗಲೂರಿನಿಂದ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದ ಆಸಾಮಿಗಳು, ಖಚಿತ ಮಾಹಿತಿ ಮೇರೆಗೆ ಆನೇಕಲ್ ಉಪವಿಭಾಗ ಡಿವೈಎಸ್ಪಿ ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳ ಬಂಧನ ಮಾಡಲಾಗಿದೆ. ಟಾಟಾ ಏಸ್ ವಾಹನದಲ್ಲಿ ಆಸಾಮಿಗಳು ರಕ್ತ ಚಂದನ ಸಾಗಾಟ ಮಾಡುತ್ತಿದ್ದರು. ಹೆಬ್ಬಗೋಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ; ಮಾಜಿ ಗೃಹಸಚಿವ ಎಂ.ಬಿ.ಪಾಟೀಲ್ ಮನೆಯಲ್ಲಿ ನಡೆದಿದ್ದ ಕಳವು ಪ್ರಕರಣ: ಕೆಲಸಗಾರ ಅರೆಸ್ಟ್

ಹರಿಯುವ ನದಿಯಲ್ಲಿ ಕೊಚ್ಚಿ ಹೋದ ಆಟೊ ಚಾಲಕ

ಚಿಕ್ಕಬಳ್ಳಾಪುರ: ಹರಿಯುವ ನದಿಯಲ್ಲಿ ಆಟೋ ಸಮೇತ ಆಟೋ ಚಾಲಕ ಕೊಚ್ಚಿ ಹೋಗಿರುವಂತಹ ಘಟನೆ ಕರ್ನಾಟಕ ಗಡಿನಾಡು ಆಂದ್ರದ ಅನಂತಪುರ ಜಿಲ್ಲೆ ಹಿಂದೂಪುರ ತಾಲೂಕಿನ ಕೊಡಿಕೊಂಡ ಗ್ರಾಮದ ಬಳಿ ನಡೆದಿದೆ. ಸುಬ್ಬರಾಯಪೇಟೆ ನಿವಾಸಿ ವಿಜಯ್ ನದಿಯಲ್ಲಿ ಕೊಚ್ಚಿ ಹೋದ ಆಟೋ ಚಾಲಕ. ಚಿತ್ರವತಿ ನದಿ ತುಂಬಿಯಲ್ಲಿ ಘಟನೆ ನಡೆದಿದೆ. ಆಂಧ್ರ ಚಿಲಮತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಬಾರ್ ಕ್ಯಾಷಿಯರ್ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಎಂಆರ್​ಪಿ‌ ದರದಲ್ಲಿ ಮದ್ಯ ಮಾರಾಟ ಮಾಡುವುದಿಲ್ಲ ಎಂದು ಹೇಳಿದ್ದಕ್ಕೆ ಮೂವರು ವ್ಯಕ್ತಿಗಳು ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ವಿಜಯ ನಗರ ಬಡಾವಣೆಯಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಬಾರ್​ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದನ್ನು ಆಧರಿಸಿ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭಾನುವಾರ ಮಧ್ಯಾಹ್ನ ವಿಜಯ ನಗರ ಬಡಾವಣೆಯಲ್ಲಿರುವ ಬಾರ್​ಗೆ ಬಂದ ಮೂವರು ವ್ಯಕ್ತಿಗಳು ಎಂಆರ್​ಪಿ ದರದಲ್ಲಿ ಮದ್ಯ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಬಾರ್ ಕ್ಯಾಷಿಯರ್ ಒಪ್ಪದಿದ್ದಾಗ ಆಕ್ರೋಶಗೊಂಡ ಮೂವರು ಕುರ್ಚಿ ಮತ್ತು ದೊಣ್ಣೆಗಳಿಂದ ಕ್ಯಾಷಿಯರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ಎಷ್ಟೇ ಬೇಡಿಕೊಂಡರೂ ಬಿಡದ ಪುಂಡರು ಹಿಗ್ಗಾಮುಗ್ಗ ಥಳಿಸಿದ್ದಾರೆ.

ಇದನ್ನೂ ಓದಿ: Chikkaballapur News: ಸಿಕ್ಕಸಿಕ್ಕವರಿಗೆ ಲಾಂಗ್‌ ಬೀಸಿದ್ದ ರೌಡಿಶೀಟರ್​ ಅರ್ಜುನ್​ ಬಂಧನ

ಪುಂಡರ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಕ್ಯಾಷಿಯರ್ ಕುಸಿದುಬಿದ್ದಿದ್ದು, ಕೂಡಲೇ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಸಂಬಂಧ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿ ಮುಂದಿಟ್ಟುಕೊಂಡು ದುಷ್ಕರ್ಮಿಗಳ ಬಂಧನಕ್ಕೆ ತನಿಖೆ ಕೈಗೊಂಡಿದ್ದಾರೆ.

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ